ಉಡುಪಿಯಲ್ಲೂ ಬಂದ್ಗಿಲ್ಲ ಬೆಂಬಲ
ಉಡುಪಿ, ಮೇ 28: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 24 ಗಂಟೆಗಳಲ್ಲಿ ರೈತರ ಸಾಲಮನ್ನಾ ಮಾಡದೆ ವಚನಭ್ರಷ್ಟರಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕರೆ ನೀಡಿದ್ದ ಸ್ವಯಂಪ್ರೇರಿತ ಬಂದ್ಗೆ ಉಡುಪಿ ಜಿಲ್ಲೆಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.
ಜಿಲ್ಲಾದ್ಯಂತ ಬೆಳಗ್ಗೆಯಿಂದಲೇ ಸರಕಾರಿ, ಖಾಸಗಿ ಬಸ್, ಆಟೊ ರಿಕ್ಷಾಗಳು ಎಂದಿನಂತೆ ಸಂಚರಿಸುತ್ತಿವೆ. ಅಂಗಡಿಮುಂಗಟ್ಟುಗಳು, ಕಚೇರಿಗಳು ಎಂದಿನಂತೆ ತೆರೆದಿವೆ. ಶಾಲೆಗಳು ಪುನಾರಂಭಗೊಂಡಿದ್ದರಿಂದ ತೆರೆದಿವೆ. ಬಿಜೆಪಿಯ ಬಂದ್ ಕರೆಗೆ ದ.ಕ. ಜಿಲ್ಲೆಯ ಯಾವುದೇ ಸಂಘಟನೆಗಳು ಬೆಂಬಲ ಸೂಚಿಸಿಲ್ಲ.
Next Story