ಬಂಟ್ವಾಳ: ಅಕ್ರಮ ಮರದ ದಿಮ್ಮಿಗಳ ಸಾಗಣೆ- ಆರೋಪಿ ಸೆರೆ

ಬಂಟ್ವಾಳ, ಮೇ 31: ಲಾರಿಯೊಂದರಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಆರೋಪದ ಮೇರೆಗೆ ವಾಹನ ಸಹಿತ ಅರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬಿ.ಸಿ.ರೋಡ್ನಲ್ಲಿ ಗುರುವಾರ ನಡೆದಿದೆ.
ಲಾರಿ ಚಾಲಕ, ಕೊಳ್ನಾಡು ನಿವಾಸಿ ಅಬ್ದುಲ್ ರಝಾಕ್ ಬಂಧಿತ ಆರೋಪಿ. ಬಂಟ್ವಾಳ ತಾಲೂಕು ಮಂಚಿ ಗ್ರಾಮದ ನಾಡಾಜೆ ಎಂಬಲ್ಲಿ ಲಾರಿಯೊಂದರಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಣೆ ಮಾಡಲಾಗುತ್ತಿದೆ ಎಂಬ ದೂರಿನ್ವಯ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಮರದ ದಿಮ್ಮಿಗಳನ್ನೊಳಗೊಡ ಲಾರಿ ಸಹಿತ ಆರೋಪಿಯನ್ನು ಬಂಧಿಸಲಾಗಿದೆ. ತದನಂತರ ಜಾಮೀನಿನ ಮೇರೆಗೆ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಸುಮಾರು ಲಕ್ಷ ರೂ. ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಲಯ ಅರಣ್ಯಾಧಿಕಾರಿ ಸುರೇಶ್ ಬಿ., ಉಪವಲಯಾರಣ್ಯಾಧಿಕಾರಿ ಪ್ರೀತಂ, ಅರಣ್ಯ ರಕ್ಷಕರಾದ ಜಿತೇಶ್ ಪಿ, ದಯಾನಂದ, ವಿನಯಕುಮಾರ್, ಶಿವಲಿಂಗ ಸ್ವಾಮಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
Next Story