Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳು ಪಠ್ಯ ಜಾರಿಗೆ ಮಂಗಳೂರು ವಿವಿ...

ತುಳು ಪಠ್ಯ ಜಾರಿಗೆ ಮಂಗಳೂರು ವಿವಿ ತಾತ್ವಿಕ ಒಪ್ಪಿಗೆ: ಚಂದ್ರಹಾಸ ರೈ

ವಾರ್ತಾಭಾರತಿವಾರ್ತಾಭಾರತಿ31 May 2018 10:28 PM IST
share

ಉಡುಪಿ, ಮೇ 31: ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ತುಳು ಭಾಷಾ ಪಠ್ಯದ ಜಾರಿಗೆ ಮಂಗಳೂರು ವಿವಿ ತಾತ್ವಿಕ ಅನುಮೋದನೆ ನೀಡಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ತಿಳಿಸಿದ್ದಾರೆ.

ತುಳು ಭಾಷಾ ಪಠ್ಯ ಕಲಿಕೆ ಅವಕಾಶವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ನಿಟ್ಟಿನಲ್ಲಿ ಉಡುಪಿಯ ಬೋರ್ಡ್ ಹೈಸ್ಕೂಲು ಸಭಾಂಗಣದಲ್ಲಿ ಗುರುವಾರ ನಡೆದ ಶಾಲಾ ಮುಖ್ಯಸ್ಥರ ಸಭೆಯನ್ನುದೆ್ದೀಶಿಸಿ ಅವರು ಮಾತನಾಡುತಿದ್ದರು.

ನಿಯಮಾವಳಿ ಸಹಿತ ಪಠ್ಯ ಸಮಿತಿ ರಚನೆ ಪ್ರಕ್ರಿಯೆ ನಡೆಯುತ್ತಿದ್ದು 2018- 19ನೇ ಸಾಲಿನಲ್ಲೇ ಮಂಗಳೂರು ವಿವಿ ಕಾಲೇಜಿನಲ್ಲಿ ತುಳು ಪಠ್ಯ ಸಂಧ್ಯಾ ತರಗತಿ ಆರಂಭವಾಗಲಿದೆ. ತೃತೀಯ ಭಾಷೆಯಾಗಿ ತುಳು ಭಾಷಾ ಪಠ್ಯ ಕಲಿತವರು ಎಸೆಸೆಲ್ಸಿಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಗೊಳ್ಳುವ ಅವಕಾಶವಿದೆ ಎಂದವರು ನುಡಿದರು.

ಈ ಬಾರಿಯ (2018) ಎಸೆಸೆಲ್ಸಿ ಪರೀಕ್ಷೆ ಬರೆದ ಎಲ್ಲಾ 417 ವಿದ್ಯಾರ್ಥಿ ಗಳು ಉತ್ತೀರ್ಣರಾಗಿದ್ದು, 2017-18ನೇ ಸಾಲಿನಲ್ಲಿ 35 ಶಾಲೆಗಳಲ್ಲಿ 1,650 ವಿದ್ಯಾರ್ಥಿಗಳು ವಿವಿಧ ತರಗತಿಗಳಲ್ಲಿ ‘ತುಳು ಎಸಳ್’ ಪಠ್ಯ ಶಿಕ್ಷಣ ಪಡೆದಿದ್ದಾರೆ. ಆದರೆ ಉಡುಪಿ ಜಿಲ್ಲೆಯ ಎರಡು ಶಾಲೆಗಳಲ್ಲಿ ಮಾತ್ರ 50 ಮಂದಿ ವಿದ್ಯಾರ್ಥಿಗಳಿದ್ದಾರೆ ಎಂದರು.

ಈ ನಿಟ್ಟಿನಲ್ಲಿ ಮುಖ್ಯ ಶಿಕ್ಷಕರು, ಶಿಕ್ಷಕರ ಒತ್ತಾಯ ಹಾಗೂ ಒತ್ತಡಗಳಿಲ್ಲದೆ ಮಕ್ಕಳು ತೃತೀಯ ಭಾಷೆಯಾಗಿ ತುಳು ಭಾಷಾ ಪಠ್ಯ ಕಲಿಯುವ ನಿಟ್ಟಿನಲ್ಲಿ ಹೆತ್ತವರ ಒಪ್ಪಿಗೆ ನೀಡಿ ಪ್ರೋತ್ಸಾಹಿಸಬೇಕು ಎಂದ ಚಂದ್ರಹಾಸ ರೈ, ಈಗ ತುಳುವಿನ ಗೌರವ ಶಿಕ್ಷಕರಿಗೆ ಮಾಸಿಕ 3,000 ರೂ.ಗಳಂತೆ 10 ತಿಂಗಳ ವೇತನವನ್ನು ಅಕಾಡೆಮಿ ನೀಡುತ್ತಿದೆ ಎಂದು ವಿವರಿಸಿದು.

ತುಳು ಪಠ್ಯ ಕಲಿಕೆ ಅವಕಾಶವನ್ನು ಪಿಯುಸಿಗೂ ವಿಸ್ತರಿಸಲು ಮನವಿ ಮಾಡಲಾಗಿದೆ. ತುಳು ಪಠ್ಯದ ಮೂಲಕ ಭಾಷೆ, ಸಂಸ್ಕೃತಿಯ ಅರಿವು ಪಡೆಯಲು ಸಾಧ್ಯ. ಮಾತೃ ಭಾಷಾ ಕಲಿಕೆ ಹಿನ್ನೆಲೆಯಲ್ಲಿ ತುಳುನಾಡಲ್ಲಿ ತುಳು ಪಠ್ಯ ಕಲಿಕೆ ಹೆಚ್ಚು ಸೂಕ್ತ ಎಂದವರು ಅಭಿಪ್ರಾಯಪಟ್ಟರು.

ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಮಾತನಾಡಿ, ಹೊರ ಊರಲ್ಲಿರುವವರು ತುಳು ಭಾಷೆ ಉಳಿಸಿದ್ದಾರೆ. ಬಂಟ್ವಾಳದ 9 ಶಾಲೆಗಳಲ್ಲಿ ಮಕ್ಕಳಿಗೆ ತುಳು ಲಿಪಿ ಬರೆದು, ಓದುವ ಪ್ರಯೋಗ ಮಾಡಿದ್ದು ಈ ಪ್ರಕ್ರಿಯೆ ಎಲ್ಲಾ ಕಡೆ ನಡೆಯುವಂತಾಗಬೇಕು ಎಂದರು.

ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ವೈದ್ಯಕೀಯ, ಎಂಜಿನಿಯರಿಂಗ್ ಸಹಿತ ಉನ್ನತ ಶಿಕ್ಷಣದಲ್ಲಿರುವ ತುಳು ಮಾತೃ ಭಾಷೆಗೆ ನಿಗದಿಯಾಗಿರುವ ಸ್ಥಾನಗಳನ್ನು ಶಾಲೆಯಲ್ಲಿ ತುಳು ಕಲಿತವರಿಗಷ್ಟೇ ನೀಡಬೇಕು ಎಂದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್, ಬಿಇಒ ಕಚೇರಿಯ ಶಿಕ್ಷಣ ಸಂಯೋಜಕ ಶಂಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X