Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧರ್ಮ, ಭಾಷೆಗಳ ಒಕ್ಕೂಟ ವ್ಯವಸ್ಥೆಯಲ್ಲಿ...

ಧರ್ಮ, ಭಾಷೆಗಳ ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನದ ಶ್ರೇಷ್ಟತೆಯಿದೆ: ಪ್ರೊ.ರವಿವರ್ಮ ಕುಮಾರ್

ವಾರ್ತಾಭಾರತಿವಾರ್ತಾಭಾರತಿ26 May 2018 9:08 PM IST
share
ಧರ್ಮ, ಭಾಷೆಗಳ ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನದ ಶ್ರೇಷ್ಟತೆಯಿದೆ: ಪ್ರೊ.ರವಿವರ್ಮ ಕುಮಾರ್

ಧಾರವಾಡ,ಮೇ.26: ಸಂವಿಧಾನದ ಶ್ರೇಷ್ಠತೆ ಇರುವುದು ಅದರ ಧರ್ಮ, ಭಾಷೆ, ಜಾತಿಗಳ ಒಕ್ಕೂಟ ವ್ಯವಸ್ಥೆಯಲ್ಲಿ. ಇದು ರಾಜ್ಯಗಳ ಒಕ್ಕೂಟ ಅಲ್ಲ ಎಂದು ಪ್ರೊ.ರವಿವರ್ಮ ಕುಮಾರ್ ಹೇಳಿದರು.

ಧಾರವಾಡದ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ನಡೆದ ಮೇ ಸಾಹಿತ್ಯ ಸಮ್ಮೇಳನದಲ್ಲಿ ‘ಬಹುತ್ವ ಭಾರತ- ಇಂದು ನಾಳೆ’ ಎಂಬ ವಿಷಯದ ಕುರಿತಾಗಿ ಅವರು ಮಾತನಾಡಿದರು.

ನಿಮಗೆಲ್ಲಾ ಗೊತ್ತಿರುವ ಹಾಗೆ ಸಂವಿಧಾನದ ಶ್ರೇಷ್ಠತೆ ಇರುವುದು ಅದರ ಧರ್ಮಗಳ ಒಕ್ಕೂಟದಲ್ಲಿ. ಭಾಷೆಗಳ ಒಕ್ಕೂಟದ ವ್ಯವಸ್ಥೆಯಲ್ಲಿ ಮತ್ತು ಜಾತಿಗಳ ಒಕ್ಕೂಟದ ವ್ಯವಸ್ಥೆಯಲ್ಲಿ. ಇದು ರಾಜ್ಯಗಳ ಒಕ್ಕೂಟ ಅಲ್ಲ. ಇದೇ ಸಂವಿಧಾನದ ಭದ್ರ ಬುನಾದಿ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು '1950 ಜನವರಿ 26ರಂದು ಭಾರತದಲ್ಲಿ ಒಬ್ಬ ಮನುಷ್ಯನಿಗೆ ಒಂದು ಮತ-ಒಬ್ಬ ಮನುಷ್ಯನಿಗೆ ಒಂದು ಮೌಲ್ಯ ಎಂಬ ಕ್ರಾಂತಿಕಾರಕ ಬದಲಾವಣೆ ಬಂದಿದೆ. ಇದೇ ಸಮಾನತೆ. ಇವತ್ತು ನಾವು ರಾಜಕೀಯವಾಗಿ ಸಮಾನತೆಯನ್ನು ಸಾಧಿಸಿದ್ದೇವೆ. ಈ ರಾಜಕೀಯ ಸಮಾನತೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಸಮಾನತೆಯನ್ನು ತೊಲಗಿಸಿ ರಾಜಕೀಯ, ಸಾಮಾಜಿಕ, ಆರ್ಥಿಕ ಸಮಾನತೆಯನ್ನು ನೀಡದೇ ಹೋದರೆ, ಬಹಳ ಕಷ್ಟ ಪಟ್ಟು ಕಟ್ಟಿದ ಈ ಸೌಧವನ್ನು ಜನರೇ ಧ್ವಂಸಗೊಳಿಸುತ್ತಾರೆ’ ಎಂದು ಹೇಳಿದ್ದರು. ಇಂತಹ ಸ್ಥಿತಿ ಈಗ ಮತ್ತೆ ಬಂದಿದೆ. ಈ ಮಾತನ್ನು ನಾವು ನೆನಪು ಮಾಡಿಕೊಳ್ಳಬೇಕು. ಈ ಸಂವಿಧಾನ ಒಂದು ಸಾಮಾಜಿಕ-ಆರ್ಥಿಕ ಗ್ರಂಥ ಎಂದು ಹೇಳಿದರು..

ಬೇರೆ ಎಲ್ಲಾ ದೇಶದ ಸಂವಿಧಾನ ಸ್ವಾತಂತ್ರ, ಸಮಾನತೆ ಭ್ರಾತೃತ್ವವನ್ನು ಹೇಳುತ್ತದೆ. ಆದರೆ ಭಾರತದ ಸಂವಿಧಾನ ಎಲ್ಲದಕ್ಕೂ ಮುನ್ನ ನ್ಯಾಯದ ಬಗ್ಗೆ ಮಾತನಾಡುತ್ತದೆ. ಈ ದೇಶದ ಎಲ್ಲಾ ಸ್ಥರಗಳಲ್ಲಿಯೂ ಜಾತಿಯ ಅಸಮಾನತೆ ತಾಂಡವವಾಡುತ್ತಿದೆ. ಈ ದೇಶದಲ್ಲಿ 'ಒಂದು ಮನುಷ್ಯ ಒಂದು ಮೌಲ್ಯ' ಎಂದು ಬಂತು. ಆದರೆ ಅದರಿಂದ ಸಮಾನತೆ ಎಂಬ ಬಹಳ ಉದಾತ್ತವಾದ ಬದಲಾವಣೆಯತ್ತ ಒಂದು ಹೆಜ್ಜೆಯೂ ಮುಂದೆ ಹೋಗಿಲ್ಲ. ಸಾಮಾಜಿಕ ಅಸಮಾನತೆಯನ್ನು ಹರಡದಂತೆ ತಡೆಯಲು ಸಾಮಾಜಿಕ ನ್ಯಾಯವನ್ನು ಪ್ರತಿಸ್ಠಾಪಿಸಲು ಮೀಸಲಾತಿಯನ್ನು ತರಬೇಕಾಯಿತು ಎಂದು ಹೇಳಿದರು.

ಬಹುತ್ವವನ್ನು ಉಳಿಸಿಕೊಳ್ಳಲು ಇರುವ ಸೂತ್ರವೆಂದರೆ ಬೇರೆ ಬೇರೆ ದೇಶಗಳಲ್ಲಿ ಅಸಮಾನತೆಯನ್ನು ತಗ್ಗಿಸಲು ಬಳಸಿರುವ ಮೀಸಲಾತಿಯನ್ನು ಇಲ್ಲಿ ಉಳಿಸಿಕೊಳ್ಳುವುದು. ಪೂರೋಹಿತ ಶಾಹಿಗಳಿಗೆ ಹಲವಾರು ಹುದ್ದೆಗಳಲ್ಲಿ ಶೇ. ನೂರರಷ್ಟು ಮೀಸಲಾತಿ ಇದೆ. ಆದರೆ ಅದನ್ನು ಯಾರೂ ಪ್ರಶ್ನೆ ಮಾಡುತ್ತಿಲ್ಲ. ಮೀಸಲಾತಿಯೆಂದರೆ ಒಬ್ಬರ ಹೊಟ್ಟೆ ಮೇಲೆ ಹೊಡೆದು ಇನ್ನೊಬ್ಬರ ಹೊಟ್ಟೆ ತುಂಬಿಸರು ಇರುವುದು ಅಲ್ಲ. ಬದಲಿಗೆ ಅದು ಒಂದು ಜಾತಿಗೆ ಸಲ್ಲಬೇಕಾದ ನ್ಯಾಯಯುತವಾದ ಸವಲತ್ತನ್ನು ರಕ್ಷಣೆ ಮಾಡಲು ಇರುವ ಪರಿಕರ. ಸಂವಿಧಾನದ ನಾಲ್ಕನೆ ಭಾಗವಾಗಿರುವ ‘ರಾಜ್ಯ ನಿರ್ದೇಶನ ತತ್ವಗಳ'ನ್ನು ನಾವು ಉಳಿಸಿಕೊಳ್ಳಬೇಕು. ಹಸಿವಿನ ನಿವಾರಣೆಯಾಗಬೇಕು. ಅಗತ್ಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಇಟ್ಟುಕೊಳ್ಳುವಂತಿಲ್ಲ.

ಬಾಲಕಾರ್ಮಿಕ ಪದ್ಧತಿ ರದ್ದಾಗಬೇಕು. ಇಂತಹ ಹತ್ತು ಹಲವು ಕ್ರಾಂತಿಕಾರಕ ಅಂಶಗಳನ್ನು ಇದು ಹೇಳುತ್ತದೆ. ಹಾಗಾಗಿ ಸಿದ್ದು ಸರ್ಕಾರ ಇರಲಿ, ಮೋದಿ ಅಥವಾ ಯಡಿಯೂರಪ್ಪ ಸರ್ಕಾರ ಯಾವುದೇ ಇರಲಿ. ರಾಜ್ಯ ನಿರ್ದೇಶನ ತತ್ವವನ್ನು ಜಾರಿಮಾಡಬೇಕು. ಆದರೆ ಇಂದು ಅಂಬಾನಿ ಆದಾನಿ ಅವರ ಆಸ್ತಿ ಪಾಸ್ತಿ ಎಷ್ಟಿದೆ ಎಂದು ಇಡೀ ದೇಶಕ್ಕೆ ಗೊತ್ತಿರುವ ಅಂಕಿಅಂಶವಾಗಿದೆ. ಹೀಗೆ ಯಾಕಾಯಿತು? ಯಾಕೆಂದರೆ ಅಧಿಕಾರಕ್ಕೆ ಬರುವ ಯಾವ ರಾಜಕಾರಣಿಯೂ ಸಂವಿಧಾನವನ್ನು ಅನುಷ್ಠಾನಕ್ಕೆ ಕೆಲಸ ಮಾಡುತ್ತಿಲ್ಲ ಎಂದು ವಿಷಾಧಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X