Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದ ನಿವೃತ್ತ ಗುಪ್ತಚರ ಅಧಿಕಾರಿ ಜೊತೆ...

ಭಾರತದ ನಿವೃತ್ತ ಗುಪ್ತಚರ ಅಧಿಕಾರಿ ಜೊತೆ ಪುಸ್ತಕ ಬರೆದ ಮಾಜಿ ಐಎಸ್‌ಐ ವರಿಷ್ಠನಿಗೆ ಪಾಕ್ ಸೇನೆ ಸಮನ್ಸ್

ವಾರ್ತಾಭಾರತಿವಾರ್ತಾಭಾರತಿ26 May 2018 10:49 PM IST
share
ಭಾರತದ ನಿವೃತ್ತ ಗುಪ್ತಚರ ಅಧಿಕಾರಿ ಜೊತೆ ಪುಸ್ತಕ ಬರೆದ ಮಾಜಿ ಐಎಸ್‌ಐ ವರಿಷ್ಠನಿಗೆ ಪಾಕ್ ಸೇನೆ ಸಮನ್ಸ್

ಇಸ್ಲಾಮಾಬಾದ್,ಮೇ 26: ಭಾರತದ ಬೇಹುಗಾರಿಕಾ ಸಂಸ್ಥೆ ‘ರಾ’ದ ಮಾಜಿ ಅಧಿಕಾರಿಯೊಬ್ಬರ ಬರೆದ ವಿವಾದಾತ್ಮಕ ಪುಸ್ತಕಕ್ಕೆ ಸಹಲೇಖಕರಾಗಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐನ ಮಾಜಿ ವರಿಷ್ಠ(ನಿವೃತ್ತಿ) ಅಸಾದ್ ದುರಾನಿಯವರಿಗೆ ಪಾಕಿಸ್ತಾನ ಸೇನೆಯು ಶನಿವಾರ ಸಮನ್ಸ್ ಜಾರಿಗೊಳಿಸಿದೆ.

  ‘ಸ್ಪೈ ಕ್ರೊನಿಕಲ್ಸ್’ ಕೃತಿಯಲ್ಲಿ ತಾವು ವ್ಯಕ್ತಪಡಿಸಿದ ಅನಿಸಿಕೆಗಳ ಕುರಿತು ತಮ್ಮ ನಿಲುವನ್ನು ವಿವರಿಸುವಂತೆ ಅಸ್ಸಾದ್ ದುರಾನಿಯವರಿಗೆ ಸೂಚನೆ ನೀಡಲಾಗಿದೆ. ಕೃತಿಯಲ್ಲಿ ಅಸ್ಸಾದ್ ಅವರ ಅನಿಸಿಕೆಗಳನ್ನು ಸೇವೆಯಲ್ಲಿರುವ ಹಾಗೂ ನಿವೃತ್ತಿ ಹೊಂದಿರುವ ಎಲ್ಲಾ ಸೇನಾ ಸಿಬ್ಬಂದಿಗೆ ಅನ್ವಯವಾಗುವಂತಹ ಸೇನಾ ನೀತಿ ಸಂಹಿತೆಯ ಉಲ್ಲಂಘನೆಯೆಂದು ಪರಿಗಣಿಸಲಾಗುವುದು’’ ಎಂದು ಡಿಜಿ ಐಎಸ್‌ಪಿಆರ್ ಮೇಜರ್ ಜನರಲ್ ಆಸೀಫ್ ಗಫೂರ್ ಟ್ವೀಟ್ ಮಾಡಿರುವುದನ್ನು ಉಲ್ಲೇಖಿಸಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

 ಭಾರತದ ಬೇಹುಗಾರಿಕಾ ಸಂಸ್ಥೆ ‘ರಾ’ ದ ವರಿಷ್ಠ ಅಮರ್‌ಜಿತ್ ಸಿಂಗ್ ದುಲತ್ ಹಾಗೂ ಭಾರತೀಯ ಪತ್ರಕರ್ತ ಆದಿತ್ಯ ಸಿನ್ಹಾ ಜೊತೆಗೂಡಿ ಬರೆದಿದ್ದ ‘ದಿ ಸ್ಪೈ ಕ್ರಾನಿಕಲ್ಸ್: ರಾ, ಐಎಸ್‌ಐ ಆ್ಯಂಡ್ ದಿ ಇಲ್ಯೂಶನ್ ಆಫ್ ಪೀಸ್’ ಕೃತಿಗೆ ದುರಾನಿಯವರು ಸಹಲೇಖಕರಾಗಿದ್ದರು.

  ದುರಾನಿಯವರು ಈ ಕೃತಿಯಲ್ಲಿ ಆಗಿನ ಪಾಕ್ ಪ್ರಧಾನಿ ಯೂಸುಫ್ ರಾಝಾ ಗಿಲಾನಿ ಅವರಿಗೆ ಅಬೊಟಾಬಾದ್‌ನಲ್ಲಿ ಉಸಮಾಬಿನ್ ಲಾದೆನ್‌ನ ಅಡಗುದಾಣದ ಮೇಲೆ ಅಮೆರಿಕದ ನೇವಿ ಸೀಲ್ಸ್ ಪಡೆಗಳು ನಡೆಸಿದ ಕಾರ್ಯಾಚರಣೆಯ ಸಂಪೂರ್ಣ ಅರಿವಿತ್ತು ಹಾಗೂ ಈ ವಿಷಯವಾಗಿ ಮೊದಲೇ ಅಮೆರಿಕ ಹಾಗೂ ಪಾಕಿಸ್ತಾನದ ಸರಕಾರಗಳ ನಡುವೆ ವಿಶೇಷವಾದ ಡೀಲ್ ಕೂಡಾ ಏರ್ಪಟ್ಟಿತ್ತು ಎಂದು ದುರಾನಿ ಅಭಿಪ್ರಾಯಿಸಿದರು.

  ಬೇಹುಗಾರಿಕೆಯ ಆರೋಪದಲ್ಲಿ ಪಾಕ್‌ನಲ್ಲಿ ಬಂಧಿತರಾಗಿರುವ ಮಾಜಿ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣವನ್ನು ಪಾಕಿಸ್ತಾನವು ತಪ್ಪಾಗಿ ನಿಭಾಯಿಸಿದೆ ಎಂದು ದುರಾನಿ ಈ ಕೃತಿಯಲ್ಲಿ ಪ್ರತಿಪಾದಿಸಿದ್ದರು.

 ಈ ಮಧ್ಯೆ ಮಾಜಿ ಬೇಹುಗಾರಿಕಾ ವರಿಷ್ಠ ದುರ್ರಾನಿಯವರಿಗೆ ಸಮನ್ಸ್ ಕಳುಹಿಸಿರುವ ತನ್ನ ಕ್ರಮವನ್ನು ಸೇನೆಯು ಸಮರ್ಥಿಸಿದ್ದು, ಯಾರೂ ಕೂಡಾ ಕಾನೂನಿಗಿಂತ ಮೇಲಲ್ಲವೆಂದು ಹೇಳಿದೆ.

‘ರಾ’ದ ಮಾಜಿ ವರಿಷ್ಠರೊಂದಿಗೆ ಸೇರಿಕೊಂಡು ಪಾಕ್‌ಸೇನೆಯ ನಿವೃತ್ತ ಜನರಲ್ ಒಬ್ಬರು ಹೇಗೆ ಪುಸ್ತಕ ರಚಿಸಲು ಸಾಧ್ಯವಾಯಿತೆಂದು ಪಾಕ್‌ನ ಕೆಲವು ರಾಜಕಾರಣಿಗಳು ಸೇರಿದಂತೆ ಹಲವು ಮಂದಿ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ದುರಾನಿಯವರಿಗೆ ಪಾಕ್ ಸೇನೆ ಸಮನ್ಸ್ ಜಾರಿಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X