Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂದ್‌ಗೆ ಕರೆ ಬಿಜೆಪಿಯ ಬ್ಲಾಕ್‌ಮೇಲ್...

ಬಂದ್‌ಗೆ ಕರೆ ಬಿಜೆಪಿಯ ಬ್ಲಾಕ್‌ಮೇಲ್ ತಂತ್ರ: ಐವನ್ ಡಿಸೋಜಾ

ವಾರ್ತಾಭಾರತಿವಾರ್ತಾಭಾರತಿ28 May 2018 9:44 PM IST
share

ಮಂಗಳೂರು, ಮೇ 28: ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೈತರ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಬಂದ್‌ಗೆ ಕರೆ ನೀಡಿರುವುದು ಬ್ಲಾಕ್‌ಮೇಲ್ ತಂತ್ರ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜಾ ಆಕ್ಷೇಪಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಬಂದ್‌ಗೆ ಕರೆ ನೀಡಿದ್ದರೂ ರೈತರು ಬೀದಿಗಿಳಿದಿಲ್ಲ. ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಮಯ ನೀಡಲು ನಿರ್ಧರಿಸಿದ್ದಾರೆ. ಇದರಿಂದಾಗಿ ಬಿಜೆಪಿ ಬಂದ್ ಕರೆ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸ್ವಂತ ಬಲದಲ್ಲಿ ಸರಕಾರ ರಚನೆ ಮಾಡಿದರೆ ಸಾಲ ಮನ್ನಾ ಮಾಡುವುದಾಗಿ ಹೇಳಿಕೆ ನೀಡಿದ್ದರು.

ಇದೀಗ ಸಮ್ಮಿಶ್ರ ಸರಕಾರ ಅಸ್ತಿತ್ವದಲ್ಲಿದೆ. ಆದರೆ ಅವರು ಸಾಲ ಮನ್ನಾ ಮಾಡುವುದಿಲ್ಲ ಎಂದುಹೇಳಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸಿಕೊಂಡು ಇತರ ನಾಯಕರ ಜತೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಬೇಕಿದೆ. ಇದು ಜನತೆಗೆ, ರೈತರಿಗೂ ಅರ್ಥವಾಗಿದೆ. ಆದರೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಏನೂ ಮಾಡಿಲ್ಲ. ವಿರೋಧ ಪಕ್ಷವಾಗಿದ್ದಾಗಲೂ ಏನೂ ಮಾಡದೆ ಇದೀಗ ಸುಮ್ಮನೆ ಜನರ ದಿಕ್ಕುತಪ್ಪಿಸುವ ಪ್ರಯತ್ನ ನಡೆಸಿದೆ. ಹಿಂದೆ ಬಿಜೆಪಿಯ ನಾಯಕರಾದ ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್, ಸಹಕಾರಿ ಸಂಘಗಳ ಸಾಲ ಮನ್ನಾ ಮಾಡಿ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾವನ್ನು ಕೇಂದ್ರ ಸರಕಾರದಿಂದ ನಾವು ಮಾಡಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ ಅದು ಸಾಧ್ಯವಾಗಿಲ್ಲ ಎಂದು ಐವನ್ ಡಿಸೋಜಾ ಹೇಳಿದರು.

ಸಮ್ಮಿಶ್ರ ಸರಕಾರದ ಮೈತ್ರಿಯನ್ನು ಅಪವಿತ್ರ ಎಂದು ಬಿಜೆಪಿ ಹೇಳುತ್ತಿದೆ. ಬಿಜೆಪಿಗೆ 104 ಸ್ಥಾನವನ್ನು ಜನತೆ ನೀಡಿದ್ದರು. ಸರಕಾರ ರಚಿಸಲು ಅವಕಾಶ ನೀಡಲಾಗಿತ್ತು. ಆದರೆ ಯಡಿಯೂರಪ್ಪನವರು ವಿಶ್ವಾಸಮತವನ್ನು ಎದುರಿಸದೆಯೇ ಓಡಿ ಹೋದರು. ಬಿಜೆಪಿಗೆ ಕಾಂಗ್ರೆಸ್‌ಗಿಂತ ಹೆಚ್ಚು ಸ್ಥಾನ ಸಿಕ್ಕಿರಬಹುದು. ಆದರೆ ರಾಜ್ಯದಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಶೇ. 1.8ರಷ್ಟು ಮತಗಳಿಕೆಯಲ್ಲಿ ಮುಂದಿದೆ ಎಂದರು.ಜಿಲ್ಲೆಯಲ್ಲಿ ಯಾವ ಕಾರಣಗಳಿಗಾಗಿ ಕಾಂಗ್ರೆಸ್‌ಗೆ ಈ ಸೋಲು ಎಂಬುದರ ಬಗ್ಗೆ ಚರ್ಚಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಕೋಮುಗಲಭೆಗೆ ಹೆಚ್ಚು ಪ್ರಚಾರವನ್ನು ಬಿಜೆಪಿ ನೀಡಿದ್ದೂ ಇದಕ್ಕೆ ಕಾರಣವಾಗಿದೆ. ಸಮ್ಮಿಶ್ರ ಸರಕಾರದ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಆ ತಪ್ಪನ್ನು ಸರಿಪಡಿಸಲಾಗುವುದು ಎಂದವರು ಹೇಳಿದರು.ಗೋಷ್ಠಿಯಲ್ಲಿ ಅಶೋಕ್ ಡಿ.ಕೆ., ಪುನೀತ್ ಶೆಟ್ಟಿ, ಸಿರಿಲ್ ಡಿಸೋಜಾ, ಹಬೀಬ್ ಕಣ್ಣೂರು, ಜ್ಞಾನೇಶ್, ಮುದಸ್ಸಿರ್ ಕುದ್ರೋಳಿ, ನಝೀರ್ ಬಜಾಲ್ ಉಪಸ್ಥಿತರಿದ್ದರು.

ಸಚಿವ ಸ್ಥಾನದ ಅವಕಾಶ ಸಿಕ್ಕರೆ ಕೆಲಸ ಮಾಡಲು ಬದ್ಧಸಮ್ಮಿಶ್ರ ಸರಕಾರದಲ್ಲಿ ಸಚಿವ ಸ್ಥಾನ ಸಿಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ, ನಿರೀಕ್ಷೆ ಇದ್ದೇ ಇರುತ್ತದೆ. ಅವಕಾಶ ಕೊಟ್ಟರೆ ಕೆಲಸ ಮಾಡಲು ಬದ್ಧ. ಎರಡು ವರ್ಷ ವಿಧಾನಪರಿಷತ್‌ನ ಮುಖ್ಯ ಸಚೇತಕನಾಗಿ ಕಾರ್ಯನಿರ್ವಹಿಸಿದ ಅನುಭವವೂ ಇದೆ ಎಂದು ಐವನ್ ಡಿಸೋಜಾ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X