Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಜಯಾ ದಬ್ಬೆ ಶೋಷಿತ, ದಲಿತರ ಪರವಾಗಿಯೂ...

ವಿಜಯಾ ದಬ್ಬೆ ಶೋಷಿತ, ದಲಿತರ ಪರವಾಗಿಯೂ ಹೋರಾಟ ಮಾಡುತ್ತಿದ್ದರು: ಡಾ.ಚಂದ್ರಮತಿ ಸೊಂದ

ವಾರ್ತಾಭಾರತಿವಾರ್ತಾಭಾರತಿ27 May 2018 9:06 PM IST
share
ವಿಜಯಾ ದಬ್ಬೆ ಶೋಷಿತ, ದಲಿತರ ಪರವಾಗಿಯೂ ಹೋರಾಟ ಮಾಡುತ್ತಿದ್ದರು: ಡಾ.ಚಂದ್ರಮತಿ ಸೊಂದ

ಮೈಸೂರು,ಮೇ.27: ಮಹಿಳಾ ಸಂಘಟನೆಗೆ ಭದ್ರ ಬುನಾದಿ ಹಾಕಿದ ವಿಜಯ ದಬ್ಬೆಯವರು ಮಹಿಳಾ ಪರವಾಗಿ ಮಾತ್ರವಲ್ಲದೆ ಶೋಷಿತ, ದಲಿತರ ಪರವಾದ ಹೋರಾಟಗಳಲ್ಲಿ ಪಾಲ್ಗೊಂಡು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು ಎಂದು ಮಹಿಳಾ ಚಿಂತಕಿ ಡಾ.ಚಂದ್ರಮತಿ ಸೊಂದ ತಿಳಿಸಿದರು.

ಮಾನಸಗಂಗೋತ್ರಿಯ ಕುವೆಂಪು ಅಧ್ಯಯನ ಸಂಸ್ಥೆಯ ಅವರಣದಲ್ಲಿ ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಮೈಸೂರಿನ ಕವಿ-ಕಾವ್ಯ-ವಿಚಾರ ವೇದಿಕೆ ಸಂಯುಕ್ತಾಶ್ರದಲ್ಲಿ ರವಿವಾರ ಹಮ್ಮಿಕೊಂಡಿದ್ದ 'ಚಕೋರ-101-ವಿಜಯ ದಬ್ಬೆ ಅವರ ಕವಿತೆಗಳ ಓದು' ಎಂಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಜಯ ದಬ್ಬೆಯವರ ಚಿಂತನೆಗಳು ಅಂದಿನ ಕಾಲಘಟ್ಟದ ಯುವ ಬರಹಗಾರರಿಗೆ ಮಾದರಿಯಾಗಿತ್ತು. ದಬ್ಬೆಯವರ ಬರಹಗಳು ಮಹಿಳೆಯರ ಪರ ಮಾತ್ರವಲ್ಲದೆ ದಲಿತರು, ಶೋಷಿತರ ಪರವಾಗಿರುತ್ತಿತ್ತು. ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾಗ, ವಿಶ್ವ ವಿದ್ಯಾನಿಲಯದ ನೀತಿ ನಿಲಯಮಗಳನ್ನು ಮೀರಿ ಅವರು ಹೋರಾಟಕ್ಕೆ ಜತೆಯಾಗುತ್ತಿದ್ದರು. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವು ಅವರನ್ನು ಅಮಾನತು ಮಾಡಿತ್ತು. ಅದನ್ನು ಪ್ರಬಲವಾಗಿ ಎದುರಿಸಿ ಹೋರಾಟವನ್ನು ರೂಪುಗೊಳಿಸಿ ಸಮತಾ ವೇದಿಕೆಯನ್ನು ಕಟ್ಟಿ ಬೆಳೆಸಿದರು ಎಂದು ವಿಜಯಾ ದಬ್ಬೆಯವರ ನೆನಪುಗಳನ್ನು ಮೆಲುಕು ಹಾಕಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುವೆಂಪು ಕನ್ನಡ ಅಧ್ಯನ ಸಂಸ್ಥೆ ನಿರ್ದೇಶ ಡಾ.ನೀಲಗಿರಿ ಎಂ.ತಳವಾರ್ ಅವರು ಮಾತನಾಡಿ, ವಿಜಯ ದಬ್ಬೆ ಅವರ ಕವಿತೆಗಳಲ್ಲಿ ಬಂಡಾಯದ ಪ್ರತಿಭಟನೆಯನ್ನು ಕಾಣುತ್ತೇವೆ. ಅವರು ಯಾವುದೇ ಕಾರಣಕ್ಕೂ ಅನ್ಯಾಯದ ಸೋಲನ್ನು ಒಪ್ಪಿಕೊಳ್ಳದ ಮಹಾದಿಟ್ಟ ತನದ ಮಹಿಳೆಯಾಗಿದ್ದರು. ಅವರು ಜೀವನದುದ್ದಕ್ಕೂ ಸಾಮಾಜಿಕ ಅನ್ಯಾಯದ ವಿರುದ್ಧವಾಗಿಯೇ ಬದುಕಿದ್ದರು. ದೃಡತೆಯ ಸೈದ್ದಾಂತಿಕ ಹಿನ್ನೆಲೆಯಲ್ಲೇ ಅವರ ಬದುಕು ಬರಹವಾಗಿತ್ತು. ಇವತ್ತು ಎಲ್ಲ ಮಹಿಳಾ ಹೋರಾಟಗಾರರಿಗೆ, ಚಿಂತಕರಿಗೆ ದಬ್ಬೆ ಅವರು ಶಕ್ತಿಯಾಗಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಆರಂಭದಲ್ಲಿ ಡಾ.ಕುಶಾಲ ಬರಗೂರು, ಟಿ.ಸತೀಶ್ ಜವರೇಗೌಡ, ಡಾ.ಎನ್.ಯೋಗೇಶ್, ಎಂ.ಎಸ್.ಸಂಧ್ಯಾರಾಣಿ, ಎಚ್.ಎನ್.ರಾಮಕೃಷ್ಣ, ಪಿ.ಎನ್.ಹೇಮಲತಾ ಅವರು ತಲಾ ಒಂದೊಂದು ವಿಜಯ ದಬ್ಬೆ ಅವರ ಕರ್ಪ್ಯೂ, ಭಿನ್ನಮತ, ಪರಂಪರೆ, ಸಹನೆ, ರಾಣಿ ತಿಮ್ಮಿಯ ಸಿಂಹಾಸನ, ಇರುತ್ತವೆ ಎಂಬ ಕವಿತೆಗಳನ್ನು ಓದಿದರು.

ಡಾ.ಕುಪ್ನಳ್ಳಿ.ಎಂ.ಬೈರಪ್ಪ ಅವರು ಕವಿತೆಗೆ ಪ್ರತಿಕ್ರಿಯೆ ನೀಡಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕರಿಯಪ್ಪ, ನೀ.ಗೂ ರಮೇಶ್, ಡಾ.ಶಿಲ್ಪಶ್ರೀ ಹರವು  ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X