Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರ್‌.ಆರ್ ನಗರ ಕ್ಷೇತ್ರ: ಶಾಂತಿಯುತ...

ಆರ್‌.ಆರ್ ನಗರ ಕ್ಷೇತ್ರ: ಶಾಂತಿಯುತ ಮತದಾನ

ರಾಜ್ಯ ವಿಧಾನಸಭಾ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ28 May 2018 9:24 PM IST
share
ಆರ್‌.ಆರ್ ನಗರ ಕ್ಷೇತ್ರ: ಶಾಂತಿಯುತ ಮತದಾನ

ಬೆಂಗಳೂರು, ಮೇ 28: ಜಾಲಹಳ್ಳಿಯಲ್ಲಿ ಸಾವಿರಾರು ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ಚುನಾವಣೆ ಗೊಂದಲ, ಪ್ರತಿಭಟನೆ, ಬಿಗುವಿನ ವಾತಾವರಣ ಹಾಗೂ ಪೊಲೀಸರ ಕಟ್ಟೆಚ್ಚರದ ನಡುವೆ ಶಾಂತಿಯುತವಾಗಿ ಜರುಗಿತು.

ಸೋಮವಾರ ಬೆಳಗ್ಗೆ 7 ಗಂಟೆಯಿಂದಲೇ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಎರಡು ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ದೋಷ ಕಂಡುಬಂದಿದ್ದು ಬಿಟ್ಟರೇ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ. ಒಟ್ಟು 14 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ಮೇ 31ರಂದು ಫಲಿತಾಂಶ ಹೊರಬೀಳಲಿದೆ.

ಬೆಳಗ್ಗೆ 7 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾರರು ಮತದಾನ ಮಾಡಿದರು. ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜಾಲಹಳ್ಳಿ, ಜೆ.ಪಿ.ಪಾರ್ಕ್, ಯಶವಂತಪುರ, ಎಚ್‌ಎಂಟಿ, ಲಕ್ಷ್ಮೀದೇವಿ ನಗರ, ಲಗ್ಗೆರೆ, ಕೊಟ್ಟಿಗೆಪಾಳ್ಯ, ಜ್ಞಾನಭಾರತಿ, ರಾಜರಾಜೇಶ್ವರಿ ನಗರ ವಾರ್ಡ್‌ಗಳನ್ನು ಒಳಗೊಂಡ ಒಟ್ಟು 421 ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರೀ ಕಟ್ಟೆಚ್ಚರ ವಹಿಸಲಾಗಿತ್ತು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ರಚನೆ ನಂತರದ ಮೊದಲ ಉಪಚುನಾವಣೆ ಇದಾಗಿರುವುದರಿಂದ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಈಗಾಗಲೇ ಮೂರು ಪಕ್ಷಗಳು ಪ್ರತಿಷ್ಠೆಯನ್ನು ಪಣವಾಗಿಟ್ಟು, ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರದ ಮೂಲಕ ಮತಯಾಚಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಮುನಿರತ್ನ, ಜೆಡಿಎಸ್‌ನಿಂದ ರಾಮಚಂದ್ರ ಸೇರಿದಂತೆ ಒಟ್ಟು 14 ಮಂದಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಆರ್.ಆರ್.ನಗರದಲ್ಲಿ ಗುರುತಿನ ಚೀಟಿ ಪ್ರಕರಣ ಹಿನ್ನೆಲೆಯಲ್ಲಿ ಪಾರದರ್ಶಕವಾಗಿ ಚುನಾವಣೆ ನಡೆಸುವ ಉದ್ದೇಶದಿಂದ ಈ ಹಿಂದೆ ಕ್ಷೇತ್ರದ ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಸಿಬ್ಬಂದಿಯ ಬದಲಾಗಿ, ಬೇರೆ ಕ್ಷೇತ್ರಗಳಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿದ್ದ 2524 ಸಿಬ್ಬಂದಿಯನ್ನು ಆಯೋಗ ನಿಯೋಜಿಸಿತ್ತು.

ಕೈಕೊಟ್ಟ ಇವಿಎಂ: ಚಾಮುಂಡೇಶ್ವರಿ ನಗರದ ಮತಗಟ್ಟೆಯಲ್ಲಿ ಬ್ಯಾಲೆಟ್ ಯುನಿಟ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ 1ಗಂಟೆಗೂ ಹೆಚ್ಚು ಕಾಲ ವೃದ್ಧರು ಹಾಗೂ ಮಹಿಳೆಯರು ಸಾಲಿನಲ್ಲಿ ನಿಲ್ಲುವಂತಾಯಿತು. ಮತಯಂತ್ರ ಸರಿಪಡಿಸಿದ ನಂತರವೂ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಅದನ್ನು ಸರಿಪಡಿಸಲು ಅಧಿಕಾರಿಗಳು ಹೆಣಗಾಟ ನಡೆಸಿದರು.

ಪ್ರತಿಭಟನೆ: ಸಿನೆಮಾ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಲಗ್ಗೆರೆಯಲ್ಲಿ ಮತಗಟ್ಟೆ ಸಮೀಪ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ಈ ನಡೆಯನ್ನು ಖಂಡಿಸಿ ಕಾರ್ಯಕರ್ತರು ಮತಗಟ್ಟೆ ಹತ್ತಿರದಲ್ಲೇ ಪ್ರತಿಭಟನೆ ನಡೆಸಿದರು.
ಲಗ್ಗೆರೆಯ ಮುನೇಶ್ವರ ಬಡಾವಣೆಯ ಸರಕಾರಿ ಶಾಲೆಯ ಮತಕೇಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶಾಂತಿಯುತ ವಾತಾವರಣವಿತ್ತು. ಬಿಗಿ ಪೊಲೀಸ್ ಬಂದೋಬಸ್ತ್ ಇದ್ದಿದ್ದರಿಂದ ಯಾವುದೇ ಸಮಸ್ಯೆಯಾಗಿರಲಿಲ್ಲ.

ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನರಿಗೆ ಆಪ್ತರಾದ ರಾಕ್‌ಲೈನ್ ವೆಂಕಟೇಶ್ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸ್ಥಳಕ್ಕೆ ಬಂದರು. ಮತಕೇಂದ್ರದಿಂದ 100 ಮೀಟರ್ ದೂರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟೇಬಲ್ ಹಾಕಿಕೊಂಡು ಚೀಟಿ ನೀಡುತ್ತಿದ್ದರು. ಅಲ್ಲಿಗೆ ತೆರಳಿದ ಅವರು ಕಾರ್ಯಕರ್ತರೊಡನೆ ನಿಂತುಕೊಂಡು ಮತಕೇಂದ್ರಕ್ಕೆ ತೆರಳುವವರ ಬಳಿ ಮಾತ ಯಾಚಿಸಿದರು ಎನ್ನಲಾಗಿದೆ.

ರಾಜರಾಜೇಶ್ವರಿ ನಗರದ ಶಾಸಕರಾಗಿರುವ ಮುನಿರತ್ನ ಐದು ವರ್ಷ ಅಭಿವೃದ್ಧಿ ಮಾಡಿದ್ದಾರೆ. ಜನರ ಸೇವೆ ಮಾಡಿದ್ದಾರೆ. ಅವರನ್ನೇ ಮತ್ತೊಮ್ಮೆ ಗೆಲ್ಲಿಸಿ ಎಂದು ಮತದಾರರಿಗೆ ಕೋರಿದರು. ಇದರಿಂದ ಸಿಟ್ಟಿಗೆದ್ದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ವಾರ್ಡ್‌ಗೆ ಸಂಬಂಧಪಟ್ಟಿಲ್ಲದವರು ಬಂದು ಈ ರೀತಿ ಮತ ಬೇಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಇದು ಪಕ್ಷಗಳ ಕಾರ್ಯಕರ್ತರ ನಡುವೆ ಜಗಳಕ್ಕೆ ಕಾರಣವಾಯಿತು ಎಂದು ತಿಳಿದು ಬಂದಿದೆ.

ಮತ ಚಲಾಯಿಸಿದ ಪ್ರಮುಖರು: ಐಡಿಯಲ್ ಹೋಮ್ಸ್ ಬಡಾವಣೆಯ ಮೌಂಟ್ ಕಾರ್ಮೆಲ್ ಸ್ಕೂಲ್‌ನಲ್ಲಿ ದಲಿತ ಕವಿ ಸಿದ್ದಲಿಂಗಯ್ಯ ಅವರು ಪತ್ನಿಯೊಂದಿಗೆ ಮತದಾನ ಮಾಡಿದರೆ, ಬಿಜೆಪಿ ಮುಖಂಡ ಆರ್.ಅಶೋಕ್ ಜಾಲಹಳ್ಳಿಯಲ್ಲಿ ಕುಟುಂಬ ಮೇತವಾಗಿ ಮತ ಚಲಾಯಿಸಿದರು.

ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಅವರು ಕುಟುಂಬ ಸಮೇತ ಬಂದು ಬಿಇಟಿ ಕಾನ್ವೆಂಟ್ ಸ್ಕೂಲ್‌ನಲ್ಲಿ ಮತ ಚಲಾಯಿಸಿದರು. ಈ ವೇಳೆ ಸೊಸೆ ಹಾಗೂ ನಟಿ ಅಮೂಲ್ಯ ಹಾಗೂ ಪತ್ರ ಜಗದೀಶ್ ಅವರಿಗೆ ಜೊತೆಯಲಿದ್ದರು.

ವಿಶೇಷ ವ್ಯಕ್ತಿಗಳ ಮತದಾನ
ಇದೇ ಮೊದಲ ಬಾರಿಗೆ ಭಿಕ್ಷುಕರ ಪುನರ್ವಸತಿ ಕೇಂದ್ರದಲ್ಲಿರುವವರಿಗೆ ಮತದಾನ ವ್ಯವಸ್ಥೆ ಕಲ್ಪಿಸಲಾಗಿತ್ತು. ಇಲ್ಲಿನ ಸುಂಕದಕಟ್ಟೆಯ ಶ್ರೀನಿವಾಸ ನಗರದ ಮತಗಟ್ಟೆಯಲ್ಲಿ 300ಕ್ಕೂ ಹೆಚ್ಚು ಭಿಕ್ಷುಕರು ತಮ್ಮ ಹಕ್ಕು ಚಲಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X