Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ರಾಜ್ಯವು ಬೆಂಕಿಯನ್ನು...

ಗುಜರಾತ್ ರಾಜ್ಯವು ಬೆಂಕಿಯನ್ನು ಎದುರಿಸಬೇಕಾದೀತು: ರೈತ ನಾಯಕರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ27 May 2018 7:44 PM IST
share

ಹೊಸದಿಲ್ಲಿ,ಮೇ 27: ತಮಿಳುನಾಡಿನ ತೂತುಕುಡಿಯಲ್ಲಿ ಸ್ಟರ್ಲೈಟ್ ತಾಮ್ರ ಘಟಕದ ವಿರುದ್ಧ ಪ್ರತಿಭಟನೆಯ ಕಾವು ಇನ್ನೂ ಇಳಿದಿಲ್ಲ. ತನ್ಮಧ್ಯೆ ಗುಜರಾತ್‌ನ ಭಾವನಗರದಲ್ಲಿ ಗುಜರಾತ್ ಪವರ್ ಕಾರ್ಪೊರೇಷನ್ ಲಿ.(ಜಿಪಿಸಿಎಲ್)ನಿಂದ ಲಿಗ್ನೈಟ್ ಗಣಿಗಾರಿಕೆ ವಿಷಯದಲ್ಲಿ ರಾಜ್ಯ ಸರಕಾರ ಮತ್ತು ಗ್ರಾಮಸ್ಥರ ನಡುವೆ ಹಿಂಸಾತ್ಮಕ ಸಂಘರ್ಷಗಳಿಗೆ ರಾಜ್ಯವು ಸಾಕ್ಷಿಯಾಗಬಹುದು ಎಂದು ರೈತ ನಾಯಕರು ಎಚ್ಚರಿಕೆ ನೀಡಿದ್ದಾರೆ.

ಘೋಘಾ ಮತ್ತು ಭಾವನಗರ ತಾಲೂಕುಗಳ 12 ಗ್ರಾಮಗಳಲ್ಲಿ ಸುಮಾರು 1,414 ಹೆಕ್ಟೇರ್ ಭೂಮಿಯು ತನ್ನ ಸ್ವಾಧೀನದಲ್ಲಿದೆ ಎಂದು ಜಿಪಿಸಿಎಲ್ ಎಪ್ರಿಲ್ 1ರಂದು ಹೇಳಿಕೊಂಡಿದ್ದು,ಆಗಿನಿಂದಲೂ ಪ್ರದೇಶದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಗುಜರಾತ್ ಜೀವಂತ ಜ್ವಾಲಾಮುಖಿಯ ಮೇಲೆ ಕುಳಿತಿದೆ. ರೈತರು ಮಾತ್ರವಲ್ಲ,ಇಡೀ ಗ್ರಾಮೀಣ ಗುಜರಾತೇ ಸಂಕಷ್ಟದಲ್ಲಿದೆ. ನಾವು ಭಾವನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿದ್ದೇವೆ. ರೈತರ ಖೇರು ಸಮಾಜವು ಅತ್ಯಂತ ಪ್ರಬಲವಾಗಿದೆ. ಅವರು ಹೋರಾಟದ ಮುಂಚೂಣಿಯಲ್ಲಿದ್ದಾರೆ ಮತ್ತು ನಾವು ಅವರೊಂದಿಗಿದ್ದೇವೆ ಎಂದು ಅಖಿಲ ಭಾರತ ಕಿಸಾನ್ ಸಭಾ(ಎಐಕೆಎಸ್)ದ ನಾಯಕ ಅತುಲ್ ಅಂಜಾನ್ ಅವರು ಹೇಳಿದರು.

ತೂತುಕುಡಿ ಮತ್ತು ಗುಜರಾತ್‌ನಲ್ಲಿಯ ಪರಿಸ್ಥಿತಿಗಳಲ್ಲಿ ಹೆಚ್ಚಿನ ಅಂತರವಿಲ್ಲ ಎನ್ನುವುದನ್ನು ಸರಕಾರವು ಅರಿತುಕೊಳ್ಳಬೇಕು. ಸರಕಾರವು ತೂತುಕುಡಿಯಂತೆ ಪರಿಸ್ಥಿತಿಯನ್ನು ನಿಭಾಯಿಸಿದರೆ ರಾಜ್ಯವು ಬೆಂಕಿಯನ್ನು ಎದುರಿಸಬೇಕಾಗುತ್ತದೆ ಎಂದರು.

ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಪಿಸಿಎಲ್ 1997ರಲ್ಲಿ ಘೋಘಾ ಮತ್ತು ಭಾವನಗರ ತಾಲೂಕುಗಳಲ್ಲಿ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದೆ. ಆದರೆ ಗ್ರಾಮಸ್ಥರು ಈವರೆಗೂ ಈ ಭೂಮಿಯನ್ನು ಬಿಟ್ಟುಕೊಟ್ಟಿಲ್ಲ.

ಸರಕಾರವು ಲಿಗ್ನೈಟ್ ಗಣಿಗಾರಿಕೆಗಾಗಿ ತಮ್ಮ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವಾಗ ಭೂ ಸ್ವಾಧೀನ ಕಾಯ್ದೆಯನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ಭೂ ಸ್ವಾಧೀನ ಕಾಯ್ದೆ-2013ರಂತೆ ಯಾವುದೇ ಉದ್ದೇಶಕ್ಕಾಗಿ ಸ್ವಾಧೀನ ಪಡಿಸಿಕೊಳ್ಳಲಾದ ಭೂಮಿಯು ಐದು ವರ್ಷಗಳವರೆಗೂ ಬಳಕೆಯಾಗಿರದಿದ್ದರೆ ಅದನ್ನು ಮಾಲಿಕರಿಗೆ ವಾಪಸ್ ಮಾಡಬೇಕು. ಆದರೆ ಗುಜರಾತ್ ಸೇರಿದಂತೆ ಯಾವುದೇ ರಾಜ್ಯಗಳು ಈ ಕಾಯ್ದೆಯನ್ನು ಅನುಸರಿಸುತ್ತಿಲ್ಲ. ಈಗ ಭಾವನಗರದ ರೈತರು ಬಳಕೆಯಾಗಿರದ ಭೂಮಿ ತಮ್ಮ ಬಳಿಯೇ ಇರಬೇಕೆಂದು ಆಗ್ರಹಿಸುತ್ತಿದ್ದಾರೆ ಎಂದು ಎಐಕೆಎಸ್ ನಾಯಕ ಹನ್ನಾನ್ ಮುಲ್ಲಾ ತಿಳಿಸಿದರು.

 ತಾನು ರೈತರಿಗೆ ಪರಿಹಾರವನ್ನು ಪಾವತಿಸಿದ್ದೇನೆ ಎಂದು ಸರಕಾರವು ಹೇಳಿದೆಯಾದರೂ,ತಮ್ಮಲ್ಲಿ ಹೆಚ್ಚಿನವರ ಭೂಮಿಯನ್ನು ಬಲವಂತದಿಂದ ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಕಾರ್ಪೊರೇಟ್ ಸಂಸ್ಥೆಗಳೊಂದಿಗೆ ಶಾಮೀಲಾಗಿದ್ದಾರೆ ಮತ್ತು ರೈತ ಸಮುದಾಯದ ಬವಣೆಯನ್ನು ಕಡೆಗಣಿಸುತ್ತಿದ್ದಾರೆ. ರಾಜ್ಯದಲ್ಲಿಯ ಬಿಜೆಪಿ ಸರಕಾರ ಮತ್ತು ಕೇಂದ್ರ ರೈತರ ಬೆಲೆಗಳನ್ನು ಜುಜುಬಿ ದರಗಳಲ್ಲಿ ಕಾರ್ಪೊರೇಟ್‌ಗಳಿಗೆ ನೀಡಿವೆ. ಇದು ಗುಜರಾತ್ ಮಾದರಿಯ ಅಸಲಿ ಮುಖವಾಗಿದೆ ಎಂದು ರೈತನಾಯಕರು ಆರೋಪಿಸಿದರು.

ಕೈಗಾರಿಕಾ ಸ್ಥಾವರಗಳನ್ನು ಸ್ಥಾಪಿಸಲು ಕಾರ್ಪೊರೇಟ್‌ಗಳ ತುಷ್ಟೀಕರಣಕ್ಕಾಗಿ ಪರಿಸರ ನಿರ್ಬಂಧಗಳನ್ನೂ ಸರಕಾರಗಳು ಕಡೆಗಣಿಸುತ್ತವೆ ಎಂದು ಅವರು ಬೆಟ್ಟು ಮಾಡಿದರು.

ತೂತುಕುಡಿ ಘಟನೆಯಿಂದ ಪ್ರೇರಿತಗೊಂಡು ರಾಜ್ಯದ ರೈತರೂ ತಮ್ಮ ಹೋರಾಟವನ್ನು ತೀವ್ರಗೊಳಿಸಲಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X