ವೃತ್ತಿಯಲ್ಲಿ ಮಾನವೀಯತೆ ಮುಖ್ಯ: ಲತಾ

ಉಡುಪಿ, ಮೇ 27: ಪ್ರತಿಯೊಂದು ವೃತ್ತಿಯಲ್ಲಿ ಮಾನವೀಯತೆ ಎಂಬುದು ಮುಖ್ಯ. ಇತರರು ನಮ್ಮ ಹಾಗೆ ಮನುಷ್ಯರು ಎಂದು ತಿಳಿದುಕೊಂಡು ಪ್ರೀತಿ ಗೌರವ ನೀಡಿದರೆ ಪೊಲೀಸ್ ಠಾಣೆ, ಕೋರ್ಟ್ಗಳು ಅಗತ್ಯ ಇಲ್ಲದ ಶಾಂತಿ ಯುತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಉಡುಪಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನೂ ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸರಕಾರಿ ಶುಶ್ರೂಷಕರ ಸಂಘ ಉಡುಪಿ ಜಿಲ್ಲಾ ಶಾಖೆ, ಉಡುಪಿ ಲಯನ್ಸ್ ಮತ್ತು ಲಯನೆಸ್ ಕ್ಲಬ್, ಉಡುಪಿ ವಿದ್ಯಾರತ್ನ ಕಾಲೇಜ್ ಆಫ್ ನರ್ಸಿಂಗ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಗಿರಿ ಲಯನ್ಸ್ ಭವನ ದಲ್ಲಿ ರವಿವಾರ ಆಯೋಜಿಸಲಾದ ಅಂತಾರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಇತರರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುವುದರಿಂದ ಉತ್ತಮ ಸಮಾಜ ರೂಪಿಸಬಹುದಾಗಿದೆ. ಈ ಕಾರ್ಯವನ್ನು ಶುಶ್ರೂಷಕರು ಮಾಡುತ್ತಿದ್ದಾರೆ. ಶುಶ್ರೂಷಕರಿಲ್ಲದ ಆಸ್ಪತ್ರೆಯನ್ನು ಕಲ್ಪಿಸಿಕೊಳ್ಳಲು ಆಗುವುದಿಲ್ಲ. ಇವರ ಸೇವೆ ಪ್ರತಿಯೊಬ್ಬರಿಗೂ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ರಂಜನ್, ವಿದ್ಯಾ ರತ್ನ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಅನಿತಾ ಸಿ.ರಾವ್ ಉಪಸ್ಥಿತ ರಿದ್ದರು. ಮಣಿಪಾಲ ವಿಶ್ವ ಮಧುಮೇಹ ಪ್ರತಿಷ್ಠಾನ ಉನ್ನತ ಶಿಕ್ಷಣ ಅಕಾಡೆಮಿ ಯೋಜನಾ ನಿರ್ವಾಹಕ ಪ್ರಭಾತ್ ಕಲ್ಕೂರ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಶುಶ್ರೂಷಕರಾದ ಎಲಿಯಮ್ಮ ಓ.ಟಿ. ಹಾಗೂ ಸರೋಜ ಅವರಿಗೆ ಜಿಲ್ಲಾ ಅತ್ಯುತ್ತಮ ಶುಶ್ರೂಷಕ ಪ್ರಶಸ್ತಿ ಪ್ರದಾನ ಮಾಡ ಲಾಯಿತು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಸ್ವಾಗತಿಸಿದರು. ಸಜಿನಿ ಕಾರ್ಯಕ್ರಮ ನಿರೂಪಿಸಿದರು.