Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ನನ್ನ ದೇವರು ಅಸಾರಾಮ್ ನನ್ನ ಪುತ್ರಿಯ...

“ನನ್ನ ದೇವರು ಅಸಾರಾಮ್ ನನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದರು”

ವಾರ್ತಾಭಾರತಿವಾರ್ತಾಭಾರತಿ29 May 2018 8:54 PM IST
share
“ನನ್ನ ದೇವರು ಅಸಾರಾಮ್ ನನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದರು”

ಹೊಸದಿಲ್ಲಿ, ಮೇ 30: “ಅಸಾರಾಮ್ ನಮಗೆ ದೇವರು. ಕೆಲವು ವರ್ಷ ನಮ್ಮ ಜೀವನ ಅವರ ಸುತ್ತ ತಿರುಗುತ್ತಿತ್ತು. ಆದರೆ, ಒಂದು ದಿನ ದೇವರು ನಮ್ಮ ಎಲ್ಲ ಸಂತೋಷವನ್ನು ತಿಂದು ಹಾಕಿದರು. ಹಾಗೂ ನಮ್ಮ ಬದುಕನ್ನು ಸರಿಪಡಿಸಲಾಗದಂತೆ ಹಾನಿ ಮಾಡಿದರು. ದೇವರು ನನ್ನ 16 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದರು” ಎಂದು ಮಹಿಳೆಯೋರ್ವರು ಹೇಳಿದ್ದಾರೆ.

“ನನ್ನ ಮಗಳು ನನ್ನಲ್ಲಿ ನಂಬಿಕೆ ಇರಿಸಿ ಅಸಾರಾಮ್ ಬಾಪು ಅತ್ಯಾಚಾರ ಎಸಗಿರುವುದನ್ನು ಹೇಳಿರುವ ಆ ಕ್ಷಣ ನನ್ನ ಬದುಕಿನ ಕೆಟ್ಟ ನೆನಪು. ಇದನ್ನು ಹೇಳಿದಾಗ ನನ್ನ ಪತಿ ಪ್ರಜ್ಞೆ ತಪ್ಪಿಬಿದ್ದರು. ನನ್ನ ಮೂವರು ಮಕ್ಕಳಲ್ಲಿ ಇವಳು ಎರಡನೆಯವಳು. ನನ್ನ ಪುತ್ರ ಜನಿಸಿದ ನಾಲ್ಕು ವರ್ಷಗಳ ಬಳಿಕ ಈಕೆ ಜನಿಸಿದಳು. ಅವಳು ಜನಿಸಿದ ಸಂದರ್ಭ ನನ್ನ ಪತಿ ಗೌರವಯುತ ರಫ್ತು ವ್ಯವಹಾರ ನಡೆಸುತ್ತಿದ್ದರು. ನನಗಿಂತ ನನ್ನ ಪತಿಯ ಮೇಲೆಯೇ ಅವಳಿಗೆ ಪ್ರೀತಿ ಹೆಚ್ಚಿತ್ತು. ಆಕೆಯ ಸಂತೋಷದಿಂದಿರಬೇಕೆಂದು ನನ್ನ ಪತಿ ಸಾಕಷ್ಟು ಪ್ರಯತ್ನಿಸುತ್ತಿದ್ದರು. ಅತ್ಯಾಚಾರದ ವಿಷಯ ತಿಳಿದಾಗ ಅವರು ಪ್ರಜ್ಞೆ ತಪ್ಪಲು ಇದೇ ಕಾರಣ. ಈ ವಿಷಯವನ್ನು ತಿಳಿಸಿದ ಬಳಿಕ ನನ್ನ ಪುತ್ರಿ ಹಲವು ಗಂಟೆಗಳ ಕಾಲ ಅತ್ತಳು” ಎಂದು ಮಹಿಳೆ ಹೇಳಿದ್ದಾರೆ.

“ಅಂದು ನಾವು ಯಾರೂ ಪರಸ್ಪರ ಮಾತನಾಡಲಿಲ್ಲ. ನಾವು ನಿಶ್ಚೇಶ್ಟಿತರಾಗಿದ್ದೆವು. ಕನಸಿನಲ್ಲೂ ನಡೆಯದ ಈ ಘಟನೆ ನಿಜ ಬದುಕಿನಲ್ಲಿ ನಡೆದಾಗ ಎದುರಿಸುವುದಾದರೂ ಹೇಗೆ? ನಮ್ಮ ಜೀವನವನ್ನು ಹಾಳುಗೆಡಹಿದ ಒಬ್ಬರನ್ನು ದೇವರು ಎಂದು ಕರೆಯುವುದಾದರೂ ಹೇಗೆ? ದೇವರ ವಿರುದ್ಧ ಹೋರಾಡುವುದು ಹೇಗೆ?” ಎಂದು ಮಹಿಳೆ ಪ್ರಶ್ನಿಸಿದ್ದಾರೆ.

“ಒಮ್ಮೆ ಪೊಲೀಸ್ ದೂರು ದಾಖಲಿಸಿದ ಬಳಿಕ, ರಾಜಿ ಮಾಡಿಕೊಳ್ಳಿ, ಅಸಾರಾಮ್ ಬಾಪು ಪ್ರಭಾವಿ ವ್ಯಕ್ತಿ ಎಂದು ಹಲವರು ಹೇಳಿದ್ದರು. ಅಸಾರಾಮ್ ವಿರುದ್ಧ ಸವಾಲು ಹಾಕಿದರೆ, ನಿಮ್ಮ ಕುಟುಂಬ ಸಂಕಷ್ಟಕ್ಕೆ ಸಿಲುಕಬಹುದು ಎಂದು ಹೆದರಿಸಿದರು. ಆದರೆ, ನಾನು ಪ್ರಕರಣ ಹಿಂದೆ ತೆಗೆಯಲಿಲ್ಲ” ಎಂದು ಮಹಿಳೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X