Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನ ಸ್ಥಿತಿಗೆ ಪಾಲಿಕೆಯ...

ಮಂಗಳೂರಿನ ಸ್ಥಿತಿಗೆ ಪಾಲಿಕೆಯ ನಿರ್ಲಕ್ಷ್ಯ ಕಾರಣ: ಮುನೀರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ29 May 2018 8:00 PM IST
share
ಮಂಗಳೂರಿನ ಸ್ಥಿತಿಗೆ ಪಾಲಿಕೆಯ ನಿರ್ಲಕ್ಷ್ಯ ಕಾರಣ: ಮುನೀರ್ ಆರೋಪ

ಮಂಗಳೂರು, ಮೇ 29: ಮಂಗಳೂರಿನ ಇಂದಿನ ದಯನೀಯ ಸ್ಥಿತಿಗೆ ಪಾಲಿಕೆಯ ನಿರ್ಲಕ್ಷ್ಯ ಕಾರಣ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಮುಂಗಾರು ಮಳೆ ಆರಂಭಗೊಂಡ ಗಂಟೆಯೊಳಗಡೆ ಮಂಗಳೂರಿನಲ್ಲಿ ಪ್ರವಾಹ ಬಂದು ನೂರಾರು ಮನೆಗಳು ಮುಳುಗಿರುವುದು, ರಸ್ತೆಗಳು ಜಲಾವೃತಗೊಂಡು ಅಪಾಯಕಾರಿ ಸ್ಥಿತಿ ನಿರ್ಮಾಣಗೊಂಡಿರುವುದು ಆತಂಕದ ಸಂಗತಿ. ನೀರು ಹರಿಯುವ ಕಾಲುವೆ, ತೋಡುಗಳ ಅತಿಕ್ರಮಣ, ರಸ್ತೆ, ಲೇಔಟ್, ಕಟ್ಟಡಗಳ ನಿರ್ಮಾಣ ಸಹಿತ ಅಭಿವೃದ್ಧಿ ಕಾಮಗಾರಿಗಳ ಸಂದರ್ಭದ ದೂರದೃಷ್ಟಿಯ ಕೊರತೆ, ಮಳೆಗಾಲವನ್ನು ಎದುರಿಸುವ ಸಿದ್ಧತೆಯನ್ನು ನಗರ ಪಾಲಿಕೆ ಕೇವಲ ಮಾತಿಗಷ್ಟೆ ಸೀಮಿತಗೊಳಿಸಿರುವುದು ಮಂಗಳೂರಿನ ಇಂದಿನ ದಯನೀಯ ಸ್ಥಿತಿಗೆ ಕಾರಣ ಎಂದವರು ಆರೋಪ ಮಾಡಿದ್ದಾರೆ.

ಜಿಲ್ಲಾಡಳಿತ ಈಗಲಾದರೂ ಸಮರೋಪಾದಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಂಡು ಜನತೆಯನ್ನು ರಕ್ಷಿಸಬೇಕು, ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಬೇಕು, ಸಂತ್ರಸ್ತ ನಾಗರಿಕರಿಗೆ ನಷ್ಟ ಪರಿಹಾರವನ್ನು ಒದಗಿಸಬೇಕು, ಮಂಗಳೂರಿನಲ್ಲಿ ಉಂಟಾಗಿರುವ ಗಂಭೀರ ಸ್ಥಿತಿಯನ್ನು ಪರಿಗಣಿಸಿ ರಾಜ್ಯ ಸರಕಾರ ತುರ್ತು ಪರಿಹಾರಕ್ಕಾಗಿ ತನ್ನ ವಿಶೇಷ ತಂಡವನ್ನು ಜಿಲ್ಲೆಗೆ ಕಳುಹಿಸಿಕೊಡಬೇಕು ಹಾಗೂ ಹಣಕಾಸಿನ ನೆರವು ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹೆದ್ದಾರಿ ಅಭಿವೃದ್ಧಿಯ ಸಂದರ್ಭ ನಡೆಸಿದ ಅವೈಜ್ಞಾನಿಕವಾಗಿ ಕಾಮಗಾರಿ, ನಗರದ ಹೊರವಲಯದ ಕೃಷಿಭೂಮಿ, ನೀರು ನಿಲ್ಲುವ ತಗ್ಗು ಪ್ರದೇಶದ ಮೈದಾನಗಳು, ರಾಜಾಕಾಲುವೆ, ತೋಡುಗಳನ್ನು ರಿಯಲ್ ಎಸ್ಟೇಟ್ ಲಾಬಿಗಳು ಬೇಕಾಬಿಟ್ಟಿ ಮಣ್ಣುತುಂಬಿ ಲೇಔಟ್‌ಗಳನ್ನಾಗಿ ಪರಿವರ್ತಿಸಿರುವುದು, ವಸತಿ ಸಂಕೀರ್ಣ ನಿರ್ಮಿಸಿರುವುದು ಒಂದು ಜಡಿಮಳೆಗೆ ಮಂಗಳೂರು ತತ್ತರಗೊಳ್ಳಲು ಕಾರಣ. ರಸ್ತೆಗಳನ್ನು ಮುಖ್ಯವಾಗಿ ಲೇಔಟ್, ಮನೆ ನಿವೇಶನಗಳನ್ನು ಸಿದ್ಧಪಡಿಸುವಾಗ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆಗಳು ನಿರ್ಮಾಣಗೊಳ್ಳುವಂತೆ ಪಾಲಿಕೆ ಖಾತರಿಪಡಿಸಿದ್ದರೆ, ತೋಡು - ರಾಜಾಕಾಲುವೆಗಳು ಅತಿಕ್ರಮಣಗೊಳ್ಳುವುದನ್ನು ತಡೆದಿದ್ದರೆ ಇಂದು ಇಂತಹ ಸ್ಥಿತಿ ಉದ್ಭವಗೊಳ್ಳುತ್ತಿರಲಿಲ್ಲ. ಈ ಕುರಿತು ಹಿಂದೆ ಡಿವೈಎಫ್ ಐ ಸಹಿತ ನಾಗರಿಕ ಸಂಘಟನೆಗಳು ಜಿಲ್ಲಾಡಳಿತಕ್ಕೆ ಹಲವು ದೂರುಗಳನ್ನು ಸಲ್ಲಿಸಿದ್ದವು. ಆದರೆ ಭೂ ಮಾಫಿಯಾ, ರಿಯಲ್ ಎಸ್ಟೇಟ್ ಲಾಬಿಗಳೊಂದಿಗೆ ಶಾಮೀಲಾದ ಭ್ರಷ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಎಲ್ಲಾ ಅಕ್ರಮಗಳನ್ನು ತಪ್ಪಾದ ದಾರಿಯಲ್ಲಿ ಮುಚ್ಚಿಹಾಕಿದ್ದರು. ಕೊಟ್ಟಾರ ಚೌಕಿ ಭಾಗದಲ್ಲಿ ಇಂತಹ ಬಹುದೊಡ್ಡ ಅಕ್ರಮದ ವಿರುದ್ಧ ಹಲವು ಬಾರಿ ಧ್ವನಿ ಎತ್ತಿದ್ದರೂ ನಮ್ಮ ದೂರುಗಳನ್ನ ಕಡೆಗಣಿಸಲಾಗಿತ್ತು. ಇಂದು ಅದೇ ಪ್ರದೇಶದಲ್ಲಿ ಅತಿಹೆಚ್ಚು ಹಾನಿ ಸಂಭವಿಸಿದೆ. ಇಂತಹ ಅಕ್ರಮಗಳ ಕುರಿತು ಸರಕಾರ ನ್ಯಾಯಯುತ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಂಡು ಭವಿಷ್ಯದಲ್ಲಿ ಇಂತಹ ತಪ್ಪುಗಳು ಆಗದಂತೆ ನಿಗಾವಹಿಸಬೇಕು ಮುನೀರ್ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X