Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 4 ವರ್ಷಗಳ ಮೋದಿ ಸರಕಾರದ ವೈಫಲ್ಯಗಳ...

4 ವರ್ಷಗಳ ಮೋದಿ ಸರಕಾರದ ವೈಫಲ್ಯಗಳ ಸಂಪೂರ್ಣ ವಿವರ ನೀಡುವ Modireportcard.com

ಜನರ ಗಮನಸೆಳೆದ ವಿಶಿಷ್ಟ ವೆಬ್ ಸೈಟ್

ವಾರ್ತಾಭಾರತಿವಾರ್ತಾಭಾರತಿ30 May 2018 10:59 PM IST
share
4 ವರ್ಷಗಳ ಮೋದಿ ಸರಕಾರದ ವೈಫಲ್ಯಗಳ ಸಂಪೂರ್ಣ ವಿವರ ನೀಡುವ Modireportcard.com

ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ 4 ವರ್ಷಗಳನ್ನು ಪೂರೈಸಿರುವ ನಡುವೆಯೇ modireportcard.com ಎನ್ನುವ ವೆಬ್ ಸೈಟ್ ಒಂದು ಕೇಂದ್ರ ಸರಕಾರ ಯಾವ್ಯಾವ ಕ್ಷೇತ್ರಗಳಲ್ಲಿ ಅಕ್ಷರಶಃ ವಿಫಲವಾಗಿದೆ ಎನ್ನುವ ಪಟ್ಟಿ ಮಾಡಿದೆ.

“ತಾನು ಪ್ರಧಾನಮಂತ್ರಿಯಾದರೆ ದೇಶವನ್ನು ಸುವರ್ಣಯುಗಕ್ಕೆ ಕೊಂಡೊಯ್ಯಲಿದ್ದೇನೆ ಎಂದು 2014ರಲ್ಲಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಲಕ್ಷಾಂತರ ಭಾರತೀಯರು ಅವರ ಅಭಿವೃದ್ಧಿ, ಉದ್ಯೋಗ, ಹಾಗು ಅಚ್ಚೇ ದಿನ್ ನ ಭರವಸೆಯನ್ನು ನಂಬಿ ಅಧಿಕಾರಕ್ಕೆ ತಂದರು. 4 ವರ್ಷಗಳ ನಂತರ ಭಾರತ ಹೇಗಿದೆ? ನರೇಂದ್ರ ಮೋದಿ ರಿಪೋರ್ಟ್ ಕಾರ್ಡ್ ನಿಮಗೆ ಉತ್ತರ ನೀಡುತ್ತದೆ” ಎನ್ನುವ ಒಕ್ಕಣೆ modireportcard.com ವೆಬ್ ಸೈಟ್ ನ ಆರಂಭದಲ್ಲಿದೆ.

ಮೋದಿ ಸರಕಾರದ ವೈಫಲ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವುದು ‘ನಿರುದ್ಯೋಗ’

ಮೋದಿ ಸರಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳ ನಂತರ ವಿಶ್ವದಲ್ಲೇ ಭಾರತದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳಿದ್ದಾರೆ ಎಂದು modireportcard.com ವೆಬ್ ಸೈಟ್ ಹೇಳುತ್ತದೆ.

ಪ್ರತಿ ವರ್ಷ ಒಂದು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿ ಮೋದಿ ಅಧಿಕಾರಕ್ಕೆ ಬಂದಿದ್ದರು. ಆದರೆ ಕೇಂದ್ರ ಸರಕಾರವು ವಾರ್ಷಿಕ 2.05 ಲಕ್ಷ ಮಂದಿಗಷ್ಟೇ ಉದ್ಯೋಗ ನೀಡಿದೆ. 2014ರಲ್ಲಿ 3.41ಶೇ.ದಷ್ಟಿದ್ದ ನಿರುದ್ಯೋಗದ ಪ್ರಮಾಣ 2018ರಲ್ಲಿ 6.23ರಷ್ಟಾಗಿದೆ.

ಭರವಸೆ ನೀಡಿದಂತೆ 4 ವರ್ಷಗಳಲ್ಲಿ 4 ಕೋಟಿ ಉದ್ಯೋಗ ಸೃಷ್ಟಿಯ ಬದಲಾಗಿ, 8.23 ಲಕ್ಷ ಉದ್ಯೋಗಗಳಷ್ಟೇ ಸೃಷ್ಟಿಯಾಗಿವೆ ಎಂದು ತಿಳಿಸಲಾಗಿದೆ. ಇದಕ್ಕೆ ಬೇಕಾದ ಸುದ್ದಿಯ ಲಿಂಕ್ ಗಳನ್ನೂ ನಮೂದಿಸಲಾಗಿದೆ.

ಇಷ್ಟೇ ಅಲ್ಲದೆ ಇತ್ತೀಚಿನ ದಿನಗಳಲ್ಲಿ ದೇಶದ ಜನರ ಕೋಪಕ್ಕೆ ತುತ್ತಾಗಿರುವ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ಬಗ್ಗೆಯೂ ವಿವರಿಸಲಾಗಿದೆ. ಈ ಹಿಂದೆಂದಿಗಿಂತಲೂ ತೈಲ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಜಗತ್ತಿನಾದ್ಯಂತ ಕಚ್ಛಾ ತೈಲ ಬೆಲೆಯು ಕನಿಷ್ಠವಿರುವ ಈ ಸಮಯದಲ್ಲಿ ದೇಶದಲ್ಲಿ ಈ ಪರಿಸ್ಥಿತಿಯಿದೆ. ಬಿಜೆಪಿ ಸರಕಾರವು ಪೆಟ್ರೋಲ್ ಹಾಗು ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತಲೇ ಇದೆ. ತೈಲದ ಮೇಲಿನ ಸುಂಕದಿಂದ 2014ರಿಂದ ಸರಕಾರವು 4.5 ಲಕ್ಷ ಕೋಟಿ ರೂ,ಗಳನ್ನು ಗಳಿಸಿದೆ. ಅದರೆ ಜನಸಾಮಾನ್ಯರಿಗಾಗಿ ಯಾವ ಪ್ರಯೋಜನವನ್ನೂ ನೀಡಿಲ್ಲ. “ಈ ಎಲ್ಲಾ ಹಣ ಎಲ್ಲಿ ಹೋಯಿತು?” ಎನ್ನುವುದೇ ಅತೀ ದೊಡ್ಡ ಪ್ರಶ್ನೆಯಾಗಿದೆ” ಎಂದು modireportcard.com ವೆಬ್ ಸೈಟ್ ಉಲ್ಲೇಖಿಸಿದೆ.

ಕೇಂದ್ರ ಸರಕಾರದ ವೈಫಲ್ಯಗಳನ್ನು ಪಟ್ಟಿ ಮಾಡಲೆಂದೇ ಈ ವೆಬ್ ಸೈಟನ್ನು ರಚಿಸಲಾಗಿದೆ. ಸರಕಾರದ ಪ್ರತಿಯೊಂದು ವೈಫಲ್ಯತೆಗಳನ್ನು ಪಟ್ಟಿ ಮಾಡುವಾಗ ಸುದ್ದಿ ಲಿಂಕ್ ಗಳನ್ನು ನೀಡಲಾಗಿದೆ. ವ್ಯಂಗ್ಯಚಿತ್ರಗಳನ್ನು ಬಳಸಲಾಗಿದ್ದು, ಇಲಸ್ಟ್ರೇಟರ್ ಗಳ ಮೂಲಕ ವಿಷಯಗಳನ್ನು ಪ್ರಸ್ತುತಪಡಿಸಲಾಗಿದ್ದು, ಓದುಗರಿಗೆ ಸುಲಭವಾಗಿ ಮನದಟ್ಟಾಗುವ ಹಾಗೆ ಸರಳ ಭಾಷೆಯನ್ನು ಬಳಸಲಾಗಿದೆ. ಇಷ್ಟೇ ಅಲ್ಲದೆ ಕೆಲವೊಂದು ವೈಫಲ್ಯತೆಗಳನ್ನು ಪಟ್ಟಿ ಮಾಡುವ ಸಂದರ್ಭ ನಕಾಶೆಗಳ ಮೂಲಕವೂ ವಿವರಿಸಲಾಗಿದೆ. ಈ ವೆಬ್ ಸೈಟ್ ದಿನೇ ದಿನೇ ಹೆಚ್ಚು ಜನಪ್ರಿಯತೆ ಗಳಿಸುತ್ತಿದ್ದು, ಭಾರೀ ಮೆಚ್ಚುಗೆಗೂ ಪಾತ್ರವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X