Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯದಲ್ಲಿ ಬಂದ್ ಸಂಪೂರ್ಣ ವಿಫಲ: ಬಲವಂತ...

ಮಂಡ್ಯದಲ್ಲಿ ಬಂದ್ ಸಂಪೂರ್ಣ ವಿಫಲ: ಬಲವಂತ ಬಂದ್‍ಗೆ ಮುಂದಾದ ಬಿಜೆಪಿ ಕಾರ್ಯಕರ್ತರ ಬಂಧನ

ವಾರ್ತಾಭಾರತಿವಾರ್ತಾಭಾರತಿ28 May 2018 11:07 PM IST
share
ಮಂಡ್ಯದಲ್ಲಿ ಬಂದ್ ಸಂಪೂರ್ಣ ವಿಫಲ: ಬಲವಂತ ಬಂದ್‍ಗೆ ಮುಂದಾದ ಬಿಜೆಪಿ ಕಾರ್ಯಕರ್ತರ ಬಂಧನ

ಮಂಡ್ಯ, ಮೇ 28: ಭರವಸೆ ನೀಡಿದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ರೈತರ ಸಾಲಮನ್ನಾ ಮಾಡಿಲ್ಲವೆಂದು ರಾಜ್ಯವ್ಯಾಪಿ ಕರೆ ನೀಡಿದ್ದ ಬಂದ್‍ಗೆ ಜಿಲ್ಲೆಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗದೆ ಸಂಪೂರ್ಣ ವಿಫಲವಾಯಿತು.

ಜಿಲ್ಲೆಯ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೊಟೇಲ್, ಸಿನಿಮಾ, ಪೆಟ್ರೋಲ್ ಬಂದ್, ಶಾಲಾ-ಕಾಲೇಜು ಸೇರಿದಂತೆ ಸರಕಾರಿ, ಅರೆ ಸರಕಾರಿ, ಖಾಸಗಿ ಉದ್ಯಮಗಳು ಕಾರ್ಯನಿರ್ವಹಿಸಿದವು. ಬಸ್ ಮತ್ತಿತರ ವಾಹನ ಸಂಚಾರ ಎಂದಿನಂತೆ ಇತ್ತು.

ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಲು ಮುಂದಾದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು. ಜಿ.ಪಂ ಸದಸ್ಯ ಎನ್.ಶಿವಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ನಾಗಣ್ಣಗೌಡ, ನಗರಾಧ್ಯಕ್ಷ ಬೇಕ್ರಿ ಅರವಿಂದ್, ಮಲ್ಲಿಕಾರ್ಜುನ್, ಶಿವು, ಶಿವಕುಮಾರ್ ಆರಾಧ್ಯ, ಹನಿಯಂಬಾಡಿ ನಾಗರಾಜು ಸೇರಿದಂತೆ ಹಲವರು ಬಂಧಿತರಾಗಿದ್ದರು.

ಮದ್ದೂರು ವರದಿ: ಪಟ್ಟಣದಲ್ಲಿ ಎಂದಿನಂತೆ ಎಲ್ಲಾ ಅಂಗಡಿಗಳನ್ನು ತೆರೆಯಲಾಗಿತ್ತು. ವಾಹನ ಸಂಚಾರ ಎಂದಿನಂತೆ ಇತ್ತು. ಬಿಜೆಪಿ ಕಾರ್ಯಕರ್ತರು ಪ್ರವಾಸಿ ಮಂದಿರದಿಂದ ಬೈಕ್ ರ್ಯಾಲಿ ಮೂಲಕ ಆಗಮಿಸಿ ಕೆಲವು ಅಂಗಡಿಗಳನ್ನು ಮುಚ್ಚಿಸಿದರು. ಆದರೆ, ಅವರ ಅತ್ತ ಹೋಗುತ್ತಿದ್ದಂತೆ ಇತ್ತ ವರ್ತಕರು ಅಂಗಡಿ ತೆರೆದು ತಮ್ಮ ವಹಿವಾಟು ಮುಂದುವರಿಸಿದರು.  

ಬಿಜೆಪಿ ಜಿಲ್ಲಾ ಉಪಾದ್ಯಕ್ಷ ಎಂ.ಸತೀಶ್, ಜಿಲ್ಲಾ ಕಾರ್ಯದರ್ಶಿ ರೂಪ, ಯುವ ಮೋರ್ಚಾ ಉಪಾಧ್ಯಕ್ಷ ಗುರುಮಲ್ಲೇಶ್, ಕ್ಷೇತ್ರ ಪ್ರದಾನ ಕಾರ್ಯದರ್ಶಿ ಎಂ.ಸಿ.ಸಿದ್ದು, ಜಿ.ಸಿ.ಮಹೇಂದ್ರ, ಚಾಮನಹಳ್ಳಿ ಮಹೇಂದ್ರ, ಕೆಂಪುಬೋರಯ್ಯ, ಸ್ವಾಮಿ ಇತರರು ಭಾಗವಹಿಸಿದ್ದರು.

ಪಾಂಡವಪುರ ವರದಿ: ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಡಾ.ರಾಜಕುಮಾರ್ ವೃತ್ತದಲ್ಲಿ ಜಮಾವಣೆಗೊಂಡು ಶ್ರೀರಂಗಪಟ್ಟಣ-ಬೀದರ್ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಪಟ್ಟಣದ ಡಾ.ರಾಜಕುಮಾರ್ ವೃತ್ತದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲು ಬಲವಂತ ಮಾಡಿದ ಎಚ್.ಎನ್.ಮಂಜುನಾಥ್, ಜಿಲ್ಲಾ ಎಸ್‍ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸನಾಯಕ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಹಿರೇಮರಳಿ ಸಂದೇಶ್ ಸೇರಿದಂತೆ 12ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.

ತಾಲೂಕು ರೈತ ಮೋರ್ಚಾ ಅಧ್ಯಕ್ಷ ನೀಲನಹಳ್ಳಿ ಧನಂಜಯ, ಮುಖಂಡರಾದ ಎಚ್.ಕೆ.ದೊರೆಸ್ವಾಮಿ, ಎಚ್.ಶ್ರೀನಿವಾಸ್, ಬೀರಶೆಟ್ಟಹಳ್ಳಿ ಮಧು, ಶ್ರೀನಿವಾಸನಾಯಕ, ಬಾಲು, ವೀರಭದ್ರಸ್ವಾಮಿ, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X