ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪಿಲಾತಬೆಟ್ಟು ಒಕ್ಕೂಟ ಪದಗ್ರಹಣ

ಬಂಟ್ವಾಳ, ಮೇ 27: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದ ಪಿಲಾತಬೆಟ್ಟು ಮತ್ತು ನಯನಾಡು ಸ್ವ ಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ರವಿವಾರ ನಡೆಯಿತು.
ಪ್ರಗತಿಪರ ಕೃಷಿಕ ಉದಯ ಕುಮಾರ್ ಜೈನ್ ಕಟ್ಟೆಮನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಡಜನರ ಏಳಿಗೆಗಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ ಗ್ರಾಮಾಭಿವೃದ್ಧಿ ಯೋಜನೆಯಿಂದ ಲಕ್ಷಾಂತರ ಕುಟುಂಬಗಳ ಅಭಿವೃದ್ಧಿಯಾಗಿದೆ. ಸ್ವಸಹಾಯ ಸಂಘಗಳ ಒಕ್ಕೂಟದಿಂದ ಸಮಾಜದಲ್ಲಿ ಒಗ್ಗಟ್ಟು ಉಂಟಾಗಿದೆ. ಪರಸ್ಪರ ಸಹಕಾರ ಮನೋಭಾವನೆ ಮೂಡಿದೆ ಎಂದು ಹೇಳಿದರು.
ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಮಾತನಾಡಿ, ಕ್ಷೇತ್ರದ ಶಾಸಕನಾಗಿ ಯೋಜನೆಯ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು. ರಾಜ್ಯ ಸಂಸ್ಕಾರ ಭಾರತಿ ಲೋಕಕಲಾ ವಿಭಾಗ ಪ್ರಮುಖ್ ದಯಾನಂದ ಜಿ. ಕತ್ತಲ್ ಸಾರ್ ಧಾರ್ಮಿಕ ಉಪನ್ಯಾಸ ನೀಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಟಿಯಿಂದ ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸ್ವಾವಲಂಬನೆಯಾಗಿದ್ದು, ಬಡಜನತೆ ಗೌರವದ ಬದುಕು ನಡೆಸಲು ಸಾಧ್ಯವಾಗಿದೆ ಎಂದು ಹೇಳಿದರು.
ಶ್ರೀ ಕ್ಷೇ.ಧ.ಗ್ರಾ.ಯೋ ಉಡುಪಿ ಜಿಲ್ಲೆ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಮಾತನಾಡಿ, ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೊಬೈಲ್ ಆ್ಯಪ್ ತಂತ್ರಜ್ಞಾನ ಬಳಸಲಾಗುತ್ತಿದ್ದು, ಸಂಘದ ಎಲ್ಲ ವ್ಯವಹಾರಗಳನ್ನು ತಿಳಿಯಬಹುದಾಗಿದೆ ಎಂದು ಹೇಳಿದರು.
ಪಿಲಾತಬೆಟ್ಟು ಗ್ರಾಪಂ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಪಿಲಾತಬೆಟ್ಟು ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಮೋಹನ ಸಾಲ್ಯಾನ್ ಹೆಗ್ಡೆಬೆಟ್ಟು, ಜಿಪಂ ಸದಸ್ಯ ಎಂ. ತುಂಗಪ್ಪ ಬಂಗೇರ, ತಾಪಂ ಸದಸ್ಯ ರಮೇಶ್ ಪೂಜಾರಿ ಕುಡ್ಮೇರು, ನಯನಾಡು ಸ.ಪ್ರೌ. ಶಾಲಾ ಮುಖ್ಯ ಶಿಕ್ಷಕ ಅಶೋಕ್ ಕುಮಾರ್ ಎ., ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಎ., ಬಂಟ್ವಾಳ ಒಕ್ಕೂಟಗಳ ಕೇಂದ್ರ ಸಮಿತಿ ಅಧ್ಯಕ್ಷ ಸದಾನಂದ ಗೌಡ, ನಯನಾಡು ಒಕ್ಕೂಟ ನಿಕಟಪೂರ್ವ ಅಧ್ಯಕ್ಷೆ ನಾಗಲಕ್ಷ್ಮಿ, ಪಿಲಾತಬೆಟ್ಟು ಒಕ್ಕೂಟ ನೂತನ ಅಧ್ಯಕ್ಷೆ ಸುಮಿತ್ರಾ, ನಯನಾಡು ಒಕ್ಕೂಟ ನೂತನ ಅಧ್ಯಕ್ಷ ರಮೇಶ್ ಪೂಜಾರಿ, ವಗ್ಗ ವಲಯದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳಿಗೆ ದಾಖಲಾತಿ ಪುಸ್ತಕ ಹಸ್ತಾಂತರಿಸುವ ಮೂಲಕ ಪದಗ್ರಹಣ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಕ್ ಅವರನ್ನು ಒಕ್ಕೂಟದ ವತಿಯಿಂದ ಸಮ್ಮಾನಿಸಲಾಯಿತು. ಪಿಲಾತಬೆಟ್ಟು ಸೇವಾ ಪ್ರತಿನಿಧಿ ಅಮೃತಾ ಎಸ್. ವರದಿ ವಾಚಿಸಿದರು.
ವಗ್ಗ ಮೇಲ್ವಿಚಾರಕಿ ನಳಿನಾಕ್ಷಿ ಕೆ. ಸ್ವಾಗತಿಸಿ, ಶಶಿಧರ ನಾಯ್ಕ ವಂದಿಸಿ, ಸಂತೋಷ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.