Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್...

ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಆಪ್ತರ ನಿವಾಸ, ಕಚೇರಿ ಮೇಲೆ ಸಿಬಿಐ ದಾಳಿ

ವಾರ್ತಾಭಾರತಿವಾರ್ತಾಭಾರತಿ31 May 2018 9:06 PM IST
share
ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಆಪ್ತರ ನಿವಾಸ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು, ಮೇ31: ಅಮಾನ್ಯಗೊಂಡ ನೋಟುಗಳನ್ನು ಅಕ್ರಮವಾಗಿ ಬದಲಾಯಿಸಲಾಗುತ್ತಿದೆ ಎಂಬ ಆರೋಪದಲ್ಲಿ ಸಿಬಿಐ ಅಧಿಕಾರಿಗಳು ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರ ಜೊತೆ ಸಂಪರ್ಕ ಹೊಂದಿರುವವರ ನಿವಾಸ ಹಾಗೂ ಕಚೇರಿಯ ಮೇಲೆ ಗುರುವಾರ ಮುಂಜಾನೆ ದಾಳಿ ನಡೆಸಿದ್ದಾರೆ.

ಶಾಸಕ ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿ.ಕೆ ಸುರೇಶ್, ಇದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಪ್ರತೀಕಾರದ ರಾಜಕೀಯ ನಡೆಯಾಗಿದೆ ಎಂದು ಆರೋಪಿಸಿದ್ದಾರೆ. 2016ರ ನವೆಂಬರ್ 14ರಂದು ರಾಮನಗರದಲ್ಲಿರುವ ಕಾರ್ಪೊರೇಶನ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕ ಬಿ.ಪ್ರಕಾಶ್ ಇತರ ಅಪರಿಚಿತರ ಸಹಮತದೊಂದಿಗೆ ಹತ್ತು ಲಕ್ಷ ರೂ. ಅಮಾನ್ಯಗೊಂಡ ನೋಟುಗಳನ್ನು ಹೊಸ ನೋಟುಗಳೊಂದಿಗೆ ಬದಲಾಯಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿತ ರಶೀದಿಗಳನ್ನು ತಿರುಚಿದ್ದಾರೆ ಎಂಬ ಆರೋಪ ಕೂಡಾ ಪ್ರಕಾಶ್ ಹಾಗೂ ಇತರ ಮೇಲಿದೆ.

ಸಿಬಿಐ ಅಧಿಕಾರಿಗಳು ಬೆಂಗಳೂರು, ಕನಕಪುರ ಮತ್ತು ರಾಮನಗರದಲ್ಲಿ ಐದು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಕನಕಪುರದ ಚುನಾವಣಾ ಕೇಂದ್ರ, ರಾಮನಗರದ ಕಚೇರಿ ಹಾಗೂ ಚುನಾವಣಾ ಕೇಂದ್ರ ಉಸ್ತುವಾರಿ ಶಿವನಂದ, ಕ್ಲಾರ್ಕ್ ನಂಜಪ್ಪ ಮತ್ತು ಪದ್ಮನಾಭಯ್ಯ ಎಂಬವರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. ಪದ್ಮನಾಭಯ್ಯ ಹಳೆ ನೋಟುಗಳನ್ನು ಬ್ಯಾಂಕ್‌ನಲ್ಲಿ ಬದಲಾಯಿಸಿದ್ದರು ಎಂಬ ಆರೋಪ ಎದುರಿಸುತ್ತಿದ್ದಾರೆ. ಪ್ರಕಾಶ್ ಹಾಗೂ ಕಾರ್ಪೊರೇಶನ್ ಬ್ಯಾಂಕ್‌ನ ಇತರ ಅಧಿಕಾರಿಗಳು ಮತ್ತು ಇತರರ ವಿರುದ್ಧ 2017ರ ಎಪ್ರಿಲ್ 7ರಂದು ದೂರು ದಾಖಲಿಸಲಾಗಿತ್ತು.

ಸಿಬಿಐ ವಿಶೇಷ ನ್ಯಾಯಾಲಯವು ತಾನೂ ಸೇರಿ ಹನ್ನೊಂದು ಜನರ ವಿರುದ್ಧ ಸರ್ಚ್ ವಾರಂಟ್ ಹೊರಡಿಸಿತ್ತು. ಆದರೆ ತಾನು ಇದನ್ನು ನಿರ್ಲಕ್ಷಿಸಿದ್ದೆ ಎಂದು ತಿಳಿಸಿರುವ ಸುರೇಶ್, ಕೇಂದ್ರ ಸರಕಾರವು ತನ್ನ ಮತ್ತು ಸಹೋದರ ಶಿವಕುಮಾರ್‌ರನ್ನು ಗುರಿ ಮಾಡುತ್ತಿದೆ ಎಂದು ಆರೋಪಿಸಿದೆ.

“ಇಲ್ಲಿ ಮುಖ್ಯ ಗುರಿಯಾಗಿರುವುದು ನಾನು ಮತ್ತು ನನ್ನ ಸಹೋದರ, ಬೇರೆ ಯಾರೂ ಅಲ್ಲ. ಇತರರನ್ನು ಗುರಿ ಮಾಡುವ ಮೂಲಕ ಅವರು ನಮ್ಮನ್ನು ತಲುಪಲು ನೋಡುತ್ತಿದ್ದಾರೆ. ನನಗೆ ಈ ಹನ್ನೊಂದು ಜನರು ಯಾರೆಂದು ಗೊತ್ತಿಲ್ಲ. ಪ್ರತೀಕಾರದ ಯಾವುದೇ ನಡೆಯ ವಿರುದ್ಧ ಕಾನೂನು ಸಮರಕ್ಕೆ ನಾನು ಸಿದ್ಧ” ಎಂದು ಡಿ.ಕೆ ಸುರೇಶ್ ತಿಳಿಸಿದ್ದಾರೆ. ಕರ್ನಾಟಕ ಚುನಾವಣೆಯ ನಂತರ ಬಿಜೆಪಿ ತಮ್ಮ ಪಕ್ಷದ ಶಾಸಕರನ್ನು ಸೆಳೆಯುವುದನ್ನು ತಪ್ಪಿಸಲು ಅವರೆಲ್ಲರನ್ನು ರೆಸಾರ್ಟ್‌ನಲ್ಲಿ ಇಡುವಲ್ಲಿ ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು.

ಈ ಸ್ಥಿತಿಯು ಶಾಶ್ವತವಲ್ಲ ಮತ್ತು ಯಾರೂ ಅಮರರಲ್ಲ ಎಂಬುದನ್ನು ಬಿಜೆಪಿ ಅಧೀನದಲ್ಲಿರುವ ಅಧಿಕಾರಿಗಳು ತಿಳಿದುಕೊಳ್ಳಬೇಕು. ಯಾರೂ ಶಾಶ್ವತವಾಗಿ ಅಧಿಕಾರದಲ್ಲಿರುವುದಿಲ್ಲ, ನಿಮ್ಮ ಅಧಿಕಾರ ಕೂಡಾ ಶಾಶ್ವತವಲ್ಲ. ನಿಮಗೆ ಸ್ವಲ್ಪ ಸಮಯಕ್ಕಷ್ಟೇ ಅಧಿಕಾರ ನೀಡಲಾಗಿದೆ. ಹಾಗಾಗಿ ಕೆಲವರ ಕೈಗೊಂಬೆಯಂತೆ ವರ್ತಿಸಿ ಇತರರಿಗೆ ತೊಂದರೆ ನೀಡಬೇಡಿ ಎಂದು ಶಿವಕುಮಾರ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.

“ಬಿಜೆಪಿ, ಅಮಿತ್ ಶಾ ಮತ್ತು ನರೇಂದ್ರ ಮೋದಿ ನಮ್ಮನ್ನು ಗುರಿ ಮಾಡುತ್ತಿದ್ದಾರೆ. ಅವರು ಸಿಬಿಐ, ಐಟಿ ಮತ್ತು ಇಡಿಯ ಕೇಂದ್ರ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಇವರೆಲ್ಲರೂ ಮೂರು ನಾಲ್ಕು ವಾರಗಳ ಹಿಂದೆ ಸಭೆ ನಡೆಸಿದ್ದರು ಎಂಬ ಮಾಹಿತಿ ನಮಗೆ ದೊರಕಿದೆ. ಇದನ್ನು ನಾವು ಕೆಲವರ ಮೂಲಕ ಖಚಿತಪಡಿಸಿಕೊಂಡಿದ್ದೇವೆ” ಎಂದು ಡಿ.ಕೆ ಸುರೇಶ್ ತಿಳಿಸಿದ್ದಾರೆ.

“ಬೆದರಿಸಿದರೆ ನಾನು ಮತ್ತು ನನ್ನ ಕುಟುಂಬವನ್ನು ತಮ್ಮ ಮುಂದೆ ತಲೆಬಾಗುತ್ತದೆ ಎಂದು ಕೆಲವರು ತಿಳಿದಿದ್ದರೆ, ನಾವು ಹಾಗೆಲ್ಲ ಒತ್ತಡಕ್ಕೆ ಮಣಿಯುವರಲ್ಲ ಎಂಬುದನ್ನು ತಿಳಿದುಕೊಳ್ಳಲಿ. ನಾವು ಎಲ್ಲದಕ್ಕೂ ಸಿದ್ಧ. ಈ ಸಮಸ್ಯೆಗಳ ಬಗ್ಗೆ ನನಗೆ ತಿಳುವಳಿಕೆಯಿದೆ” ಎಂದು ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X