Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ವರ್ಷ ದೇಶಾದ್ಯಂತ ಸಾಮಾನ್ಯ ಮಳೆ: ಐಎಂಡಿ

ಈ ವರ್ಷ ದೇಶಾದ್ಯಂತ ಸಾಮಾನ್ಯ ಮಳೆ: ಐಎಂಡಿ

ವಾರ್ತಾಭಾರತಿವಾರ್ತಾಭಾರತಿ30 May 2018 10:54 PM IST
share
ಈ ವರ್ಷ ದೇಶಾದ್ಯಂತ ಸಾಮಾನ್ಯ ಮಳೆ: ಐಎಂಡಿ

ಹೊಸದಿಲ್ಲಿ, ಮೇ 30: ಪೂರ್ವ ಮತ್ತು ಈಶಾನ್ಯ ಭಾರತವನ್ನು ಹೊರತುಪಡಿಸಿ ದೇಶಾದ್ಯಂತ ಈ ವರ್ಷ ಸಾಮಾನ್ಯ ಮುಂಗಾರು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಬುಧವಾರ ತಿಳಿಸಿದೆ. ಇವೆರಡು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಕಳೆದ ಎಪ್ರಿಲ್‌ನಲ್ಲಿ ಪ್ರಕಟಿಸಿದ್ದ ತನ್ನ ಮೊದಲ ಸುತ್ತಿನ ಮಳೆ ಭವಿಷ್ಯದಲ್ಲಿ ಯಾವುದೇ ಬದಲಾವಣೆಯನ್ನು ಅದು ಮಾಡಿಲ್ಲ.

ಒಟ್ಟಾರೆ ದೇಶದಲ್ಲಿ ಸುರಿಯಲಿರುವ ಮಳೆಯ ಪ್ರಮಾಣವು ಜುಲೈನಲ್ಲಿ ದೀರ್ಘಾವಧಿ ಸರಾಸರಿ ಅಥವಾ ವಾಡಿಕೆಗಿಂತ ಶೇ.101 ಮತ್ತು ಆಗಸ್ಟ್‌ನಲ್ಲಿ ಶೇ.94ರಷ್ಟು(ಶೇ.9 ಹೆಚ್ಚು ಅಥವಾ ಕಡಿಮೆ) ಆಗಲಿದೆ ಎಂದು ಐಎಂಡಿ ತಿಳಿಸಿದೆ.

ಮಳೆಯ ಪ್ರಮಾಣ ದೀರ್ಘಾವಧಿ ಸರಾಸರಿಯ ಶೇ.90ರಿಂದ 96ರೊಳಗಿದ್ದರೆ ಅದನ್ನು ಸಾಮಾನ್ಯಕ್ಕಿಂತ ಕಡಿಮೆ ಮತ್ತು ಶೇ.96ರಿಂದ 104ರೊಳಗಿದ್ದರೆ ಅದನ್ನು ಸಾಮಾನ್ಯ ಎಂದು ಪರಿಗಣಿಸಲಾಗುತ್ತದೆ. ದೀರ್ಘಾವಧಿ ಸರಾಸರಿಯ ಶೇ.90ಕ್ಕಿಂತ ಕಡಿಮೆ ಮಳೆ ಬಿದ್ದರೆ ಅದನ್ನು ಮಳೆ ಕೊರತೆ ಎಂದು ಮತ್ತು ಶೇ.104ರಿಂದ 110ರೊಳಗಿದ್ದರೆ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಎಂದು ಪರಿಗಣಿಸಲಾಗುತ್ತದೆ. ಶೇ.110ಕ್ಕಿಂತ ಹೆಚ್ಚು ಮಳೆಯಾದರೆ ಅದು ಅತಿವೃಷ್ಟಿಯಾಗುತ್ತದೆ. ದೇಶಾದ್ಯಂತ 2018ರಲ್ಲಿ(ಜೂನ್-ಸೆಪ್ಟೆಂಬರ್) ಮುಂಗಾರು ಮಳೆಯು ಸಾಮಾನ್ಯವಾಗಿರುವ ಶೇ.43ರಷ್ಟು ಸಾಧ್ಯತೆಯಿದೆ(ವಾಡಿಕೆ ಮಳೆಯ ಶೇ.96-ಶೇ.104) ಎಂದು ಐಎಂಡಿ ತಿಳಿಸಿದೆ.

ಪ್ರದೇಶವಾರು,ವಾಯುವ್ಯ ಭಾರತದಲ್ಲಿ ವಾಡಿಕೆ ಮಳೆಯ ಶೇ.100,ಮಧ್ಯ ಭಾರತದಲ್ಲಿ ಶೇ.99,ದಕ್ಷಿಣ ಭಾರತದಲ್ಲಿ ಶೇ.95 ಮತ್ತು ಪೂರ್ವ ಹಾಗೂ ಈಶಾನ್ಯ ಭಾರತಗಳಲ್ಲಿ ಶೇ.93ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಇದರಲ್ಲಿ ಶೇ.8ರಷ್ಟು ಹೆಚ್ಚು ಅಥವಾ ಕಡಿಮೆಯಾಗಬಹುದು ಎಂದು ಅದು ಹೇಳಿದೆ.

ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ ವರದಿಯಂತೆ ಜೂನ್‌ನಲ್ಲಿ ದೀರ್ಘಾವಧಿ ಸರಾಸರಿಯ ಶೇ.111ರಷ್ಟು ಮಳೆಯಾಗುವ ಸಾಧ್ಯತೆಯಿದೆಯಾದರೂ, ಜುಲೈ ಮತ್ತು ಆಗಸ್ಟ್‌ನಲ್ಲಿ ಶೇ.97 ಮತ್ತು ಶೇ.95ರಷ್ಟು ಮಳೆಯಾಗಬಹುದು.

ಮಳೆಯು ಸೆಪ್ಟೆಂಬರ್‌ನಲ್ಲಿ ಚೇತರಿಸಿಕೊಳ್ಳುವ ನಿರೀಕ್ಷೆಯಿದ್ದು,ಅದು ದೀರ್ಘಾವಧಿ ಸರಾಸರಿಯ ಶೇ.101ರಷ್ಟು ಮಳೆಯ ಪ್ರಮಾಣವನ್ನು ದಾಖಲಿಸಬಹುದು ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X