Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉದ್ಯಾವರ: ನೂರಾರು ಮರಗಳು ಧರೆಗೆ, 35ಕ್ಕೂ...

ಉದ್ಯಾವರ: ನೂರಾರು ಮರಗಳು ಧರೆಗೆ, 35ಕ್ಕೂ ಅಧಿಕ ಮನೆಗಳಿಗೆ ಹಾನಿ

ಐವರಿಗೆ ಗಾಯ, ಏಳು ವಾಹನಗಳು ಜಖಂ, 14ಲಕ್ಷ ರೂ. ನಷ್ಟ

ವಾರ್ತಾಭಾರತಿವಾರ್ತಾಭಾರತಿ29 May 2018 8:37 PM IST
share
ಉದ್ಯಾವರ: ನೂರಾರು ಮರಗಳು ಧರೆಗೆ, 35ಕ್ಕೂ ಅಧಿಕ ಮನೆಗಳಿಗೆ ಹಾನಿ

ಉಡುಪಿ, ಮೇ 29: ಕಳೆದ ರಾತ್ರಿ ಸುರಿದ ಭಾರೀ ಮಳೆಗಾಳಿಗೆ ಉದ್ಯಾವರ ಗ್ರಾಪಂ ವ್ಯಾಪ್ತಿಯಲ್ಲಿ ನೂರಾರು ಮರಗಳು ಧರೆಗೆ ಉರುಳಿದ್ದು, 35ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿ, 14ಲಕ್ಷ ರೂ. ನಷ್ಟ ಉಂಟಾಗಿದೆ. ಮಕ್ಕಳು ಸಹಿತ ಐದು ಮಂದಿಗೆ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಉದ್ಯಾವರ ಬಿಲ್ಲವ ಸಂಘದ ಹಿಂಬದಿಯ ಜಲಜ ಪೂಜಾರ್ತಿ ಎಂಬವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಹೆಂಚು ತಾಗಿ ಮನೆಯೊಳಗೆ ಇದ್ದ ಪ್ರಜ್ವಲ್ ಹಾಗೂ ವೃದ್ಧೆಯೊಬ್ಬರು ಗಾಯಗೊಂಡಿದ್ದಾರೆ. ಅದೇ ರೀತಿ ಶಂಭು ಕಲ್ಲು ದೇವಸ್ಥಾನದ ಬಳಿ ಎರಡು ಮನೆಗಳ ಮೇಲೆ ಮರ ಬಿದ್ದು ಮೂವರು ಮಕ್ಕಳು ಗಾಯಗೊಂಡಿರುವ ಬಗ್ಗೆ ಮೂಲಗಳು ತಿಳಿಸಿವೆ.

ಉದ್ಯಾವರ ಮಸೀದಿಯ ಖಬರಸ್ಥಾನ, ಉದ್ಯಾವರ ಗಣಪತಿ ದೇವಸ್ಥಾನ ಬಳಿಯೂ ಮರ ಬಿದ್ದಿರುವುದು ವರದಿಯಾಗಿದೆ. ಗ್ರಾಪಂ ಕಚೇರಿ ಬಳಿ ಇರುವ ಸುಧಾಕರ್ ಕೋಟ್ಯಾನ್ ಎಂಬವರ ಮರದ ಡಿಪೊ ಅಂಗಡಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮರ ಬಿದ್ದು ಸಂಪಿಗೆನಗರದಲ್ಲಿ ಆದಿಲ್ ಪಳ್ಳಿ ಎಂಬವರ ಹಲಾಲ್ ಚಿಕನ್ ಸ್ಟಾಲ್‌ನ ಟೆಂಪೊ, ಮೇಲ್ಪೇಟೆ ಹಾಗೂ ಬೋಳಾರುಗುಡ್ಡೆ ಯಲ್ಲಿ ಒಂದು ಕಾರು, ನಾಲ್ಕೈದು ಬೈಕ್‌ಗಳಿಗೆ ಹಾನಿಯಾಗಿದೆ.

ರಸ್ತೆ ಸಂಚಾರಕ್ಕೆ ಅಡ್ಡಿ: ಉದ್ಯಾವರ ಪೇಟೆಯ ಕಾಮತ್ ಹೊಟೇಲ್ ಬಳಿಯ ನೂರಾರು ವರ್ಷ ಹಳೆಯ ಅಶ್ವಥ ಮರ ರಸ್ತೆ ಹಾಗೂ ಕಟ್ಟಡದ ಮೇಲೆ ಬಿದ್ದು ಹಾನಿ ಉಂಟಾಗಿದೆ. ಉದ್ಯಾವರ ಮೇಲ್ಪೇಟೆ ಶಂಭುಕಲ್ಲು ದೇವಸ್ಥಾನ, ಪಿತ್ರೋಡಿ, ಬೋಳಾರುಗುಡ್ಡೆ, ಸಂಪಿಗೆನಗರ, ಉದ್ಯಾವರ ಗುಡ್ಡೆಯಂಗಡಿ ಕೊರಂಗ್ರಪಾಡಿ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿತ್ತು.

ಗ್ರಾಪಂನಿಂದ ನಿಯೋಜಿಸಲಾದ 20 ಮಂದಿ ಕಾರ್ಮಿಕರು, ಅರಣ್ಯ ಇಲಾಖೆ ಸಿಬ್ಬಂದಿಗಳು, ಸಾರ್ವಜನಿಕರು ಜೊತೆಗೂಡಿ ಸಂಜೆ ವೇಳೆಗೆ ಮುಖ್ಯ ರಸ್ತೆಗೆ ಬಿದ್ದ ಎಲ್ಲ ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ರಸ್ತೆ ಬಿದ್ದ ಮರಗಳಿಗಂದ ವಾಹನ ಸಂಚಾರ ಸಾಧ್ಯವಾಗದ ಕಾರಣ ಉದ್ಯಾವರ ಪರಿಸರದ ಶಾಲೆಗಳಿಗೆ ಬೆಳಗ್ಗೆಯೇ ರಜೆ ಘೋಷಿಸಲಾಗಿತ್ತು.

ಉದ್ಯಾವರ ಗ್ರಾಪಂ ವ್ಯಾಪ್ತಿಯಲ್ಲಿ 40-50 ವಿದ್ಯುತ್ ಕಂಬಗಳು ಧರೆಗೆ ಉರುಳಿ ಬಿದ್ದಿವೆ. ಇದರಿಂದ ಬೆಳಗ್ಗೆಯಿಂದಲೇ ವಿದ್ಯುತ್ ವ್ಯತ್ಯಯ ಉಂಟಾಗಿ ಇಡೀ ಗ್ರಾಮ ಕತ್ತಲಲ್ಲಿ ಮುಳುಗಿದೆ. ಈಗಾ ಗಲೇ ವಿದ್ಯುತ್ ತಂತಿಗಳ ಮೇಲೆ ಬಿದ್ದ ಮರಗಳನ್ನು ತೆರವು ಮಾಡಲಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಹಗಲಿರುಳು ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ.

ಭಾರಿ ಗಾಳಿಯಿಂದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಇಕ್ಕೇಲಗಳಲ್ಲಿ ರುವ ಸುಮಾರು 15ಕ್ಕೂ ಅಧಿಕ ಜಾಹೀರಾತು ಹೊರ್ಡಿಂಗ್‌ಗಳು ಹಾನಿ ಗೊಂಡಿದ್ದು, ಹೆಚ್ಚಿನವುಗಳು ನೆಲಕ್ಕೆ ಬಿದ್ದಿದೆ. ಉದ್ಯಾವರ ಬಲಾಯಿಪಾದೆಯಲ್ಲಿ ಮನೆ ಹಾಗೂ ವಿದ್ಯುತ್ ಕಂಬದ ಮೇಲೆ ಹೊರ್ಡಿಂಗ್ ಬಿದ್ದು ಹಾನಿ ಸಂಭ ವಿಸಿದೆ.

ಉದ್ಯಾವರಕ್ಕೆ ಡಿಸಿ, ಶಾಸಕರು ಭೇಟಿ
ಭಾರೀ ಗಾಳಿಮಳೆಗೆ ತತ್ತರಿಸಿ ಹೋಗಿರುವ ಉದ್ಯಾವರ ಪ್ರದೇಶಕ್ಕೆ ಇಂದು ಬೆಳಗ್ಗೆ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ ನೀಡಿ, ಎಲ್ಲ ಇಲಾಖೆಗಳು ಜೊತೆಗೂಡಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳು ವಂತೆ ಸೂಚನೆ ನೀಡಿದ್ದಾರೆ. ತೆರವುಗೊಳಿಸಿದ ಮರಗಳನ್ನು ಸಾಗಿಸಲು ಅನು ಕೂಲವಾಗುವಂತೆ ಉಡುಪಿ ನಗರಸಭೆಯ ಟಿಪ್ಪರನ್ನು ಉದ್ಯಾವರಕ್ಕೆ ಕಳುಹಿಸಿ ಕೊಡಲಾಗಿದೆ.

ಅದೇ ರೀತಿ ಅಪರ ಜಿಲ್ಲಾಧಿಕಾರಿ ಅನುರಾಧ, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಜಿಪಂ ಅಧ್ಯಕ್ಷ ದಿನಕರ ಬಾಬು, ಗ್ರಾಪಂ ಅಧ್ಯಕ್ಷೆ ಸುಗಂಧಿ ಶೇಖರ್, ಉಪಾಧ್ಯಕ್ಷ ರಿಯಾಜ್ ಪಳ್ಳಿ ಅನಾಹುತ ಸಂಭವಿಸಿರುವ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಉದ್ಯಾವರ ಪಂಚಾಯತ್ ಅಧಿಕಾರಿ ರಮಾ ನಂದ ಪುರಾಣಿಕ್ ನಷ್ಟ ಪರಿಹಾರಕ್ಕೆ 35 ಮನೆಗಳ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X