Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಧಾನಸಭಾ ಚುನಾವಣಾ ಸೋಲನ್ನು ಸವಾಲಾಗಿ...

ವಿಧಾನಸಭಾ ಚುನಾವಣಾ ಸೋಲನ್ನು ಸವಾಲಾಗಿ ಸ್ವೀಕರಿಸಿ: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ29 May 2018 10:46 PM IST
share
ವಿಧಾನಸಭಾ ಚುನಾವಣಾ ಸೋಲನ್ನು ಸವಾಲಾಗಿ ಸ್ವೀಕರಿಸಿ: ರಮಾನಾಥ ರೈ

ಮಂಗಳೂರು, ಮೇ 29: ರಾಜ್ಯ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ದ.ಕ.ಜಿಲ್ಲೆಯಲ್ಲಿ ಸೋತಿದ್ದರೂ ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಸೋಲನ್ನು ಸವಾಲಾಗಿ ಸ್ವೀಕರಿಸಬೇಕು ಎಂದು ದ.ಕ.ಜಿಲ್ಲಾ ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಮಂಗಳವಾರ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪರಾಮರ್ಶೆಯ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪಕ್ಷದ ಸೋಲಿಗೆ ಅಪಪ್ರಚಾರವೇ ಮುಖ್ಯ ಕಾರಣ. ಸೋಲಿನಿಂದ ಯಾರೂ ಧೃತಿಗೆಡಬೇಡಿ. ಈ ಸೋಲು ಶಾಶ್ವತವಲ್ಲ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ. ಚುನಾವಣೆಯ ಸೋಲನ್ನು ಒಪ್ಪಿಕೊಂಡು ಮುನ್ನಡೆಯಬೇಕು. ನಾಯಕರಲ್ಲದೆ ಪಕ್ಷದ ಸಾಮಾನ್ಯ ಕಾರ್ಯಕರ್ತ ಕೂಡಾ ಸೋಲಿನ ಬಗ್ಗೆ ಆತ್ಮವಿಮರ್ಶೆ ಮಾಡಬೇಕಾಗಿದೆ ಎಂದು ರಮಾನಾಥ ರೈ ಹೇಳಿದರು.

ರಾಜ್ಯ ಸರಕಾರ ಉತ್ತಮ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರೂ ಈ ಬಗ್ಗೆ ಪ್ರಚಾರ ಮಾಡಲು ಪಕ್ಷದ ಕಾರ್ಯಕರ್ತರು ಮುತುವರ್ಜಿ ವಹಿಸದಿರುವುದು ಕೂಡಾ ಪಕ್ಷದ ಸೋಲಿಗೆ ಕಾರಣವಾಗಿದೆ. ಹಿಂದುತ್ವದ ನೆಲೆಯಲ್ಲಿ ಮತಗಳನ್ನು ವಿಭಜನೆ ಮಾಡಿರುವುದರಿಂದ ಬಿಜೆಪಿಗೆ ತಾತ್ಕಾಲಿಕ ಗೆಲುವಾಗಿದೆ. ವಚನಭ್ರಷ್ಟ ಬಿಜೆಪಿಯ ವೈಫಲ್ಯವನ್ನು ಜನತೆಗೆ ಮನದಟ್ಟು ಮಾಡಿಕೊಳ್ಳಲು ಪಕ್ಷದ ಕಾರ್ಯಕರ್ತರು ಮುಂದಾಗಬೇಕು ಎಂದು ರಮಾನಾಥ ರೈ ಕರೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಇವಿಎಂ ಯಂತ್ರದ ಬಗ್ಗೆ ಇರುವ ಸಂಶಯ ಇನ್ನೂ ನಿವಾರಣೆಯಾಗಿಲ್ಲ. ಅಲ್ಲದೆ ಪಕ್ಷದ ಅಭ್ಯರ್ಥಿಗಳ ಮನೆ, ಕಚೇರಿಗಳಿಗೆ ಆದಾಯ ತೆರಿಗೆ ಮೂಲಕ ದಾಳಿ ನಡೆಸಿ ಆತ್ಮಸ್ಥೆರ್ಯವನ್ನು ಕುಂದಿಸಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿದರು.

ಸಭೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕುಮಾರ್ ಮತ್ತು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಂ.ಪಿ. ದಿನೇಶ್, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಗಂಗಾಧರ್ ಗೌಡ, ಜೆ.ಆರ್. ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ.ಮೋಹನ್, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್, ಮಮತಾ ಗಟ್ಟಿ, ಇಬ್ರಾಹೀಂ ಕೋಡಿಜಾಲ್, ಧನಂಜಯ ಅಡ್ಪಂಗಾಯ, ಆರ್.ಕೆ. ಪೃಥ್ವಿರಾಜ್, ಈಶ್ವರ್ ಉಲ್ಲಾಳ್, ಶಾಹುಲ್ ಹಮೀದ್, ಶೇಖರ್ ಕುಕ್ಕೇಡಿ, ಸುರೇಶ್ ಬಲ್ಲಾಳ್, ಶಾಲೆಟ್ ಪಿಂಟೊ, ಉಮಾನಾಥ್ ಶೆಟ್ಟಿ, ಲೋಕೇಶ್ ಹೆಗ್ಡೆ, ಎ.ಸಿ. ಭಂಡಾರಿ, ಅಬ್ದುಲ್ಲಾ ಬಿನ್ನು, ಸೇವಾದಳದ ಅಶ್ರಫ್, ಸದಾಶಿವ ಉಳ್ಳಾಲ್, ವಿವಿಧ ಬ್ಲಾಕ್ ಅಧ್ಯಕ್ಷರುಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಜಿಪಂ ಸದಸ್ಯರು, ತಾಪಂ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X