Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಯಶಸ್ವಿನಿ ಯೋಜನೆ’ ಮುಂದುವರಿಕೆ:...

‘ಯಶಸ್ವಿನಿ ಯೋಜನೆ’ ಮುಂದುವರಿಕೆ: ಮುಖ್ಯಮಂತ್ರಿ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ30 May 2018 8:04 PM IST
share
‘ಯಶಸ್ವಿನಿ ಯೋಜನೆ’ ಮುಂದುವರಿಕೆ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಮೇ 30: ಮೇ 31ರಂದು ಅಂತ್ಯಗೊಳ್ಳುವ ಯಶಸ್ವಿನಿ ವಿಮಾ ಯೋಜನೆಯನ್ನು ಮುಂದುವರೆಸಬೇಕೆಂಬ ರೈತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯದ ರೈತರ ಹಿತದೃಷ್ಟಿಯಿಂದ ‘ಯಶಸ್ವಿನಿ ಯೋಜನೆ’ಯನ್ನು ಮುಂದುವರೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಕಟಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತರ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಾಲಮನ್ನಾ ಸಂಬಂಧದ ಸಭೆಯಲ್ಲಿ ಮಾತನಾಡಿದ ಅವರು, ರೈತರು ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂಬುದು ತಮ್ಮ ಬಯಕೆ ಎಂದು ಅಪೇಕ್ಷೆಪಟ್ಟರು.

ನೀರು ಲಭ್ಯತೆಯನ್ನು ಆಧರಿಸಿ ಯಾವ ಋತುಮಾನಕ್ಕೆ ಯಾವ ಬೆಳೆ ಬೆಳೆಯಬಹುದು? ಎಂಬುದರ ಕುರಿತು ಸರಕಾರದ ಅಧಿಕಾರಿಗಳು ರೈತರ ಜಮೀನಿಗೆ ಬಂದು ಸಲಹೆ ನೀಡುತ್ತಾರೆ. ಬೆಳೆ ಬೆಳೆಯುವ ಮುನ್ನವೇ ತಮಗೆ ದೊರೆಯುವ ನ್ಯಾಯಯುತ ಬೆಲೆಯ ಬಗ್ಗೆ ಪೂರ್ವ ಮಾಹಿತಿ ಪಡೆದು ರೈತರು ನಿಶ್ಚಿಂತರಾಗಿರಬೇಕು ಎಂದು ಅವರು ಹೇಳಿದರು.

ರೈತರಿಗೆ ನ್ಯಾಯಯುತ ಬೆಲೆ ಖಚಿತಪಡಿಸುವ ಮಾದರಿ ಹಾಗೂ ಪ್ರಾಯೋಗಿಕ ಯೋಜನೆಯನ್ನು ದೇಶದಲ್ಲೆ ಪ್ರಪ್ರಥಮವಾಗಿ ಕರ್ನಾಟಕದಲ್ಲಿ ಜಾರಿಗೆ ತರಲು ಯೋಜಿಸಿದ್ದೇನೆ ಎಂದ ಅವರು, ರೈತರು ಇನ್ನು ಆತಂಕ ಪಡುವ ಅಗತ್ಯವಿಲ್ಲ. ನಮ್ಮದು ಧ್ವನಿ ಇಲ್ಲದ ರೈತರಿಗೆ ಧ್ವನಿಯಾಗಿರುವ ಸರಕಾರ. ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ನಮ್ಮ ಸರಕಾರ ತಮ್ಮ ಜೊತೆಗಿದೆ. ಸರಕಾರಕ್ಕೆ ತಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿದ ಅವರು, ಮುಂದಿನ ದಿನಗಳಲ್ಲಿ ಪ್ರತಿ ಹಳ್ಳಿಗೂ ಕೊಳವೆ ಮೂಲಕ ಶುದ್ಧ ನೀರು ಒದಗಿಸುವ ಕನಸು ನಮ್ಮದಾಗಿದೆ. ಜಲಮೂಲಗಳ ಶೋಧನೆಯ ಜೊತೆಗೆ ಈ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, ಅರವತ್ತರ ದಶಕದಲ್ಲಿ ಭಾರತದಲ್ಲಿ ಅನ್ನವಿಲ್ಲದೆ ಸಾಯುತ್ತಿದ್ದರು. ಆದರೆ, ಎಂಭತ್ತರ ದಶಕದ ವೇಳೆಗೆ ತನ್ನ ದುಡಿಮೆಯಿಂದ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿ ಎಲ್ಲರಿಗೂ ತಿನ್ನಲು ಅನ್ನ ಕೊಟ್ಟ ಅನ್ನದಾತನ ಕೊಡುಗೆಯನ್ನು ನಾವು ಎಂದೂ ಮರೆಯುವಂತಿಲ್ಲ ಎಂದು ಹೇಳಿದರು.

ಸಾಲಮನ್ನಾಕ್ಕೆ ಒಕ್ಕೊರಲ ಧ್ವನಿ: ರೈತರ ಸಾಲಮನ್ನಾಕ್ಕೆ ಕಿಕ್ಕಿರಿದ ಸಭಾಂಗಣದಲ್ಲಿ ಒಕ್ಕೊರಲ ಧ್ವನಿ ಮೊಳಗಿತ್ತಾದರೂ ತಮ್ಮ ಅಭಿಪ್ರಾಯವನ್ನು ಮಂಡಿಸಿದ ಹಲವು ರೈತ ಮುಖಂಡರು ಸಂಪೂರ್ಣ ಸಾಲಮನ್ನಾ ರಾಜ್ಯ ಸರಕಾರಕ್ಕೆ ಹೊರೆಯಾಗುತ್ತದೆ. ಕೇಂದ್ರ ಸರಕಾರದ ನೆರವನ್ನೂ ಪಡೆಯಬೇಕು ಎಂದು ರೈತ ಪ್ರತಿನಿಧಿಗಳು ಮನವಿ ಮಾಡಿದರು.

ರೈತರು ತಮ್ಮ ಭೂಮಿ ಹಾಗೂ ಆಭರಣಗಳನ್ನು ಒತ್ತೆ ಇಟ್ಟು ಖಾಸಗಿ ಲೇವಾದೇವಿಗಾರರಿಂದ ಪಡೆದ ಸಾಲವನ್ನೂ ಮನ್ನಾ ಮಾಡಬೇಕೆಂದು ಕೆಲ ರೈತರು ಆಗ್ರಹಿಸಿದರು. ರೈತರ ಬಾಳನ್ನು ಹಸನು ಮಾಡುವ ಡಾ.ಸ್ವಾಮಿನಾಥನ್ ವರದಿ ಜಾರಿಯಾಗಬೇಕು ಎಂಬ ಒತ್ತಾಯವೂ ಕೇಳಿಬಂತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X