Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2019ಕ್ಕೆ ಪ್ರಧಾನಿ ಅಭ್ಯರ್ಥಿಯಾಗಿ ಮಾಜಿ...

2019ಕ್ಕೆ ಪ್ರಧಾನಿ ಅಭ್ಯರ್ಥಿಯಾಗಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ!

ಆದರೆ ಈ ಯೋಜನೆಯ ಹಿಂದಿರುವುದು ಕಾಂಗ್ರೆಸ್ ಅಲ್ಲ

ವಾರ್ತಾಭಾರತಿವಾರ್ತಾಭಾರತಿ29 May 2018 8:49 PM IST
share
2019ಕ್ಕೆ ಪ್ರಧಾನಿ ಅಭ್ಯರ್ಥಿಯಾಗಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ!

#ಏನಿದು ಹೊಸ ಮಾಸ್ಟರ್ ಪ್ಲ್ಯಾನ್?, ಯಾರಿದರ ರೂವಾರಿ ?

ಹೊಸದಿಲ್ಲಿ, ಮೇ 29: ಮಾಜಿ ರಾಷ್ಟ್ರಪತಿ ಮತ್ತು ಪ್ರಧಾನಿಯಾಗಲು ಹಲವು ಬಾರಿ ವಿಫಲ ಯತ್ನ ನಡೆಸಿದ್ದ ಹಿರಿಯ ಕಾಂಗ್ರೆಸಿಗ ಪ್ರಣಬ್ ಮುಖರ್ಜಿ 2019ರ ಮಹಾ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆಯೇ?... ಹೀಗೂ ಉಂಟೆ ಎಂದು ಹುಬ್ಬೇರಿಸಬೇಡಿ . ರಾಜಕೀಯದಲ್ಲಿ ಏನೂ ಆಗಬಹುದು. ಹಾಗಾಗಿ ರಾಷ್ಟ್ರಪತಿ ಆಗಿ ಮಾಜಿಯಾದ ಹಿರಿಯ ಪ್ರಣಬ್ ಮುಖರ್ಜಿ ನಿವೃತ್ತರು ಎಂದು ಹೆಚ್ಚಿನವರು ಭಾವಿಸಿದ್ದರೆ, ಅವರ ಲೆಕ್ಕಾಚಾರವನ್ನು ತಲೆಕೆಳಗೆ ಮಾಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದಾರೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.

ಮುಂದಿನ ತಿಂಗಳು ನಡೆಯಲಿರುವ ಆರೆಸ್ಸೆಸ್ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ಹೋಗಲು ಪ್ರಣಬ್ ಒಪ್ಪಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಈ ಸುದ್ದಿ ಹೊರಬಂದಿದೆ.  ಎನ್ ಡಿ ಟಿವಿ ಪ್ರಕಾರ, ಮಾಜಿ ರಾಷ್ಟ್ರಪತಿ ಮುಖರ್ಜಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹಾಗು ಕಾಂಗ್ರೆಸೇತರ ತೃತೀಯ ರಂಗವೊಂದರ ರಚನೆಯ ಬಗ್ಗೆ ಸಕ್ರಿಯವಾಗಿ ರಂಗಕ್ಕಿಳಿದಿದ್ದಾರೆ . ಇದನ್ನು ಅವರ ಸಂಪರ್ಕದಲ್ಲಿರುವ ರಾಜಕೀಯ ಪಕ್ಷಗಳ ಮುಖಂಡರೇ ಖಚಿತಪಡಿಸಿದ್ದಾರೆ. ಹಲವರ ಹೇಳಿಕೆ ಪ್ರಕಾರ ಇದು ಇಷ್ಟಕ್ಕೇ ನಿಂತಿಲ್ಲ . ಎಲ್ಲ ಸರಿ ಹೋದರೆ, ಮುಖರ್ಜಿಯೇ ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಮೋದಿ ವಿರುದ್ಧ ಕಣಕ್ಕಿಳಿದರೂ ಅಚ್ಚರಿಯಿಲ್ಲ!.

ಕಳೆದ ಜನವರಿಯಲ್ಲಿ ಭುಭನೇಶ್ವರದಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರ ನಿವಾಸದಲ್ಲಿ ನಡೆದ ಭೋಜನ ಕಾರ್ಯಕ್ರಮ ತೃತೀಯ ರಂಗ ರಚನೆಗೆ ಮುನ್ನುಡಿ ಬರೆದ ಸಭೆ ಎಂದು ಒಂದು ವರದಿಯಿದೆ. ತಮ್ಮ ತಂದೆ ದಿವಂಗತ ಬಿಜು ಪಾಟ್ನಾಯಕ್ ಅವರ ಜೀವನ ಚರಿತ್ರೆಯ ಪುಸ್ತಕ ಬಿಡುಗಡೆ ನೆಪದಲ್ಲಿ ಪ್ರಣಬ್, ಅಡ್ವಾಣಿ, ದೇವೇಗೌಡ ಹಾಗು ಸೀತಾರಾಮ್ ಯೆಚೂರಿ ಅವರನ್ನು ನವೀನ ಪಾಟ್ನಾಯಕ್ ಆಮಂತ್ರಿಸಿದ್ದರು. ಆದರೆ ಅದಕ್ಕೂ ಮೊದಲೇ ಕಳೆದ ವರ್ಷ ರಾಷ್ಟ್ರಪತಿ ಭವನದಲ್ಲಿ ನವೀನ ಪಾಟ್ನಾಯಕ್ ಅವರು ಪ್ರಣಬ್ ಅವರನ್ನು ಭೇಟಿಯಾಗಿ ಅಲ್ಲಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕರೆ ಮಾಡಿ ಮಾತನಾಡಿದ್ದರು ಎಂದು ಹೇಳಲಾಗಿದೆ.

ಮಮತಾ ಮತ್ತು ಪ್ರಣಬ್ ನಡುವೆ ಆತ್ಮೀಯತೆ ಇದೆ ಎಂಬುದು ಎಲ್ಲರಿಗೂ ತಿಳಿದಿದೆ. ಮಮತಾ ರಾಜಕೀಯ ಜೀವನದಲ್ಲಿ ಅವರಿಗೆ ಪ್ರಣಬ್ ಬೆಂಬಲ ನೀಡಿದ್ದರೆ, ಪ್ರಣಬ್ ರಾಷ್ಟ್ರಪತಿಯಾಗಲು ಮೊದಲು ಬೆಂಬಲ ಘೋಷಿಸಿದ್ದೇ ಮಮತಾ. ಆ ಆತ್ಮೀಯತೆ ಈಗಲೂ ಇದೆ . ಹಾಗಾಗಿ ಈ ಗುರು ಶಿಷ್ಯರು ಒಟ್ಟಿಗೆ ಇತರ ಪ್ರಾದೇಶಿಕ ನಾಯಕರನ್ನು ಸೇರಿಸಿಕೊಂಡು ಹೊಸ ರಾಜಕೀಯ ಲೆಕ್ಕಾಚಾರ ಶುರುಮಾಡಿದ್ದಾರೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ ಪ್ರಣಬ್ ಸೂಚನೆಯಂತೆಯೇ ಮಮತಾ ಇತ್ತೀಚಿಗೆ ವಿವಿಧ ಪ್ರಾದೇಶಿಕ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುವ ತೃತೀಯ ರಂಗವೊಂದರ ರಚನೆ ಇವರಿಬ್ಬರ ಉದ್ದೇಶವಾಗಿದ್ದು, ಸಂದರ್ಭ ನೋಡಿಕೊಂಡು ಇಬ್ಬರಲ್ಲಿ ಒಬ್ಬರು ಪ್ರಧಾನಿ ಗಾದಿಗೆ ಹಕ್ಕು ಪ್ರತಿಪಾದಿಸುವ ಯತ್ನದಲ್ಲಿದ್ದಾರೆ ಎಂದು ಹೇಳಲಾಗಿದೆ.

ಎನ್ ಡಿಟಿವಿ ಜೊತೆ ಮಾತನಾಡಿರುವ ಬಿಜು ಜನತಾದಳದ ಮುಖಂಡರೊಬ್ಬರು  ಪ್ರಣಬ್ ಮುಂದಿನ ಚುನಾವಣೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. ಮೋದಿ ಅವರಿಗೆ ಸಾಟಿಯಾಗಬಲ್ಲ ನಾಯಕ ಪ್ರಣಬ್ ಮಾತ್ರ ಎಂದು ನೇರವಾಗಿಯೇ ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ ಪ್ರಧಾನಿಯಾಗಲು ಸಾಕಷ್ಟು ಯತ್ನಿಸಿದ ಬಳಿಕವೂ ಪ್ರಣಬ್ ಅವರಿಗೆ ಆ ಹುದ್ದೆ ಸಿಕ್ಕಿರಲಿಲ್ಲ. ಇಂದಿರಾ ಹತ್ಯೆಯಾದ ಬಳಿಕ ಇದೇ ಕಾರಣಕ್ಕೆ ಅವರು ಕೆಲವು ಸಮಯ ಪಕ್ಷದಿಂದಲೇ ಹೊರ ಹೋಗಿದ್ದರು. 2014 ರಲ್ಲೂ ಅವರು ಪ್ರಧಾನಿ ಹುದ್ದೆ ನಿರೀಕ್ಷಿಸಿದ್ದರೂ ಸೋನಿಯಾ ಅದನ್ನು ಮನಮೋಹನ್ ಸಿಂಗ್ ಅವರಿಗೆ ನೀಡಿದರು.

It was great pleasure to have enlightened company of Shri @CitiznMukherjee, Shri HD Deve Gowda, Shri LK Advani & Shri @SitaramYechury at Naveen Niwas. Had wonderful interaction over our much loved #Pakhala & Odia delicacies #PiajaPeetha #SagaBadi #Drumstickfry & famed #Chhenapoda pic.twitter.com/GWcpVGwL9t

— Naveen Patnaik (@Naveen_Odisha) January 27, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X