Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಮಗೆ ಧೂಮಪಾನದ ಚಟವಿದೆಯೇ?: ಹಾಗಾದರೆ...

ನಿಮಗೆ ಧೂಮಪಾನದ ಚಟವಿದೆಯೇ?: ಹಾಗಾದರೆ ಹಲ್ಲು ಕಳೆದುಕೊಳ್ಳಲು ತಯಾರಾಗಿ!

ವಾರ್ತಾಭಾರತಿವಾರ್ತಾಭಾರತಿ31 May 2018 10:36 PM IST
share
ನಿಮಗೆ ಧೂಮಪಾನದ ಚಟವಿದೆಯೇ?: ಹಾಗಾದರೆ ಹಲ್ಲು ಕಳೆದುಕೊಳ್ಳಲು ತಯಾರಾಗಿ!

ಹೊಸದಿಲ್ಲಿ, ಮೇ 31: ಧೂಮಪಾನವು ಹಲ್ಲಿನ ಒಸಡುಗಳ ಪರಿಣಾಮಕಾರಿ ಚಿಕಿತ್ಸೆಗೆ ತೊಡಕಾಗಿದೆ ಎಂದು ದಂತತಜ್ಞರು ಎಚ್ಚರಿಸಿದ್ದು, ಧೂಮಪಾನ ಮಾಡಿದವರಿಗೆ ಹೋಲಿಸಿದರೆ ಧೂಮಪಾನಿಗಳು ಹಲ್ಲಿನ ತೊಂದರೆಗೆ ಒಳಗಾಗುವ ಸಾಧ್ಯತೆ ಎರಡು ಪಟ್ಟು ಆಗಿದೆ ಎಂದು ತಿಳಿಸಿದ್ದಾರೆ.

ವಿಶ್ವ ತಂಬಾಕು ರಹಿತ ದಿನವಾದ ಗುರುವಾರ ವೈದ್ಯರು ತಂಬಾಕನ್ನು ಬೀಡಿ, ಸಿಗರೇಟು ಮುಂತಾದ ರೂಪದಲ್ಲಿ ಸೇವಿಸುವುದರಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಜನತೆಗೆ ಮಾಹಿತಿ ನೀಡಿದ್ದಾರೆ. ಧೂಮಪಾನಿಗಳು ಹಲ್ಲು ಕಳೆದುಕೊಳ್ಳುವ ಪ್ರಮಾಣ ಧೂಮಪಾನ ನಡೆಸದ ವ್ಯಕ್ತಿಗಳಿಗಿಂತ ಎರಡು ಪಟ್ಟು ಹೆಚ್ಚಾಗಿದೆ. ಧೂಮಪಾನಿಗಳು ಹಲ್ಲಿನ ‘ರೂಟ್ ಕ್ಯಾನಲ್’ ಚಿಕಿತ್ಸೆಗೆ ಒಳಪಡುವ ಸಾಧ್ಯತೆಯೂ ಅಧಿಕವಾಗಿದೆ. ಅಲ್ಲದೆ ಹಲ್ಲಿನ ಒಸಡಿಗೆ ಚಿಕಿತ್ಸೆ ಪಡೆಯುವಾಗ ಧೂಮಪಾನದ ಹವ್ಯಾಸವು ಚಿಕಿತ್ಸೆ ಹೆಚ್ಚಿನ ಪರಿಣಾಮ ಬೀರದಂತೆ ತಡೆಯಾಗುತ್ತದೆ ಎಂದು ‘ಜನರಲ್ ಅಕಾಡಮಿ ಆಫ್ ಓರಲ್ ಇಂಪ್ಲಾಂಟಾಲಜಿ’ (ಎಒಐ) ಯ ಪ್ರಧಾನ ಕಾರ್ಯದರ್ಶಿ ಅಜಯ್ ಶರ್ಮ ತಿಳಿಸಿದ್ದಾರೆ. ಎಒಐ ದಂತ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಸಂಶೋಧನೆ ಹಾಗೂ ಶಿಕ್ಷಣ ಕಾರ್ಯದಲ್ಲಿ ನಿರತರಾಗಿರುವ ದಂತ ವೈದ್ಯರ ಸಂಘಟನೆಯಾಗಿದೆ.

  

ಧೂಮಪಾನದಿಂದ ಬಾಯಿ ನೋವು, ದಂತ ಕ್ಷಯ, ಒಸಡು ರೋಗ ಬರುವ ಅಪಾಯ ಹೆಚ್ಚಿದೆ ಎಂದು ಶರ್ಮ ತಿಳಿಸಿದ್ದಾರೆ. ರೋಗದ ಸೋಂಕಿನ ವಿರುದ್ಧ ಹೋರಾಡುವ ಶಕ್ತಿಯನ್ನು ತಂಬಾಕು ಕುಂದಿಸುತ್ತದೆ. ಅಲ್ಲದೆ ರಕ್ತನಾಳಗಳ ಬೆಳವಣಿಗೆಗೂ ತಡೆಯುಂಟುಮಾಡುತ್ತದೆ. ಬಾಯಿಯ ಶಸ್ತ್ರಚಿಕಿತ್ಸೆಯ ಬಳಿಕ ಒಸಡಿನ ಅಂಗಾಂಶದ ಬೆಳವಣಿಗೆಗೂ ತಂಬಾಕು ಅಡ್ಡಿಯಾಗುತ್ತದೆ ಎಂದು ಶರ್ಮ ತಿಳಿಸಿದ್ದಾರೆ. ಅಲ್ಲದೆ ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್ ಕಾಯಿಲೆಗೆ ತಂಬಾಕು ಸೇವನೆಯೇ ಪ್ರಮುಖ ಕಾರಣವಾಗಿದೆ. ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್‌ನಿಂದ ಬಳಲುತ್ತಿರುವವರಲ್ಲಿ ಶೇ.85ರಷ್ಟು ಮಂದಿ ತಂಬಾಕು ಸೇವಿಸುವವರಾಗಿದ್ದಾರೆ ಎಂದು ಮ್ಯಾಕ್ಸ್ ಆಸ್ಪತ್ರೆಯ ತಜ್ಞ ವೈದ್ಯರು ತಿಳಿಸಿದ್ದಾರೆ.

ನಿರಂತರವಾಗಿ ತಂಬಾಕು ಸೇವಿಸುವವರಲ್ಲಿ ಬಾಯಿ ಕ್ಯಾನ್ಸರ್‌ನ ಅಪಾಯ ಹೆಚ್ಚು. ಧೂಮಪಾನದ ಜೊತೆ ಮದ್ಯಪಾನವೂ ಸೇರಿದರೆ ಅಪಾಯ ಮತ್ತಷ್ಟು ಹೆಚ್ಚಾಗುತ್ತದೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ಭಾರತದಲ್ಲಿ ಪ್ರತೀ ವರ್ಷ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್‌ನ 2,00,000 ಕ್ಕೂ ಹೆಚ್ಚು ಪ್ರಕರಣ ದಾಖಲಾಗುತ್ತದೆ. ಬಾಯಿಯ ಕ್ಯಾನ್ಸರ್‌ಗೆ ತುತ್ತಾದ ಸುಮಾರು 80,000 ರೋಗಿಗಳಿಗೆ ದೇಶದಲ್ಲಿ ಪ್ರತೀ ವರ್ಷ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X