Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲಾಡಳಿತದಿಂದ ರೈತರ ಕೃಷಿ ಚಟುವಟಿಕೆಗೆ...

ಜಿಲ್ಲಾಡಳಿತದಿಂದ ರೈತರ ಕೃಷಿ ಚಟುವಟಿಕೆಗೆ ಅಗತ್ಯ ಸಿದ್ಧತೆ: ಚಿಕ್ಕಮಗಳೂರು ಡಿಸಿ

ವಾರ್ತಾಭಾರತಿವಾರ್ತಾಭಾರತಿ26 May 2018 7:54 PM IST
share
ಜಿಲ್ಲಾಡಳಿತದಿಂದ ರೈತರ ಕೃಷಿ ಚಟುವಟಿಕೆಗೆ ಅಗತ್ಯ ಸಿದ್ಧತೆ: ಚಿಕ್ಕಮಗಳೂರು ಡಿಸಿ

ಚಿಕ್ಕಮಗಳೂರು, ಮೇ 26: ವಾಯುಬಾರ ಕುಸಿತದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಜಿಲ್ಲೆಯ ಮಲೆನಾಡು ಹಾಗೂ ಬಯಲುಸೀಮೆ ತಾಲೂಕು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ಜಿಲ್ಲಾಡಳಿತ ರೈತರ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಬೇಕಾಗಿರುವ ರಸಗೊಬ್ಬರ, ಬಿತ್ತನೆ ಬೀಜಗಳ ಪೂರೈಕೆಗೆ ಅಗತ್ಯವಾಗಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ  ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದ್ದಾರೆ.

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೂನ್ ತಿಂಗಳ ಆರಂಭದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದ್ದು, ಕಳೆದ ಒಂದು ತಿಂಗಳಲ್ಲಿ ವಾಯುಬಾರ ಕುಸಿತದ ಪರಿಣಾಮ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಧಾರಾಕಾರ ಮಳೆಯಾಗಿದೆ. ಇದರಿಂದಾಗಿ ಜಿಲ್ಲೆಯಾದ್ಯಂತ ಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ನೀರಿನ ಅಭಾವದ ಗಂಭೀರ ಪ್ರಕರಣಗಳು ವರದಿಯಾಗಿಲ್ಲ. ಉತ್ತಮ ಮಳೆಯಿಂದಾಗಿ ಜಿಲ್ಲೆಯಾದ್ಯಂತ ರೈತರು ಕೃಷಿ ಚಟುವಟಿಕೆಗಳತ್ತ ಮುಖಮಾಡಿದ್ದು, ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ರೈತರಿಗೆ ಅಗತ್ಯವಾಗಿ ಬೇಕಾಗಿರುವ ಬಿತ್ತನೆ ಬೀಜ ಹಾಗೂ ಗೊಬ್ಬರಗಳ ಪೂರೈಕೆಗೆ ಜಿಲ್ಲಾಡಳಿತದ ವತಿಯಿಂದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಮಿಯ ಗುಣ ಆಧರಿಸಿ ಕೃಷಿ ಚಟುವಟಿಕೆ ಕೈಗೊಳ್ಳಲು ಕೃಷಿ ಇಲಾಖೆ ಮೂಲಕ ರೈತರಿಗೆ ಸೂಚಿಸಲಾಗುತ್ತಿದ್ದು, ಮಣ್ಣಿನ ಗುಣಕ್ಕಾನುಸಾರವಾಗಿ ಬೆಳೆ ಬೆಳೆಯಲು ರೈತರನ್ನು ಪ್ರೋತ್ಸಾಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಅಗತ್ಯ ಬಿತ್ತನೆ ಬೀಜಗಳನ್ನು ಆಯಾ ತಾಲೂಕು ವ್ಯಾಪ್ತಿಯ ಹೋಬಳಿ ಕೇಂದ್ರಗಳಲ್ಲಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಶೇಖರಣೆ ಮಾಡಲಾಗಿದೆ. ಅಲ್ಲದೇ ಗೊಬ್ಬರ ಕೊರತೆಯನ್ನು ನೀಗಿಸುವ ಸಲುವಾಗಿ ಈಗಾಗಲೇ ಅಗತ್ಯವಿರುವಷ್ಟು ಗೊಬ್ಬರ ಸಂಗ್ರಹ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಕಳೆದ ಒಂದು ತಿಂಗಳಲ್ಲಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು, ಈ ವೇಳೆ ಆಸ್ತಿಪಾಸ್ತಿ ನಷ್ಟ, ಬೆಳೆ ಹಾನಿ, ಪ್ರಾಣ ಹಾನಿ ಬಗ್ಗೆ ವರದಿ ಪಡೆಯಲಾಗಿದೆ. ಈ ಸಂಬಂಧ ಪರಿಶೀಲಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದ ಅವರು, ರೈತರು ಬೆಳೆಯುವ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಸೂಚಿಸಲಾಗಿದ್ದು, ಜೂನ್ ಹಾಗೂ ಜುಲೈ ತಿಂಗಳಲ್ಲಿ ಬೆಳೆ ವಿಮೆ ಮಾಡಿಸಲು ಕಾಲಾವಕಾಶ ನೀಡಲಾಗಿದೆ. ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಅಗತ್ಯವಾಗಿ ಬೇಕಾಗಿರುವ ಪಹಣಿ ಸೇರಿದಂತೆ ಸರಕಾರಿ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ನೀಡುವಂತೆ ಆಯಾ ತಾಲೂಕುಗಳ ತಹಶೀಲ್ದಾರ್ ಈಗಾಗಲೇ ಸೂಚನೆ ನೀಡಲಾಗಿದೆ. ಮಳೆಯಿಂದ ಜನ ಜಾನುವಾರುಗಳಿಗೆ ತೊಂದರೆ ಆಗದಂತೆ ಮುಂಜಾಗ್ರತ ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು. 

ಚಿಕ್ಕಮಗಳೂರು-ಸಕಲೇಶಪುರ ರೈಲು ಯೋಜನೆಗೆ ಭೂಸ್ವಾದೀನ ಪ್ರಕ್ರಿಯೆ ಆರಂಭ: 
ಚಿಕ್ಕಮಗಳೂರು ಸಕಲೇಶಪುರ ರೈಲ್ವೇ ಯೋಜನೆಗೆ ಭೂ ಸ್ವಾಧೀನ ಪ್ರಕ್ರಿಯೇ ನಡೆದಿದೆ. ಚಿಕ್ಕಮಗಳೂರು ವ್ಯಾಪ್ತಿಯಲ್ಲಿ  ಸುಮಾರು 131 ಎಕರೆ ಜಮೀನನ್ನು ಭೂ ಸ್ವಾಧೀನ ಮಾಡಲಾಗಿದೆ. ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತರೊಂದಿಗೆ ಅನೇಕ ಬಾರಿ ಸಭೆ ನಡೆಸಿ ರೈತರ ಬೇಡಿಕೆಗಳನ್ನು ಆಲಿಸಿದ್ದೇವೆ. ರೈತರು ಹೆಚ್ಚಿನ ಪರಿಹಾರ, ಪರ್ಯಾಯ ಜಮೀನು ಅಥವಾ ರೈಲ್ವೇ ಇಲಾಖೆಯಲ್ಲಿ ಕೆಲಸ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಹೊಸ ಭೂಸ್ವಾಧೀನ ಕಾಯ್ದೆ 2013ರ ಅನ್ವಯ ಸರ್ಕಾರದ ನಿರ್ದೇಶನದಂತೆ ಭೂಮಿಗೆ ಪರಿಹಾರ ನೀಡಲಾಗುವುದು. ಸ್ವಂತ ಜಮೀನು ಶೇ.50ರಷ್ಟು ಕಳೆದುಕೊಳ್ಳುತ್ತಾರೋ ಅವರಿಗೆ ಜಮೀನು ಪರಿಹಾರದ ಜೊತೆಗೆ ಐದು ಲಕ್ಷ ರು. ನೀಡಲಾಗುವುದು. ಮನೆ ಇದ್ದಲ್ಲಿ ಇಂದಿರಾ ಆವಾಸ್ ಯೋಜನೆ ಮನೆಯ ಮೌಲ್ಯದಲ್ಲಿ ಮೊತ್ತ ನೀಡಲಾಗುವುದು. ಜಮೀನಿನಲ್ಲಿರುವ ಕಟ್ಟಡ, ಕೊಳವೆ ಬಾವಿ, ಬೆಲೆ ಬಾಳುವ ಮರಗಳೂ ಸೆರಿದಂತೆ ಇತರ ಆಸ್ತಿಪಾಸ್ತಿಗಳಿದ್ದಲ್ಲಿ ಅವುಗಳಿಗೆ ನಿಗದಿತ ಮೌಲ್ಯದ ಪರಿಹಾರ ನೀಡಲಾಗುವುದು ಜಿಲ್ಲಾಧಿಕಾರಿ ಶ್ರೀ ರಂಗಯ್ಯ ತಿಳಿಸಿದರು.

ರೈತರ ಬೇಡಿಕೆಯಂತೆ ರೈಲ್ವೇ ಇಲಾಖೆಯಲ್ಲಿ ಕೆಲಸ ನೀಡಲು ಸಾಧ್ಯವಿಲ್ಲ. ರೈಲ್ವೇ ಯೋಜನೆಯಲ್ಲಿ ಉದ್ಯೋಗ ಸೃಷ್ಟಿಯಾದರೇ ಮಾತ್ರ ರೈಲ್ವೇ ಇಲಾಖೆಯಲ್ಲಿ ಉದ್ಯೋಗ ನೀಡಲು ಸಾಧ್ಯ. ಆದರೆ ಇಲ್ಲಿ ರೈಲ್ವೇ ಸಂಪರ್ಕ ಕಲ್ಪಿಸುವುದರಿಂದ ಯಾವುದೇ ಹುದ್ದೆ ಸೃಷ್ಟಿಯಾಗುವುದಿಲ್ಲ. ರೈಲ್ವೇ ಯೋಜನೆಯಿಂದ ಭೂಮಿ ಕಳೆದುಕೊಳ್ಳುತ್ತಿರುವ ರೈತರು ಹೆಚ್ಚಿನ ಪರಿಹಾರದ ಬೇಡಿಕೆ ಇಟ್ಟಿದ್ದಾರೆ. ಕಾನೂನಾತ್ಮಕವಾಗಿ ಪರಿಹಾರ ನೀಡಲು ಸಾಧ್ಯವೆಂದು ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ. ರೈತರು ಇದಕ್ಕೆ ಒಪ್ಪದಿದ್ದಲ್ಲಿ ಕಾನೂನಿನ ಆಡಿಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಲಾಗುದು ಎಂದು ಅವರು ತಿಳಿಸಿದರು.

ಮಳಲೂರು ಏತ ನೀರಾವರಿ ಯೋಜನೆ ಸಂಬಂಧ ರೈತರ ಸಭೆ ನಡೆಸಲಾಗಿದೆ. ನೂರು ಎಕರೆ ಪ್ರದೇಶದ ಭೂಮಿಯನ್ನು ನೇರವಾಗಿ ಜಿಲ್ಲಾಧಿಕಾರಿ ಖರೀದಿ ಮಾಡಲು ಅವಕಾಶವಿದೆ. ಭೂಮಿ ಖರೀದಿಗೆ ರೈತರ ಸಭೆ ನಡೆಸಲಾಗಿದೆ. ರೈತರು ಹೆಚ್ಚಿನ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದಾರೆ. ಏತ ನೀರಾವರಿ ಯೋಜನೆಯಿಂದ ರೈತರ ಜಮೀನುಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಸಿಗಲಿದೆ. ಇದರಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸುವ ಬಗ್ಗೆಯೂ ಮನವರಿಕೆ ಮಾಡಿ ಕಾಮಗಾರಿ ಪ್ರಾರಂಭಕ್ಕೆ ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ. ಕೆಲ ರೈತರು ಹೆಚ್ಚಿನ ಪರಿಹಾರ ನೀಡುವಂತೆ ಒತ್ತಡ ಹೇರುತ್ತಿದ್ದಾರೆ. ಶೇ.70ರಷ್ಟು ರೈತರು ಯೋಜನೆ ಕೈಗೊಳ್ಳಲು ಒಪ್ಪಿಗೆ ಪತ್ರವನ್ನು ನೀಡಿದ್ದಾರೆ. ಶೇ.30ರಷ್ಟು ರೈತರು ಒಪ್ಪಿಗೆ ಪತ್ರ ನೀಡದೆ ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಸರಕಾರ ನೀಡುವ ಪರಿಹಾರಕ್ಕೆ ರೈತರು ಒಪ್ಪಿಗೆ ಸೂಚಿಸಿದ ಪಕ್ಷದಲ್ಲಿ ಕಾನೂನಾತ್ಮಕವಾಗಿ ಭೂ ಸ್ವಾಧೀನ ಪಡೆಸಿಕೊಂಡು ನ್ಯಾಯಲಯದಲ್ಲಿ ದಾವೆ ಹೂಡಿ ಕಾಮಗಾರಿಗೆ ಚಾಲನೆ ನೀಡಲಾಗುವುದು.

- ಎಂ.ಕೆ.ಶ್ರೀರಂಗಯ್ಯ, ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X