Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಫಾಹ್ ವೈರಸ್ ಬಗ್ಗೆ ಆತಂಕ ಬೇಡ:...

ನಿಫಾಹ್ ವೈರಸ್ ಬಗ್ಗೆ ಆತಂಕ ಬೇಡ: ಚಿಕ್ಕಮಗಳೂರು ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ30 May 2018 11:02 PM IST
share
ನಿಫಾಹ್ ವೈರಸ್ ಬಗ್ಗೆ ಆತಂಕ ಬೇಡ: ಚಿಕ್ಕಮಗಳೂರು ಜಿಲ್ಲಾಧಿಕಾರಿ

ಚಿಕ್ಕಮಗಳೂರು, ಮೇ 30: ಜಿಲೆಯಲ್ಲಿ ನಿಫಾಹ್ ವೈರಸ್ ರೋಗ ಈವರೆಗೆ ಕಂಡುಬಂದಿಲ್ಲ ಯಾವುದೇ ಶಂಕಿತ ಪ್ರಕರಣಗಳು ಸಹ ವರದಿಯಾಗಿಲ್ಲ. ಸಾರ್ವಜನಿಕರು ನಿಫಾ ವೈರಸ್ ರೋಗದ ಬಗ್ಗೆ ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇವರು ನಿಫಾ ವೈರಸ್ ಮತ್ತು ಇತರೇ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತ ಅಂತರ್ ಇಲಾಖಾ ಸಮನ್ವಯ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಿಫಾ ವೈರಸ್ ರೋಗಕ್ಕೆ ಯಾವುದೇ ಚಿಕಿತ್ಸೆಯಾಗಲೀ ಅಥವಾ ಲಸಿಕೆಯಾಗಲೀ ಲಭ್ಯವಿಲ್ಲ, ಈ ರೋಗ ಬರದಂತೆ ನೋಡಿಕೊಳ್ಳುವುದಕ್ಕೆ ಮುಂಜಾಗೃತೆ ವಹಿಸುವುದೇ ಮುಖ್ಯವಾಗಿದೆ ಎಂದರು.

ಈ ರೋಗವು ಸದ್ಯ ಕೇರಳ ರಾಜ್ಯದ ಕೋಝಿಕೊಡ್, ಮಲಪುರಂ, ವಯನಾಡ್ ಹಾಗೂ ಕನ್ನೂರ್ ಜಿಲ್ಲೆಗಳನ್ನು ನಿಫಾ ವೈರಸ್ ರೋಗ ಹರಡುವ ಅಪಾಯಕಾರಿ ಜಿಲ್ಲೆಗಳೆಂದು ಗುರುತಿಸಲಾಗಿದೆ. ಈ ಜಿಲ್ಲೆಗಳಿಗೆ ತಾತ್ಕಲಿಕ ಪ್ರವಾಸ ಕೈಗೊಳ್ಳದಂತೆ ಕೇರಳದಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಮೇಲೆ ನಿಗಾವಹಿಸಬೇಕೆಂದರು.

ಜಿಲ್ಲಾ  ಸರ್ವೇಕ್ಷಣಾ ವರ್ಷದ ವೈದ್ಯಾಧಿಕಾರಿ ಸಭೆಗೆ ಮಾಹಿತಿ ನೀಡುತ್ತಾ, ಇದೊಂದು ಹೊಸದಾಗಿ ಕಂಡು ಬಂದ ವೈರಾಣು ಸೋಂಕು ಇದಾಗಿದೆ. ತಲೆನೋವು, ತಲೆ ಸುತ್ತುವಿಕೆ, ದಿಗ್ಬ್ರಮೆ, ಮಾನಸಿಕ ಗೊಂದಲ ಜ್ಞಾನ ತಪ್ಪುವುದು ಕುಂಡು ಬರುತ್ತದೆ. ಸೋಂಕಿತ ಬಾವಲಿಗಳ ನೇರ ಸಂಪರ್ಕದಿಂದ ಹಾಗೂ ಬಿಸಾಡಿದ ಹಣ್ಣು ಹಂಪಲುಗಳನ್ನು ಸೇವಿಸುವುದರ ಮೂಲಕ ಇತರೆ ಪಕ್ಷಿಗಳಿಗೆ ಹರಡುತ್ತದೆ. ಸೋಂಕಿತ ಪಕ್ಷಿಗಳಿಂದ ಇದೆ ಪಕ್ಷಿಗಳಿಗೆ ಮಲ, ಮೂತ್ರ ಜೊಲ್ಲು ಮತ್ತು ರಕ್ತ ಇವುಗಳ ಸಂಪರ್ಕದಿಂದ ಸೋಂಕಿತ ಬಾವುಲಿಗಳು ಕಚ್ಚಿದ ಹಣ್ಣುಗಳನ್ನು ಸೇವಿಸುವುದರಿಂದ, ಸೋಂಕಿತ ಮನುಷ್ಯನ ಮಲ, ಮೂತ್ರ , ಜೊಲ್ಲು ಮತ್ತು ರಕ್ತ ಇವುಗಳ ನೇರ ಸಂಪರ್ಕದಿಂದ ಆರೋಗ್ಯವಂತ ಮುನುಷ್ಯನಿಗೆ ಹರಡುತ್ತದೆ. ಮನುಷ್ಯರಲ್ಲಿ ಜ್ವರ, ತಲೆನೋವು, ತಲೆ ಸುತ್ತುವಿಕೆ, ದಿಗ್ಬ್ರಮೆ, ಮಾನಸಿಕ ಗೊಂದಲ ಜ್ಞಾನ ನಿಫಾ ರೋಗದ ಲಕ್ಷಣಗಳು ಕಂಡುಬಂದಲ್ಲಿ ಎಲೀಸಾ ಆಧಾರಿತ ರಕ್ತ ಪರೀಕ್ಷೆಯಿಂದ ನಿಫಾ ವೈರಾಣುಗಳನ್ನು ಗುರುತಿಸಬಹುದಾಗಿದೆ ಎಂದರು.

ನಿಫಾ ವೈರಾಣು ಜ್ವರವನ್ನು ತಡೆಗಟ್ಟಲು ಪಕ್ಷಿಗಳು ಮತ್ತು ಪ್ರಾಣಿಗಳು ಕಚ್ಚಿದ ಹಣ್ಣುಗಳನ್ನು ಸೇವಿಸಬಾರದು. ಬಾವಲಿಗಳು ಹೆಚ್ಚಾಗಿರುವ ಪ್ರದೇಶಗಳಿಂದ ಸಂಗ್ರಹಿಸಿದ ಸೇಂದಿ/ನೀರಾ ಕುಡಿಯಬಾರದು. ತಾಜಾ ತಾಳೆ ಹಣ್ಣಿನ ರಸವನ್ನು ಸೇವಿಸಬಾರದು. ಹಣ್ಣು ಮತ್ತು ಒಣ ಖರ್ಜೂರ ಸೇವಿಸು ಮೊದಲು ಸಂಪೂರ್ಣವಾಗಿ ಶುದ್ಧೀಕರಿಸಿ ತಿನ್ನಬೇಕು. ಅನಾರೋಗ್ಯದ ಹಂದಿಗಳನ್ನು, ಪ್ರಾಣಿಗಳೊಂದಿಗಿನ ನೇರ ಸಂಪರ್ಕ ತಪ್ಪಿಸಬೇಕು. ತೆರೆದ ಬಾವಿಗಳಿಗೆ ಬಾವಲಿಗಳು ಪ್ರವೇಶಿಸದಂತೆ ಬಾವಿಗಳಿಗೆ ಜಾಲರಿಗಳನ್ನು ಅಳವಡಿಸಬೇಕು. ನಿಫಾ ವೈರಸ್ ರೋಗ ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್‍ ಅನ್ನು ತೆರೆಯಬೇಕು. ಆರೋಗ್ಯ ಇಲಾಖೆಯಿಂದ ನಿಫಾ ವೈರಸ್ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತ ಕರಪತ್ರಗಳನ್ನು ಮುದ್ರಿಸಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿವರಿಸಬೇಕು ಎಂದು ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜು ಚೇಂಗಟ್ಟಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮಲ್ಲಿಕಾರ್ಜುನಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X