Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಹವಾಲು ನೀಡಲು ಬಂದವರಿಗೆ ಮಜ್ಜಿಗೆ,...

ಅಹವಾಲು ನೀಡಲು ಬಂದವರಿಗೆ ಮಜ್ಜಿಗೆ, ಬಿಸ್ಕೆಟ್: ಯುವತಿಯ ವಿದ್ಯಾಭ್ಯಾಸದ ಖರ್ಚು ಭರಿಸುವ ಭರವಸೆ ನೀಡಿದ ಸಿಎಂ

ಮುಖ್ಯಮಂತ್ರಿಯ ಮೊದಲ ಜನತಾದರ್ಶನದ ಹೈಲೈಟ್ಸ್

ವಾರ್ತಾಭಾರತಿವಾರ್ತಾಭಾರತಿ29 May 2018 6:32 PM IST
share
ಅಹವಾಲು ನೀಡಲು ಬಂದವರಿಗೆ ಮಜ್ಜಿಗೆ, ಬಿಸ್ಕೆಟ್: ಯುವತಿಯ ವಿದ್ಯಾಭ್ಯಾಸದ ಖರ್ಚು ಭರಿಸುವ ಭರವಸೆ ನೀಡಿದ ಸಿಎಂ

ಬೆಂಗಳೂರು, ಮೇ 29: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಅಧಿಕೃತ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಇದೇ ವೇಳೆ, ಅನೇಕರು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದು ವಿಶೇಷವಾಗಿತ್ತು.

ಮಂಗಳವಾರ ಬೆಳಗ್ಗೆಯಿಂದಲೇ ಕುಮಾರಕೃಪಾದಲ್ಲಿರುವ ಕೃಷ್ಣಾ ಬಳಿ ವಿವಿಧ ಜಿಲ್ಲೆಗಳಿಂದ ಬಂದಿದ್ದ ಜನರು, ತಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಿ, ಸಹಾಯ ಮಾಡಿ ಎಂದು ಮನವಿ ಪತ್ರ ಕೈಯಲ್ಲಿ ಹಿಡಿದು ಮುಖ್ಯಮಂತ್ರಿ ಬಳಿ ಕೋರಿದರು.

ಜನತಾ ದರ್ಶನದಲ್ಲಿ ಹಿರಿಯ ನಾಗರಿಕರು ನಿವೇಶನ, ಮಾಸಾಶನ, ಉದ್ಯೋಗಕ್ಕಾಗಿ ಮನವಿ ಸಲ್ಲಿಸಿದರೆ, ಯುವಕರು ಉದ್ಯೋಗ, ಸಾಲ ನೀಡುವಂತೆ ಕೋರಿದರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ನಡೆಸಿದ್ದ ಜನತಾ ದರ್ಶನದಲ್ಲಿ ಪರಿಹಾರ ಕಂಡು ಕೊಂಡವರು ಅವರನ್ನು ಭೇಟಿಯಾಗಿ ಅಭಿನಂದನೆಗಳನ್ನು ಸಲ್ಲಿಸಿ ಸಂತಸ ವ್ಯಕ್ತಪಡಿಸಿದರು.

ರಾಜಾಜಿನಗರದ ಎಂ.ಗಂಗಪ್ಪ ಎಂಬುವವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಮಗೆ ನೆರವು ನೀಡಬೇಕೆಂದು 2010 ರಿಂದ ಮನವಿ ಸಲ್ಲಿಸುತ್ತಲೇ ಬಂದಿದ್ದೇವೆ. ಆದರೆ, ಇದುವರೆಗೆ ಯಾವುದೆ ಸ್ಪಂದನ ಸಿಕ್ಕಿಲ್ಲ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ತಮ್ಮ ಪುತ್ರಿ ಮಾನಸಿಕ ಅಸ್ವಸ್ಥೆಯಾಗಿದ್ದು, ಆಕೆಯನ್ನು ನಾನೇ ಸಾಕಬೇಕಿದೆ. ಜೊತೆಗೆ ಬಾಡಿಗೆ ಮನೆಯಲ್ಲಿದ್ದು, ಅದನ್ನು ಭರಿಸುವುದು ಸಹ ಕಷ್ಟವಾಗಿದೆ ಎಂದು ಗಂಗಪ್ಪ ಹಾಗೂ ಅವರ ಪತ್ನಿ ತಮಗೆ ಸಹಾಯ ಮಾಡಬೇಕೆಂದು ಬೇಡಿಕೊಂಡರು.

ಅದೇ ರೀತಿ, ಗ್ರಾಮ ಸಹಾಯಕ ಹುದ್ದೆ ಪರೀಕ್ಷೆ ಬರೆದು, ಕೆಲಸಕ್ಕೆ ಆಯ್ಕೆಯಾಗಿಯೂ ಕಡೆ ಹಂತದಲ್ಲಿ ನೌಕರಿಯಿಂದ ವಂಚಿತರಾಗಿದ್ದ ಚನ್ನಪಟ್ಟಣದ ಸಂಗೀತಾ ಎಂಬುವವರು ನೌಕರಿ ವಿಚಾರವಾಗಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಕೂಡಲೇ ರಾಮನಗರ ಜಿಲ್ಲಾಧಿಕಾರಿಗೆ ಕರೆ ಮಾಡಿದ ಕುಮಾರಸ್ವಾಮಿ ಮಾಹಿತಿ ಪಡೆದರು. 18 ವರ್ಷ ತುಂಬದ ಕಾರಣಕ್ಕೆ ಕೆಲಸಕ್ಕೆ ಆಯ್ಕೆಯಾಗಿಲ್ಲ ಎಂದು ರಾಮನಗರ ಜಿಲ್ಲಾಧಿಕಾರಿ ಮುಖ್ಯಮಂತ್ರಿಗೆ ತಿಳಿಸಿದರು. ನಂತರ ಸಂಗೀತಾ ಪಾಲಕರೊಂದಿಗೆ ಮಾತನಾಡಿ ವಿದ್ಯಾಭ್ಯಾಸ ಮುಂದುವರೆಸಿ ಖರ್ಚು ನಾನು ನೋಡಿಕೊಳ್ಳುತ್ತೇನೆ ಎಂದು ಕುಮಾರಸ್ವಾಮಿ ನುಡಿದರು.

ಮಾಸಾಶನ ಹೆಚ್ಚಳ, ನಿವೇಶನ ಸೌಲಭ್ಯ, ರಿಯಾಯಿತಿ ಬಸ್ ಪಾಸ್ ನೀಡುವಂತೆ ವಿಜಯಪುರದಿಂದ ಬಂದಿದ್ದ ಹಿರಿಯ ನಾಗರಿಕರು ಮನವಿ ಸಲ್ಲಿಸಿದರು. ಕುಣಿಗಲ್ ಮೂಲದ ಗೋವಿಂದಪ್ಪ ಎಂಬುವವರು ತಮಗೊಂದು ನಿವೇಶನ ಒದಗಿಸುವಂತೆ ಕೋರಿದರು.

ಉಡುಗೊರೆ, ಅಭಿನಂದನೆ

2006ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಜನತಾದರ್ಶನದ ಮೂಲಕ ಉದ್ಯೋಗ ಪಡೆದಿದ್ದ ಸರಿತಾ ಎಂಬ ಮಹಿಳೆ ಮಂಗಳವಾರ ಜನತಾ ದರ್ಶನಕ್ಕೆ ಆಗಮಿಸಿ ಮುಖ್ಯಮಂತ್ರಿಗೆ ಗಣೇಶನ ಮೂರ್ತಿಯ ಉಡುಗೊರೆ ನೀಡಿದರು. ಇದೆಲ್ಲದರ, ನಡುವೆ ಹಲವರು ಕಚೇರಿ ಕೃಷ್ಣಾ ಬಳಿ ಆಗಮಿಸಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಶುಭ ಕೋರಿದರು

ಅತಿಥಿ ಸತ್ಕಾರ

ಜನತಾ ದರ್ಶನಕ್ಕೆ ಅಹವಾಲು ಹಿಡಿದು ಬರುವ ನಾಗರಿಕರನ್ನು ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಗಳ ಅಧಿಕೃತ ಕಚೇರಿ ಕೃಷ್ಣಾದಲ್ಲಿ ಅತಿಥಿಗಳಂತೆ ಸತ್ಕರಿಸಲಾಯಿತು. ಮಜ್ಜಿಗೆ, ಬಿಸ್ಕೆಟ್ ನೀಡಿ ಸಾರ್ವಜನಿಕರನ್ನು ಅಧಿಕಾರಿಗಳು ಉಪಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X