Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಬಿಜೆಪಿ ವತಿಯಿಂದ...

ಬೆಳ್ತಂಗಡಿ: ಬಿಜೆಪಿ ವತಿಯಿಂದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 May 2018 9:23 PM IST
share
ಬೆಳ್ತಂಗಡಿ: ಬಿಜೆಪಿ ವತಿಯಿಂದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ, ಮೇ 27: ಕಳೆದ ನಾಲ್ಕು ವರ್ಷದಲ್ಲಿ ಕೇಂದ್ರ ಸರಕಾರ ಜಿಲ್ಲೆಗೆ ಹದಿನೈದು ಸಾವಿರ ಕೋಟಿ ರೂ. ಅನುದಾನ ಮಂಜೂರು ಮಾಡಿದ್ದರೂ ಇಲ್ಲಿನ ಶಾಸಕರುಗಳು ಅಭಿವೃದ್ಧಿಯಲ್ಲಿ ರಾಜಕಾರಣ ಮಾಡಿದ್ದರಿಂದ ಸರಿಯಾಗಿ ಸದುಪಯೋಗ ಆಗಿಲ್ಲ. ಇದೀಗ ಜನತೆ ಜಿಲ್ಲೆಯಲ್ಲಿ ಏಳು ಶಾಸಕರನ್ನು ಆಯ್ಕೆ ಮಾಡುವ ಮೂಲಕ ಕಾಂಗ್ರೆಸ್ ಮುಕ್ತ ಜಿಲ್ಲೆಯನ್ನಾಗಿ ಮಾಡಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ಅವರು ರವಿವಾರ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೇಂದ್ರ ಸರಕಾರದಿಂದ ಬಂದ ಅನುದಾನ ಸರಿಯಾಗಿ ವಿನಿಯೋಗ ಮಾಡಲು ನಮ್ಮ ಪಕ್ಷದ ಶಾಸಕರುಗಳು ಇರಲಿಲ್ಲ. ಈಗ ಜಿಲ್ಲೆಯಲ್ಲಿ 7 ಶಾಸಕರು ಆಯ್ಕೆಯಾಗಿದ್ದು ಕೇಂದ್ರ ಸರಕಾರದ ಅನುದಾನವನ್ನು ಸದ್ವಿನಿಯೋಗಿಸಿಕೊಂಡು ಜಿಲ್ಲೆಯನ್ನು ಅಭಿವೃದ್ಧಿ ಮಾಡಲಾಗುವುದು ಎಂದರು.

ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ ಮಾತನಾಡಿ, ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಆಡಳಿತ ಮುಳುಗುವ ದೋಣಿಯಂತಿದೆ. ಈಗಾಗಲೇ ಮಂತ್ರಿ ಪದವಿಗಾಗಿ ಮುಳುಗಲು ಶುರುವಾಗಿದೆ. 4 ತಿಂಗಳಲ್ಲಿ ಸಂಪೂರ್ಣ ಮುಳಗುತ್ತದೆ ಎಂದ ಅವರು, ಮುಂಬರುವ ಲೋಕಸಭೆ ಚುನಾವಣೆಗೆ ಕಾರ್ಯಕರ್ತರು ತಯಾರಾಗಬೇಕು. ದೇಶದ ಬಗ್ಯೆ ಚಿಂತನೆ, ಇತಿಹಾಸದ ಅರಿವು ಬೇಕು. ನಮಗೆ ಜಾತಿ, ಧರ್ಮಕ್ಕಿಂತ ದೇಶ ಮುಖ್ಯ ಎಂದರು.

ಶಾಸಕ ಹರೀಶ ಪೂಂಜ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ, ನನ್ನೊಂದಿಗೆ ಇದ್ದ ಯುವಕರಿಗೆ ಏನು ಗೊತ್ತಿಲ್ಲ ಎಂದು ಲೇವಡಿ ಮಾಡುತ್ತಿದ್ದರಿಗೆ ಮತದಾರರು ಸರಿಯಾದ ಉತ್ತರ ನೀಡಿದ್ದಾರೆ. ಯುವ ಜನತೆಯ ಹಿಂದಿರುವ ಶಕ್ತಿಯೇ ನಮ್ಮ ಹಿರಿಯ ಪ್ರಮುಖರು. ಅವರ ಮಾರ್ಗದರ್ಶನದಿಂದಲೇ ವಿಜಯ ಪತಾಕೆಯನ್ನು ಹಾರಿಸಲು ಸಾಧ್ಯವಾಗಿದೆ. ತಾಲೂಕಿನ ಅಭಿವೃದ್ಧಿಗೆ ಎಲ್ಲರೂ ನನ್ನೊಂದಿಗೆ ಕೈಜೋಡಿಸಬೇಕು. ದ್ವೇಷ ರಾಜಕಾರಣ ಮಾಡದೇ ಅಭಿವೃದ್ಧಿ ಚಿಂತನೆಯೊಂದಿಗೆ ಪ್ರೀತಿ ವಿಶ್ವಾಸದ ರಾಜಕಾರಣ ಮಾಡುತ್ತೇನೆ ಎಂದರು.

ಕುಂಟಾರು ರವೀಶ ತಂತ್ರಿ ಅಭಿನಂದನಾ ಭಾಷಣ ಮಾಡಿದರು. ಜಿಲ್ಲಾ ಚುನಾವಣಾ ಸಂಚಾಲಕ ಮೋನಪ್ಪ ಭಂಡಾರಿ ಹಾಗೂ ವಿಭಾಗ ಸಹಪ್ರಭಾರಿ ಪ್ರತಾಪಸಿಂಹ ನಾಯಕ್ ಮಾತನಾಡಿ ಅಭಿನಂದಿಸಿದರು. ಕಾರ್ಯಕ್ರಮವನ್ನು ಬಿಜೆಪಿ ಹಿರಿಯ ಪ್ರಮುಖರಾದ ವಕೀಲ ನೇಮಿರಾಜ ಶೆಟ್ಟಿ ಉದ್ಘಾಟಿಸಿದರು. ವೇದಿಕೆಯಲ್ಲಿ ಜಿಲ್ಲಾ ಪ್ರಮುಖರಾದ ಶಾರದ ಆರ್. ರೈ, ಭಾಗೀರಥಿ ಮುರುಳ್ಯ, ಕ್ಯಾ ಬ್ರಿಜೇಶ್ ಚೌಟ, ಜಿಪಂ ಸದಸ್ಯರಾದ ಮಮತಾ ಎಂ. ಶೆಟ್ಟಿ, ಸೌಮ್ಯಲತಾ ಜೆ. ಗೌಡ, ತಾ.ಪಂ. ಉಪಾಧ್ಯಕ್ಷೆ ವೇದಾವತಿ, ವಿವಿಧ ಮೋರ್ಚಾಗಳ ತಾಲೂಕು ಅಧ್ಯಕ್ಷರುಗಳಾದ ಸಂಪತ್ ಬಿ. ಸುವರ್ಣ, ಶಶಿಧರ ಕಲ್ಮಂಜ, ಧನಲಕ್ಷ್ಮೀ ಜನಾರ್ಧನ್, ಸದಾಶಿವ ಕರಂಬಾರು ಮೊದಲಾದವರು ಇದ್ದರು.

ಮಂಡಲ ಉಪಾಧ್ಯಕ್ಷ ಜಯಂತ ಕೋಟ್ಯಾನ್ ಸ್ವಾಗತಿಸಿದರು. ಪ್ರ. ಕಾರ್ಯದರ್ಶಿಗಳಾದ ಸೀತಾರಾಮ ಬೆಳಾಲು ವರದಿ ವಾಚಿಸಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ ವಂದಿಸಿದರು. ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಉಮೇಶ ನಡ್ತಿಕಲ್ ಹಾಗೂ ಶ್ರೀನಿವಾಸ ರಾವ್ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X