Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಂಗ್ಲಾದಲ್ಲಿ ಡ್ರಗ್ಸ್ ಸಮರ: 15...

ಬಾಂಗ್ಲಾದಲ್ಲಿ ಡ್ರಗ್ಸ್ ಸಮರ: 15 ದಿನಗಳಲ್ಲಿ 102 ಮಂದಿಯ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ29 May 2018 10:58 PM IST
share
ಬಾಂಗ್ಲಾದಲ್ಲಿ ಡ್ರಗ್ಸ್ ಸಮರ: 15 ದಿನಗಳಲ್ಲಿ 102 ಮಂದಿಯ ಹತ್ಯೆ

ಢಾಕಾ,ಮೇ 29: ಮಾದಕದ್ರವ್ಯ ಜಾಲಗಳ ವಿರುದ್ಧ ಬಾಂಗ್ಲಾ ಸಾರಿರುವ ಸಮರ ಮುಂದುವರಿದಿದ್ದು, ಕಳೆದ ಹದಿನೈದು ದಿನಗಳಲ್ಲಿ 100ಕ್ಕೂ ಅಧಿಕ ಮಂದಿ ಶಂಕಿತ ಮಾದಕದ್ರವ್ಯ ವ್ಯಾಪಾರಿಗಳನ್ನು ಪೊಲೀಸರು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

  ಮಂಗಳವಾರ ಮುಂಜಾನೆ 10 ಮಂದಿ ಮಾದಕದ್ರವ್ಯ ಕಳ್ಳಸಾಗಣೆದಾರರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಇವರ ಪೈಕಿ ಕೆಲವರು ಎನ್‌ಕೌಂಟರ್‌ನಲ್ಲಿ ಮೃತಪಟ್ಟರೆ, ಇನ್ನೂ ಕೆಲವರು ಮಾದಕದ್ರವ್ಯ ವ್ಯಾಪಾರಿಗಳ ನಡುವಿನ ಘರ್ಷಣೆಯಲ್ಲಿ ಹತರಾಗಿದ್ದಾರೆ.

  ಬಾಂಗ್ಲಾದಲ್ಲಿ ಉಲ್ಬಣಿಸಿರುವ ಯಾಬಾ ಮಾದಕದ್ರವ್ಯ ಮಾರಾಟ ಜಾಲವನ್ನು ಮಟ್ಟಹಾಕುವ ಪ್ರಯತ್ನವಾಗಿ ಬಾಂಗ್ಲಾದೇಶವು ಮೇ ತಿಂಗಳ ಮಧ್ಯದಲ್ಲಿ ಆರಂಭಿಸಿದ ಮಾದಕದ್ರವ್ಯದ ವಿರುದ್ಧ ನಡೆಸಿದ ಸಮರದಲ್ಲಿ ಈವರೆಗೆ 102 ಮಂದಿ ಶಂಕಿತ ಡ್ರಗ್ಸ್ ಕಳ್ಳಸಾಗಣೆದಾರರು ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

 ದೇಶದಲ್ಲಿ ಮಾದಕದ್ರವ್ಯ ಪಿಡುಗನ್ನು ಸಂಪೂರ್ಣವಾಗಿ ನಿಯಂತ್ರಿಸುವವರೆಗೆ ರಕೆಗೆ ಈ ಸಮರ ಮುಂದುವರಿಯಲಿದೆ ಎಂದು ಬಾಂಗ್ಲಾ ಗೃಹ ಸಚಿವ ಅಸಾದುಝ್ಝಮಾನ್ ಖಾನ್ ತಿಳಿಸಿದ್ದಾರೆ.

 ಮೇ 15ರಂದು ಮಾದಕದ್ರವ್ಯ ಜಾಲಗಳ ವಿರುದ್ಧ ಕಾರ್ಯಾಚರಣೆ ಆರಂಭಗೊಂಡ ಬಳಿಕ 12 ಸಾವಿರಕ್ಕೂ ಅಧಿಕ ಆರೋಪಿ ಡೀಲರ್‌ಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಹಲವರಿಗೆ ಸಂಚಾರಿ ನ್ಯಾಯಾಲಯಗಳ ಮೂಲಕ ಏಳು ದಿನಗಳಿಂದ ಆರು ತಿಂಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.

 ಮಾದಕದ್ರವ್ಯದ ವಿರುದ್ಧ ಕಾರ್ಯಾಚರಣೆಯ ಹೆಸರಿನಲ್ಲಿ ಅಮಾಯಕರನ್ನು ಹತ್ಯೆಗೈಯಲಾಗುತ್ತಿದೆಯೆಂಬ ಮಾನವಹಕ್ಕು ಗುಂಪುಗಳ ಆರೋಪಗಳನ್ನು ನಿರಾಕರಿಸಿರುವ ಅಸಾದುಝ್ಝಮಾನ್ ಖಾನ್ ಅವರು ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರುವವರೆಗೆ ಮಾದಕದ್ರವ್ಯದ ವಿರುದ್ಧ ಸಮರ ಮುಂದುವರಿಯಲಿದೆಯೆಂದು ಹೇಳಿದ್ದಾರೆ.

ಹತ್ಯೆಯಾದವರಲ್ಲಿ ಹೆಚ್ಚಿನವರು ಬಂದೂಕುಗಳನ್ನು ಹೊಂದಿದ್ದರು. ಪೊಲೀಸರನ್ನು ಕಂಡ ಕೂಡಲೇ ಅವರು ಗುಂಡು ಹಾರಿಸಿದ್ದಾರೆ ಎಂದರು. ಹತ್ಯೆಯಾದವರ್ಯಾರೂ ಒಳ್ಳೆಯವರಲ್ಲ. ಅವರಲ್ಲಿ ಪ್ರತಿಯೊಬ್ಬರೂ ಹತ್ತರಿಂದ ಹನ್ನೆರಡರಷ್ಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದರು.

 ಬಾಂಗ್ಲಾದಲ್ಲಿ ಯಾಬಾ ಎಂಬ ಮಾದಕದ್ರವ್ಯವು ಪಿಡುಗಾಗಿ ಪರಿಗಣಮಿಸಿದೆ. ನೆರೆಯ ದೇಶವಾದ ಮ್ಯಾನ್ಮಾರ್‌ನಿಂದ ಬಾಂಗ್ಲಾಕ್ಕೆ ಲಕ್ಷಾಂತರ ಯಾಬಾ ಮಾದಕದ್ರವ್ಯದ ಗುಳಿಗೆಗಳು ಕಳ್ಳಸಾಗಣಿಕೆಯಾಗುತ್ತಿವೆ ಎನ್ನಲಾಗಿದೆ. ಬಾಂಗ್ಲಾ ಪೊಲೀಸರು ಈ ತನಕ 4 ಕೋಟಿಗೂ ಅಧಿಕ ಯಾಬಾ ಗುಳಿಗೆಗಳನ್ನು ವಶಪಡಿಸಿಕೊಂಡಿದ್ದಾರಾದರೂ, ಮಾರುಕಟ್ಟೆಗೆ ಈಗಾಗಲೇ 25-30 ಕೋಟಿಯಷ್ಟು ಯಾಬಾ ಗುಳಿಗೆಗಳು ಪ್ರವೇಶಿಸಿವೆಯೆಂದು ಪೊಲೀಸರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X