Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಜಮಾಡಿ: ಒಳರಸ್ತೆಯಲ್ಲಿ ಟೋಲ್ ನಿರ್ಮಾಣದ...

ಹೆಜಮಾಡಿ: ಒಳರಸ್ತೆಯಲ್ಲಿ ಟೋಲ್ ನಿರ್ಮಾಣದ ವಿರುದ್ಧ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 May 2018 3:39 PM IST
share
ಹೆಜಮಾಡಿ: ಒಳರಸ್ತೆಯಲ್ಲಿ ಟೋಲ್ ನಿರ್ಮಾಣದ ವಿರುದ್ಧ ಪ್ರತಿಭಟನೆ

ಪಡುಬಿದ್ರೆ, ಮೇ 28: ಹೆಜಮಾಡಿಯಲ್ಲಿ ಒಳರಸ್ತೆಗೆ ಟೋಲ್‌ಗೇಟ್ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಹಾಗೂ ಟೋಲ್‌ಗೇಟ್ ಬಳಿಯ ಗೂಡಂಗಡಿಗಳನ್ನು ತೆರವುಗೊಳಿಸುವುದನ್ನು ವಿರೋಧಿಸಿ ಟೋಲ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಹೆಜಮಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟೋಲ್‌ಗೇಟ್ ನಿರ್ಮಾಣದ ಬಳಿಕ ಟೋಲ್‌ತಪ್ಪಿಸುವ ನಿಟ್ಟಿನಲ್ಲಿ ಕೆಲ ವಾಹಗಳು ಒಳರಸ್ತೆಯಲ್ಲಿ ಸಂಚರಿಸುತ್ತಿವೆ. ಇದ್ಕಕಾಗಿ ನವಯುಗ ಕಂಪೆನಿ ಒಳರಸ್ತೆಗೂ ಟೋಲ್ ನಿರ್ಮಾಣ ಮಾಡುತ್ತಿದೆ. ಆದರೆ ಹೆಜಮಾಡಿ ನಾಗರಿಕರ ಒತ್ತಾಯ ಹಾಗೂ ಪಂಚಾಯತ್ ನೀಡಿದ ಹಲವು ಬೇಡಿಕೆಗಳನ್ನು ಕಂಪೆನಿ ಈಡೇರಿಸಿಲ್ಲ. ಅವುಗಳ ಈಡೇರಿಕೆ ಆಗುವವರೆಗೆ ಟೋಲ್‌ಬೂತ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಹೆದ್ದಾರಿ ಟೋಲ್‌ಗೇಟ್ ನಿರ್ಮಾಣದ ಬಳಿಕ ಇದರ ಸುತ್ತಮುತ್ತ 20ಕ್ಕೂ ಅಧಿಕ ಗೂಡಂಗಡಿಗಳು ನಿರ್ಮಾಣವಾಗಿದ್ದು, ಇವುಗಳನ್ನು ತೆರವುಗೊಳಿಸಲು ಸೋಮವಾರ ನವಯುಗ ಕಂಪೆನಿ ಮುಂದಾಗಿತ್ತು. ಇದನ್ನು ಕೂಡಾ ಪ್ರತಿಭಟನಾಕಾರರು ವಿರೋಧಿಸಿದರು. ಹೆದ್ದಾರಿ ರಚನೆ ಆದಾಗ ಇಲ್ಲಿನ ಬಹುತೇಕ ಜನರು ವ್ಯವಸಾಯ, ವ್ಯಾಪಾರ, ಜಮೀನು ಕಳೆದುಕೊಂಡಿದ್ದಾರೆ. ಅದರಲ್ಲಿ ಕೆಲವು ಅಸಹಾಯಕರು ಜೀವನೋಪಾಯಕ್ಕಾಗಿ ಇಲ್ಲಿ ಗೂಡಂಗಡಿಗಳನ್ನು ತೆರೆದಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಈ ಗೂಡಂಗಡಿಗಳನ್ನು ತೆರವುಗೊಳಿಸಬಾರದು ಎಂದು ಒತ್ತಾಯಿಸಿದರು.

ಬೇಡಿಕೆಗಳು: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ವೇಳೆ ತೆರವುಗೊಳಿಸಿರುವ ಸಾರ್ವಜನಿಕ ಕುಡಿಯುವ ನೀರಿನ ಪೈಪ್‌ಲೈನ್ ಅನ್ನು ಮತ್ತೆ ಅಳವಡಿಸಬೇಕು. ಟೋಲ್‌ಗೇಟ್ ಬಳಿ ಕೊರೆಯಲಾಗಿರುವ ಕೊಳವೆಬಾವಿಯನ್ನು ಗ್ರಾಪಂಗೆ ಹಸ್ತಾಂತರಿಸಬೇಕು. ಹೆಜಮಾಡಿಯ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಶಿವ ನಗರದ ಬಳಿ ಕೂಡಲೇ ಮೇಲ್ಸೇತುವೆ ನಿರ್ಮಿಸಬೇಕು. ದಾರಿ ದೀಪ ಅಳವಡಿಸಬೇಕು. ಹೆದ್ದಾರಿಯಿಂದ ಗುಡ್ಡೆಯಂಗಡಿ ರಸ್ತೆಗೆ ಡಾಮರೀಕರಣ ಮಾಡಬೇಕು. ಟೋಲ್‌ಗೇಟ್ ನಿರ್ಮಾಣದಿಂದ ನಿರ್ವಸಿತರಾದವರಿಗೆ ಹೆಜಮಾಡಿಯಲ್ಲಿ ಸೂಕ್ತ ನಿವೇಶನ ಒದಗಿಸಬೇಕು. ನಿರ್ವಸಿತರಿಗೆ ಮನೆ ನಿರ್ಮಾಣದ ವೇಳೆ ಏಕರೂಪದ ಮಾನದಂಡ ಪಾಲಿಸಬೇಕು. ಗ್ರಾಪಂ ಪರವಾನಿಗೆ ಪಡೆಯದೆ ಟೋಲ್‌ಗೇಟ್ ನಿರ್ಮಾಣ ಮಾಡಿದ್ದು, ಅದರ ಕಟ್ಟಡ ತೆರಿಗೆಯನ್ನು ಕೂಡಲೇ ಕಟ್ಟಬೇಕು. ಹೆದ್ದಾರಿ ಪ್ರಾಧಿಕಾರದ ನಿಮಯದಂತೆ ಶೇ.2ರಷ್ಟು ಸಿಎಸ್‌ಆರ್ ನಿಧಿಯನ್ನು ಗ್ರಾಪಂಗೆ ನೀಡಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸಿದ ಬಳಿಕವೇ ಒಳರಸ್ತೆಗೆ ಟೋಲ್‌ಗೇಟ್ ನಿರ್ಮಿಸಲು ಅವಕಾಶ ಮಾಡಿಕೊಡುವುದಾಗಿ ಪ್ರತಿಭಟನಾಕಾರರು ಹೇಳಿದರು.

ಈ ಸಂದರ್ಭ ಶಾಸಕ ಲಾಲಾಜಿ ಮೆಂಡನ್, ಟೋಲ್ ವಿರೋಧಿ ಹೊರಾಟ ಸಮಿತಿಯ ಗುಲಾಂ ಮುಹಮ್ಮದ್, ಶೇಖರ್ ಹೆಜಮಾಡಿ, ಜಿಪಂ ಸದಸ್ಯ ಶಶಿಕಾಂತ್ ಪಡುಬಿದ್ರೆ, ಹೆಜಮಾಡಿ ಗ್ರಾಪಂ ಅಧ್ಯಕ್ಷ ವಿಶಾಲಾಕ್ಷಿ ಪುತ್ರನ್, ಉಪಾಧ್ಯಕ್ಷ ಸುಧಾಕರ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X