Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾವಿಗೆ ಹೆದರುವ ವ್ಯಕ್ತಿ ನಾನಲ್ಲ:...

ಸಾವಿಗೆ ಹೆದರುವ ವ್ಯಕ್ತಿ ನಾನಲ್ಲ: ಸಾಹಿತಿ ಪ್ರೊ.ಕೆ.ಎಸ್.ಭಗವಾನ್

"ನನ್ನ ಕೊಲೆಗೆ ಸಂಚು ರೂಪಿದವರ ಬಂಧನ ಸ್ವಾಗತಾರ್ಹ"

ವಾರ್ತಾಭಾರತಿವಾರ್ತಾಭಾರತಿ30 May 2018 8:42 PM IST
share
ಸಾವಿಗೆ ಹೆದರುವ ವ್ಯಕ್ತಿ ನಾನಲ್ಲ: ಸಾಹಿತಿ ಪ್ರೊ.ಕೆ.ಎಸ್.ಭಗವಾನ್

ಮೈಸೂರು,ಮೇ.30: ನನ್ನ ಕೊಲೆಗೆ ಸಂಚು ರೂಪಿಸಿದ್ದ ನಾಲ್ವರನ್ನು ಎಸ್.ಐ.ಟಿ ಪೊಲೀಸರು ಬಂಧಿಸಿರುವುದು ಸ್ವಾಗತಾರ್ಹ. ಆದರೆ ಸಾವಿಗೆ ಹೆದರುವ ವ್ಯಕ್ತಿ ನಾನಲ್ಲ ಎಂದು ಖ್ಯಾತ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಹೇಳಿದರು.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಘು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಅವರು ಬುಧವಾರ ತಮ್ಮನ್ನು ಭೇಟಿ ಮಾಡಿದ 'ವಾರ್ತಾ ಭಾರತಿ' ಯೊಂದಿಗೆ ಮಾತನಾಡಿದರು. 'ನಾನು ಸಾವಿಗೆ ಎಂದೂ ಹೆದರಿದವನಲ್ಲ. ಈ ಹಿಂದೆಯೂ ಹಲವಾರು ಬಾರಿ ಬೆದರಿಕೆ ಕರೆಗಳು ಬರುತ್ತಿದ್ದವು. ಇದ್ಯಾವುದಕ್ಕೂ ನಾನು ಕೇರ್ ಮಾಡಲಿಲ್ಲ. ಒಳ್ಳೆಯ ಕೆಲಸ ಮಾಡುವ ಸಂದರ್ಭದಲ್ಲಿ ನನ್ನ ಸಾವು ಸಂಭವಿಸಿದರೆ ಅದಕ್ಕಿಂತ ಬೇರೆ ಸಂತೋಷ ಇಲ್ಲ ಎಂದರು. 

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಮ್ಮ ಮನೆಯ ಬಳಿ ಬಂಧನಕ್ಕೊಳಗಾದ ವ್ಯಕ್ತಿ ಹಲವಾರು ದಿನಗಳಿಂದ ನಮ್ಮ ಮನೆಯ ಪಕ್ಕದ ಹೋಟೆಲ್‍ನಲ್ಲಿ ಬಂದು ಕೂರುತ್ತಿದ್ದ ಎಂದು ನಂತರ ಗೊತ್ತಾಯಿತು. ಆದರೆ ಆತ ಒಂದು ದಿನವೂ ನನ್ನ ಕಣ್ಣಿಗೆ ಬೀಳಲಿಲ್ಲ. ನಮ್ಮ ಮನೆ ಮತ್ತು ನನ್ನ ಜೊತೆ ಪೊಲೀಸರು ಸದಾ ಇರುವುದರಿಂದ ಕೊಲೆ ಯತ್ನ ಸಾಧ್ಯವಾಗಲಿಲ್ಲ ಎನ್ನಿಸುತ್ತದೆ ಎಂದು ಹೇಳಿದರು.

ನಾಲ್ವರು ಸಂಚುಕೋರರಿಗಷ್ಟೇ ನನ್ನನ್ನು ಕೊಲೆ ಮಾಡಲು ಸಾಧ್ಯವಿಲ್ಲ. ಇದರ ಹಿಂದೆ ಬೇರೆ ಯಾವುದೋ ಸಂಘಟನೆ, ಸಿದ್ಧಾಂತಗಳು ಕೆಲಸ ಮಾಡುತ್ತಿವೆ ಎಂಬ ಅನುಮಾನ ಮೂಡುತ್ತಿದೆ. ಪೊಲೀಸರು ಅದನ್ನು ಪತ್ತೆ ಹಚ್ಚಿದರೆ ಮೂಲಭೂತವಾದವನ್ನು ತಡೆಗಟ್ಟಬಹುದು. ಮೂಲಭೂತವಾದಿಗಳಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಮೂಲಭೂತವಾದವನ್ನು ಸಂಪೂರ್ಣ ಹತ್ತಿಕ್ಕುವ ಕೆಲಸ ಮಾಡಬೇಕು. ಇದರಿಂದ ದೇಶಕ್ಕೆ ಅಂಟಿಕೊಂಡಿರುವ ಮೂಢ ನಂಬಿಕೆ, ಕಂದಾಚಾರ, ಕೊಲೆ, ಸುಲಿಗೆಗಳು ನಿಲುಗಡೆಗೆ ಬರುತ್ತವೆ ಎಂಬುದು ನನ್ನ ಭಾವನೆ. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಾವುಗಳು ನಡೆದುಕೊಳ್ಳಬೇಕು. ಸಂವಿಧಾನದ ಹಕ್ಕುಗಳ ಬಗ್ಗೆ ಮಾತನಾಡುವ ನಾವು ಕರ್ತವ್ಯ ಮರೆಯುತ್ತಿದ್ದೇವೆ.  ಸಂವಿಧಾನದ ಪರಿಚ್ಛೇದ 51 ಎ.ಎಚ್. ಅಡಿಯಲ್ಲಿ ನಾನು ನಡೆಯುತ್ತಿದ್ದೇನೆ ಎಂಬ ಹೆಮ್ಮೆ ಇದೆ ಎಂದು ಹೇಳಿದ ಅವರು, ಹಕ್ಕುಗಳ ಬಗ್ಗೆ ಮಾತನಾಡುವ ನಾನು ಕರ್ತವ್ಯವನ್ನು ಪಾಲಿಸುತ್ತಿದ್ದೇನೆ ಎಂದು ಹೇಳಿದರು.                                                           

ನಮ್ಮ ಎಸ್‍ಐಟಿ ಅಧಿಕಾರಿಗಳು ಸಮರ್ಥವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿಷ್ಟಾವಂತ ಅಧಿಕಾರಿಗಳು ಇರುವುದರಿಂದ ಇಂತಹ ಘಟನೆಗಳನ್ನು ಭೇದಿಸಲು ಸಾಧ್ಯ. ಗೌರಿ ಹತ್ಯೆಗೆ ಕಾರಣರಾದವರನ್ನು ಭೇದಿಸುವುದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಜಾಗ್ರತೆಯಿಂದ ನನಗೆ ಪೊಲೀಸರ ರಕ್ಷಣೆಯನ್ನು ಹಿಂದೆಯೇ ಒದಗಿಸಿದ್ದರು. ಅವರಿಗೆ ನಾನು ಕೃತಘ್ನನಾಗಿದ್ದೇನೆ. ಹೊಸದಾಗಿ ಬರೆದಿರುವ 'ರಾಮಮಂದಿರ ಏಕೆ ಬೇಡ' ಎಂಬ ಪುಸ್ತಕ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ. ಅದರಲ್ಲಿ ರಾಮಾಯಣ ಮತ್ತು ರಾಮನ ಕುರಿತು ಹೊಸ ಆಯಾಮವನ್ನು ಬರೆದಿದ್ದೇನೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X