Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೊಲವರಮ್ ಅಣೆಕಟ್ಟು ಪ್ರಕರಣ: ಹಸಿರು...

ಪೊಲವರಮ್ ಅಣೆಕಟ್ಟು ಪ್ರಕರಣ: ಹಸಿರು ಪೀಠದಿಂದ ಕೇಂದ್ರಕ್ಕೆ ನೊಟೀಸ್

ವಾರ್ತಾಭಾರತಿವಾರ್ತಾಭಾರತಿ28 May 2018 8:35 PM IST
share
ಪೊಲವರಮ್ ಅಣೆಕಟ್ಟು ಪ್ರಕರಣ: ಹಸಿರು ಪೀಠದಿಂದ ಕೇಂದ್ರಕ್ಕೆ ನೊಟೀಸ್

ಹೊಸದಿಲ್ಲಿ, ಮೇ 28: ಪೊಲವರಮ್ ಅಣೆಕಟ್ಟಿನ ಬಳಿ ನಿರ್ಮಿಸಲಾಗುತ್ತಿರುವ ಗೋಡೆಯು ಗೋದಾವರಿ ನದಿಯ ಕನಿಷ್ಟ ನೈಸರ್ಗಿಕ ಹರಿವಿಗೆ ತಡೆಯೊಡ್ಡಲಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಮನವಿಗೆ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಹಸಿರು ಪೀಠ (ಎನ್‌ಜಿಟಿ), ಈ ಕುರಿತು ಕೇಂದ್ರ ಸರಕಾರ ಮತ್ತು ಇತರರಿಗೆ ನೊಟೀಸ್ ಜಾರಿ ಮಾಡಿದೆ.

ಎನ್‌ಜಿಟಿಯ ಪ್ರಬಾರ ಮುಖ್ಯಸ್ಥ ನ್ಯಾಯಾಧೀಶ ಜವಾದ್ ರಹೀಂ ಅವರು, ಪೊಲವರಮ್ ಯೋಜನಾ ಪ್ರಾಧಿಕಾರ, ಕೇಂದ್ರ ಪರಿಸರ ಸಚಿವಾಲಯ, ಅಂತರ್ ಸಚಿವಾಲಯ ನಿಗಾ ಸಮಿತಿ, ಕೇಂದ್ರ ಆಂತರಿಕ ಮೀನುಗಾರಿಕಾ ಸಂಸ್ಥೆ, ಆಂಧ್ರ ಪ್ರದೇಶ, ಪಶ್ಚಿಮ ಗೋದಾವರಿಯ ಜಿಲ್ಲಾಯುಕ್ತರು ಹಾಗೂ ಇತರರಿಗೆ ನೊಟೀಸ್ ಜಾರಿ ಮಡಿದ್ದು ಜುಲೈ 31ರ ಒಳಗಾಗಿ ಉತ್ತರ ನೀಡುವಂತೆ ಸೂಚಿಸಿದ್ದಾರೆ.

ಮಳೆಯಾಗದ ಸಮಯಗಳಲ್ಲಿ ನದಿಗಳಲ್ಲಿ ಶೇ. 15ರಿಂದ 20 ಕನಿಷ್ಟ ನೈಸರ್ಗಿಕ ಹರಿವು ಇರುವಂತೆ ನೋಡಿಕೊಳ್ಳಬೇಕೆಂದು ಹಸಿರು ಪೀಠವು ಇತ್ತೀಚೆಗೆ ಎಲ್ಲ ರಾಜ್ಯಗಳಿಗೆ ಸೂಚಿಸಿತ್ತು. ನದಿಯನ್ನು ಆಶ್ರಯಿಸಿರುವ ಪರಿಸರ ವ್ಯವಸ್ಥೆಯನ್ನು ಕಾಪಾಡಲು ಅಗತ್ಯವಿರುವ ನದಿಯ ಹರಿವಿನ ಪ್ರಮಾಣ, ಸಮಯ ಮತ್ತು ಗುಣಮಟ್ಟವನ್ನು ನೈಸರ್ಗಿಕ ಹರಿವು ಅಥವಾ ಪರಿಸರ ಹರಿವು ಎಂದು ವ್ಯಾಖ್ಯಾನಿಸಲಾಗುತ್ತದೆ. ಪೊಲವರಮ್ ಅಣೆಕಟ್ಟಿನ ಬಳಿ ಗೋಡೆಯನ್ನು ನಿರ್ಮಿಸುವುದರಿಂದ ಗೋದಾವರಿ ನದಿಯ ಪರಿಸರ ಹರಿವಿಗೆ ಧಕ್ಕೆಯಾಗುತ್ತದೆ ಎಂದು ನ್ಯಾಯವಾದಿ ಪ್ರಗ್ಯಾ ಪಾರಿಜಾತ್ ಸಿಂಗ್ ಹಸಿರು ಪೀಠಕ್ಕೆ ತಿಳಿಸಿದ್ದಾರೆ.

ಈ ಗೋಡೆಯ ನಿರ್ಮಾಣದಿಂದ ಗೋದಾವರಿ ನದಿಯ ಜಲಚರಗಳ ಮೇಲೆ ಹಾಗೂ ಪೊಲವರಮ್ ಪ್ರದೇಶದಲ್ಲಿ ವಾಸಿಸುವ 8,000 ಮೀನುಗಾರರ ಮೇಲೆ ಭೀಕರ ಪರಿಣಾಮವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ನದಿಯ ನೀರು ಬತ್ತಿ ಹೋಗುತ್ತಿದ್ದು ಸಾವಿರಾರು ಮೀನುಗಾರರು ತಮ್ಮ ಬದುಕನ್ನು ಕಳೆದುಕೊಂಡಿದ್ದಾರೆ. ಅಷ್ಟು ಮಾತ್ರವಲ್ಲ ಜಲಚರಗಳ ಮೇಲೆ ಉಂಟಾಗಿರುವ ಪರಿಣಾಮದಿಂದಾಗಿ ಪರಿಸರಕ್ಕೂ ಹಾನಿಯಾಗುತ್ತಿದೆ. ಇವೆಲ್ಲವೂ 2005ರ ಅಕ್ಟೋಬರ್ 25ರಂದು ಮಾಡಿದ್ದ ಪಾರಿಸಾರಿಕ ಒಪ್ಪಂದಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಸಿಂಗ್ ದೂರಿದ್ದಾರೆ. ರಾಜ್ಯದ ಜೀವನಾಡಿ ಎಂದು ಆಂಧ್ರಪ್ರದೇಶ ಸರಕಾರ ವ್ಯಾಖ್ಯಾನಿಸಿರುವ ಪೊಲವರಮ್ ಅನ್ನು ಆಂಧ್ರಪ್ರದೇಶ ಪುನರ್‌ಸಂಘಟನಾ ಕಾಯ್ದೆ, 2014ರ ಅಡಿಯಲ್ಲಿ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X