Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರಿಗೆ ಸಿಗಲಿದೆಯೇ ಸಿಹಿ ಸುದ್ದಿ?

ರೈತರಿಗೆ ಸಿಗಲಿದೆಯೇ ಸಿಹಿ ಸುದ್ದಿ?

ಆಂಧ್ರ-ತೆಲಂಗಾಣ ಮಾದರಿಯಲ್ಲಿ ಸಾಲ ಮನ್ನಾ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ29 May 2018 6:48 PM IST
share
ರೈತರಿಗೆ ಸಿಗಲಿದೆಯೇ ಸಿಹಿ ಸುದ್ದಿ?

ಬೆಂಗಳೂರು, ಮೇ 29: ರೈತರ ಸಾಲ ಮನ್ನಾ ವಿಚಾರದಲ್ಲಿ ಬುಧವಾರ ನಿರ್ಧಾರ ಪ್ರಕಟಿಸುವ ಕುರಿತು ಘೋಷಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಆಂಧ್ರಪ್ರದೇಶ-ತೆಲಂಗಾಣ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿಯೂ ರೈತರ ಸಾಲ ಮನ್ನಾ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಕುಮಾರಸ್ವಾಮಿ, 53 ಸಾವಿರ ಕೋಟಿ ರೂ.ಸಾಲ ಮನ್ನಾದಿಂದಾಗಿ ರಾಜ್ಯದ ಬೊಕ್ಕಸದ ಮೇಲೆ ಆಗುವ ಹೊರೆ, ಆರ್ಥಿಕ ಅಸಮತೋಲನ, ಸಂಪನ್ಮೂಲ ಕ್ರೋಡೀಕರಣ ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಮಾಹಿತಿಯನ್ನು ಪಡೆದುಕೊಂಡರು.

ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿಯೂ ರೈತರ ಸಾಲ ಮನ್ನಾ ಆಗಿದೆ. ಇದರಿಂದಾಗಿ, ಆಂಧ್ರಪದೇಶದ ಬೊಕ್ಕಸಕ್ಕೆ 22 ಸಾವಿರ ಕೋಟಿ ರೂ.ಹಾಗೂ ತೆಲಂಗಾಣ ಸರಕಾರದ ಬೊಕ್ಕಸಕ್ಕೆ 17 ಸಾವಿರ ಕೋಟಿ ರೂ.ಗಳ ಹೊರೆಯಾಗಿದೆ. ಇದನ್ನು ಎರಡು ರಾಜ್ಯಗಳ ಸರಕಾರಗಳು ಕಂತುಗಳ ಮೂಲಕ ಸಂಬಂಧಪಟ್ಟ ಬ್ಯಾಂಕುಗಳಿಗೆ ಪಾವತಿಸುತ್ತಿವೆ ಎಂದು ತಿಳಿದು ಬಂದಿದೆ.

ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಿದ ಬಳಿಕ ಆ ಹಣವನ್ನು ಸಂಬಂಧಪಟ್ಟ ಬ್ಯಾಂಕುಗಳಿಗೆ ಸರಕಾರವೇ ನೇರವಾಗಿ ಕಂತುಗಳ ಮೂಲಕ ಪಾವತಿಸುತ್ತದೆ. ಹಣಕಾಸಿನ ವ್ಯವಹಾರಕ್ಕೆ ಸರಕಾರದ ಭದ್ರತೆ ಇರುವ ಕಾರಣದಿಂದ ಬ್ಯಾಂಕುಗಳು ಸಮ್ಮತಿ ನೀಡಿವೆ. ಅದೇ ಮಾದರಿಯನ್ನು ನಮ್ಮ ರಾಜ್ಯದಲ್ಲಿ ಅನುಸರಿಸುವ ಕುರಿತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಏಕಕಾಲಕ್ಕೆ 53 ಸಾವಿರ ಕೋಟಿ ರೂ.ಗಳನ್ನು ಬ್ಯಾಂಕುಗಳಿಗೆ ಹಣ ಸಂದಾಯ ಮಾಡುವುದು ಅಸಾಧ್ಯ ಎಂಬುದು ಮುಖ್ಯಮಂತ್ರಿಗೂ ಗೊತ್ತಿದೆ. ಆದುದರಿಂದಲೇ, ಆಂಧ್ರ-ತೆಲಂಗಾಣ ಮಾದರಿಯನ್ನು ಅನುಸರಿಸಲು ಮುಂದಾಗಿದ್ದಾರೆ. ಇದಕ್ಕೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಂತುಗಳ ಪಾವತಿ ಮಾಡಲು ಬೇಕಾದ ಹೆಚ್ಚುವರಿ ಹಣವನ್ನು ಯಾವ ರೀತಿಯಲ್ಲಿ ಕ್ರೋಡೀಕರಿಸಿ, ಸರಕಾರದ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದು ಎಂಬ ಸಲಹೆಯನ್ನು ಅಧಿಕಾರಿಗಳು ನೀಡಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ನಾಳೆ ರೈತ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ತಮ್ಮ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.

ಹಣಕಾಸು ಇಲಾಖೆಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಹಗ್ಗಜಗ್ಗಾಟ ಮುಂದುವರೆದಿರುವ ನಡುವೆಯೇ, ಹಣಕಾಸು ಇಲಾಖೆಯನ್ನು ಮುಖ್ಯಮಂತ್ರಿ ಅಧೀನದಲ್ಲೆ ಇರಿಸಲು ಕಾಂಗ್ರೆಸ್ ಹೈಕಮಾಂಡ್ ಸಹಮತ ವ್ಯಕ್ತಪಡಿಸಿದೆ ಎನ್ನಲಾಗಿದೆ.

ಹಣಕಾಸು ಇಲಾಖೆ ಇಲ್ಲದೇ ಮುಖ್ಯಮಂತ್ರಿ ಸ್ಥಾನವನ್ನು ಇಟ್ಟುಕೊಂಡು ನಾನು ಏನು ಮಾಡಲಿ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದರಿಂದ, ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್, ಹಣಕಾಸು ಇಲಾಖೆಗಾಗಿ ಹಿಡಿದಿದ್ದ ಪಟ್ಟನ್ನು ಸಡಿಲಗೊಳಿಸಿದೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X