Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುದ್ರಾ ಯೋಜನೆಯಡಿ 6 ಲಕ್ಷ ಕೋಟಿ ರೂ. ಸಾಲ...

ಮುದ್ರಾ ಯೋಜನೆಯಡಿ 6 ಲಕ್ಷ ಕೋಟಿ ರೂ. ಸಾಲ ವಿತರಣೆ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ29 May 2018 9:19 PM IST
share
ಮುದ್ರಾ ಯೋಜನೆಯಡಿ 6 ಲಕ್ಷ ಕೋಟಿ ರೂ. ಸಾಲ ವಿತರಣೆ: ಪ್ರಧಾನಿ ಮೋದಿ

ಹೊಸದಿಲ್ಲಿ, ಮೇ 29: ಪ್ರಧಾನಮಂತ್ರಿ ಮುದ್ರಾ ಯೋಜನೆ(ಪಿಎಂಎಂವೈ) 12 ಕೋಟಿ ಫಲಾನುಭವಿಗಳಿಗೆ 6 ಲಕ್ಷ ಕೋಟಿ ರೂ. ಮೊತ್ತದ ಸಾಲ ವಿತರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ದೇಶದ್ಯಂತ ಮುದ್ರಾ ಯೋಜನೆಯ ಫಲಾನುಭವಿಗಳ ಜೊತೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಹನ ನಡೆಸಿದ ಪ್ರಧಾನಿಯವರು, ಈ ಹಿಂದಿನ ಸರಕಾರಗಳು ನಡೆಸುತ್ತಿದ್ದ ಸಾಲಮೇಳಗಳಿಗಿಂತ ವಿಭಿನ್ನ ಯೋಜನೆಯಾದ ಮುದ್ರಾ ಯೋಜನೆಯು ಜನರನ್ನು ಅಸಾಂಪ್ರದಾಯಿಕ ಮಾರ್ಗದಲ್ಲಿ ಮುನ್ನಡೆದು, ತಮ್ಮ ಕನಸನ್ನು ನನಸಾಗಿಸುವುದರ ಜೊತೆಗೆ ಇತರರಿಗೂ ಉದ್ಯೋಗಾವಕಾಶ ಒದಗಿಸಲು ಪ್ರೋತ್ಸಾಹ ನೀಡಿದೆ ಎಂದು ಹೇಳಿದರು. 12 ಕೋಟಿ ಫಲಾನುಭವಿಗಳಲ್ಲಿ ಶೇ.28ರಷ್ಟು ಮಂದಿ ಅಥವಾ 3.25 ಕೋಟಿ ಜನತೆ ಪ್ರಥಮ ಬಾರಿಗೆ ಉದ್ಯಮ ಆರಂಭಿಸುವ ಸಾಹಸಕ್ಕೆ ಮುಂದಾಗಿದ್ದಾರೆ. 12 ಕೋಟಿ ಫಲಾನುಭವಿಗಳಲ್ಲಿ ಶೇ.74 (9 ಕೋಟಿ) ರಷ್ಟು ಮಹಿಳೆಯರು, ಶೇ.55ರಷ್ಟು ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ವರ್ಗದವರಾಗಿದ್ದಾರೆ ಎಂದವರು ವಿವರಿಸಿದರು.

 ರಾಜಕೀಯ ಲಾಭದ ಉದ್ದೇಶವಿದ್ದ ಸಾಲಮೇಳದಡಿ ರಾಜಕಾರಣಿಗಳಿಗೆ ನಿಕಟವಾಗಿದ್ದವರಿಗೆ ಸಾಲ ಒದಗಿಸಲಾಗುತ್ತಿತ್ತು ಮತ್ತು ಇದನ್ನು ಮರುಪಾವತಿಸುವ ಬಯಕೆ ಯಾರಲ್ಲಿಯೂ ಇರಲಿಲ್ಲ ಎಂದ ಅವರು ಹೇಳಿದರು. ಆಗ ಗಣ್ಯರ ಶಿಫಾರಸ್ಸಿನ ಆಧಾರದಲ್ಲಿ ಶ್ರೀಮಂತ ಜನರಿಗೆ ಮಾತ್ರ ಸಾಲ ದೊರೆಯುತ್ತಿತ್ತು. ಆದರೆ ಯಾವುದೇ ಬೆಂಬಲವಿಲ್ಲದ ಬಡ ಜನರು ಸಾಲ ವ್ಯವಸ್ಥೆಯಿಂದ ವಂಚಿತರಾಗುತ್ತಿದ್ದರು. ಹೀಗೆ ಬಡವರು ಅನಿವಾರ್ಯವಾಗಿ ಅಧಿಕ ಬಡ್ಡಿದರ ವಿಧಿಸುವ ಲೇವಾದೇವಿಗಾರರಿಂದ ಸಾಲ ಪಡೆಯಬೇಕಿತ್ತು. ಆದರೆ ಮುದ್ರಾ ಯೋಜನೆಯು ಈ ವ್ಯವಸ್ಥೆಗೆ ತಡೆಯೊಡ್ಡಿದೆ. ಯುವಕರನ್ನು ಲೇವಾದೇವಿಗಾರರ ಕಪಿಮುಷ್ಟಿಯಿಂದ ರಕ್ಷಿಸಿದೆ. ಈ ಹಿಂದೆ ಉನ್ನತ ಸಂಸ್ಥೆಗಳಿಗೆ ಸಾಲ ಒದಗಿಸಿಕೊಡಲು ವಿತ್ತ ಸಚಿವರು ಸಾಧ್ಯವಾದ ಕ್ರಮಗಳನ್ನೆಲ್ಲಾ ಕೈಗೊಳ್ಳುತ್ತಿದ್ದರು. ಇದೇ ವೇಳೆ ಲೇವಾದೇವಿಗಾರರಿಂದ ಶೇ.40ರಷ್ಟು ಬಡ್ಡಿದರದಲ್ಲಿ ಸಾಲ ಪಡೆಯುತ್ತಿದ್ದ ಸಣ್ಣ ಉದ್ಯಮಿಗಳಿಗೆ ಅವರ ಬಿಗಿಮುಷ್ಟಿಯಿಂದ ಹೊರಬರಲು ಅಸಾಧ್ಯವಾಗುತ್ತಿತ್ತು. ಈ ದೇಶದ ಜನರು ಈ ಹಿಂದೆ ಬಡತನ ನಿರ್ಮೂಲನೆಯ ಘೋಷಣೆ ಕೇಳಿ ಖುಷಿಯಾಗಿದ್ದರು. ಆದರೆ ವಾಸ್ತವವಾಗಿ ಏನೂ ಸಂಭವಿಸಲೇ ಇಲ್ಲ ಎಂದು ಪ್ರಧಾನಿ ಹೇಳಿದರು.

ಆದರೆ ಎನ್‌ಡಿಎ ಸರಕಾರ ಸಾಲಮೇಳ ನಡೆಸುತ್ತಿಲ್ಲ. ಅಲ್ಲದೆ ಇಲ್ಲಿ ಮಧ್ಯವರ್ತಿಗಳಿಗೆ ಜಾಗವಿಲ್ಲ. ಈ ಸರಕಾರಕ್ಕೆ ದೇಶದ ಯುವಜನತೆಯ , ಮಹಿಳೆಯರ ಮೇಲೆ ವಿಶ್ವಾಸವಿದೆ. ಇವರು ಬ್ಯಾಂಕಿನಿಂದ ನೇರವಾಗಿ ಸಾಲ ಪಡೆದು ತಮ್ಮ ಸ್ವಂತ ಸಣ್ಣ ಉದ್ಯಮವನ್ನು ಆರಂಭಿಸಬಹುದಾಗಿದೆ. ಇಲ್ಲಿ ಬಡಜನರಿಗೆ ಬ್ಯಾಂಕಿನಿಂದ ಸಾಲ ಪಡೆಯಲು ಅಥವಾ ತಮ್ಮ ಉದ್ಯಮವನ್ನು ವಿಸ್ತರಿಸಲು ಸಾಲ ಪಡೆಯಲು ಯಾವುದೇ ಪೂರಕ ಭದ್ರತೆ ಒದಗಿಸುವ ಅಗತ್ಯವಿಲ್ಲ ಎಂದರು. 2015ರ ಎಪ್ರಿಲ್ 8ರಂದು ಪ್ರಧಾನಿ ಮೋದಿಯವರು ಚಾಲನೆ ನೀಡಿರುವ ಮುದ್ರಾ ಯೋಜನೆಯಡಿ ಕಾರ್ಪೋರೇಟ್ ರಹಿತ , ಕೃಷಿಯೇತರ ಸಣ್ಣ ಮತ್ತು ಅತೀ ಸಣ್ಣ ಉದ್ದಿಮೆಗಳಿಗೆ ಸಾಲ ವಿತರಿಸಲಾಗುತ್ತದೆ. ಕಳೆದ ಮೂರು ವರ್ಷಗಳಲ್ಲಿ ಮುದ್ರಾ ಯೋಜನೆಯಡಿ 5.73 ಲಕ್ಷ ಕೋಟಿ ರೂ.ಮೊತ್ತದ ಸಾಲ ವಿತರಿಸಲಾಗಿದ್ದರೆ ಕಳೆದ ಆರ್ಥಿಕ ವರ್ಷದಲ್ಲಿ 2.53 ಲಕ್ಷ ಕೋಟಿ ರೂ. ಮೊತ್ತದ ಸಾಲ ವಿತರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X