Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಪಾಹ್ ವೈರಸ್ ಲಕ್ಷಣಗಳಿರುವ ಕನಿಷ್ಠ 753...

ನಿಪಾಹ್ ವೈರಸ್ ಲಕ್ಷಣಗಳಿರುವ ಕನಿಷ್ಠ 753 ಜನರ ಮೇಲೆ ನಿಗಾ: ಡಬ್ಲ್ಯುಎಚ್‌ಒ

ವಾರ್ತಾಭಾರತಿವಾರ್ತಾಭಾರತಿ1 Jun 2018 7:24 PM IST
share
ನಿಪಾಹ್ ವೈರಸ್ ಲಕ್ಷಣಗಳಿರುವ ಕನಿಷ್ಠ 753 ಜನರ ಮೇಲೆ ನಿಗಾ: ಡಬ್ಲ್ಯುಎಚ್‌ಒ

ಜಿನಿವಾ,ಜೂ.1: ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ ನಿಪಾಹ್ ವೈರಸ್‌ನಿಂದಾಗಿ ಮೇ 19ರಂದು ಮೊದಲ ಮೂರು ಸಾವುಗಳು ಸಂಭವಿಸಿದ ಬಳಿಕ ಈ ವೈರಸ್ ಸೋಂಕಿನ ಲಕ್ಷಣಗಳನ್ನು ದೃಢಪಡಿಸಿಕೊಳ್ಳಲು ಆರೋಗ್ಯ ಸಿಬ್ಬಂದಿಗಳು ಸೇರಿದಂತೆ ಕನಿಷ್ಠ 753 ಜನರನ್ನು ನಿರೀಕ್ಷಣೆಯಲ್ಲಿರಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಯು ತಿಳಿಸಿದೆ. ಕೇರಳದಲ್ಲಿ ಈ ವೈರಸ್‌ನಿಂದಾಗಿ ಈವರೆಗೆ 16 ಜನರು ಸಾವನ್ನಪ್ಪಿದ್ದಾರೆ.

ಮೇ 28ಕ್ಕೆ ಇದ್ದಂತೆ ಕೋಝಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ 15 ಜನರಲ್ಲಿ ನಿಪಾಹ್ ವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಡಬ್ಲ್ಯುಎಚ್‌ಒ ವರದಿಯು ತಿಳಿಸಿದೆ.

ಶಂಕಿತ ಸೋಂಕುಪೀಡಿತರ ಮಾದರಿಗಳನ್ನು ಮಣಿಪಾಲ ವೈರಾಣು ಸಂಶೋಧನಾ ಸಂಸ್ಥೆ ಮತ್ತು ಪುಣೆಯ ರಾಷ್ಟ್ರೀಯ ವೈರಾಣುಶಾಸ್ತ್ರ ಸಂಸ್ಥೆ(ಎನ್‌ಐವಿ)ಗೆ ಕಳುಹಿಸಲಾಗಿದ್ದು,ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ ಎಂದೂ ಅದು ಹೇಳಿದೆ.

ಇಲ್ಲಿ 71ನೇ ವಿಶ್ವ ಆರೋಗ್ಯ ಅಧಿವೇಶನದ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು,ಕೇರಳದಲ್ಲಿ ಪರಿಸ್ಥಿತಿಯು ನಿಯಂತ್ರಣದಲ್ಲಿದೆ ಮತ್ತು ಕೇಂದ್ರವು ರಾಜ್ಯದ ಆರೋಗ್ಯ ಸಚಿವಾಲಯಕ್ಕೆ ನಿರಂತರ ಬೆಂಬಲವನ್ನು ನೀಡುತ್ತಿದೆ. ಮೊದಲ ಸಾವು ವರದಿಯಾದ ಐದೇ ಗಂಟೆಗಳಲ್ಲಿ ನಾವು ಕ್ರಮಗಳನ್ನು ಆರಂಭಿಸಿದ್ದು,ಭಾರತೀಯ ವ್ಯೆದ್ಯಕೀಯ ಸಂಶೋಧನಾ ಮಂಡಳಿ,ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ,ಏಮ್ಸ್ ಮತ್ತು ರಾಮ ಮನೋಹರ ಲೋಹಿಯಾ ಆಸ್ಪತ್ರೆಯಿಂದ ವೈದ್ಯಕೀಯ ತಂಡಗಳನ್ನು ಅಲ್ಲಿಗೆ ರವಾನಿಸಿದ್ದೇವೆ. ಸೋಂಕುಪೀಡಿತ ಗ್ರಾಮದಲ್ಲಿಯ ಎಲ್ಲ 25 ಕುಟುಂಬಗಳನ್ನು ಪತ್ತೆ ಹಚ್ಚಿ,ಅವರನ್ನು ಪ್ರತ್ಯೇಕವಾಗಿಡಲಾಗಿದೆ ಎಂದು ತಿಳಿಸಿದರು.

ಈ ರೋಗವು ಸಾಂಕ್ರಾಮಿಕವಾಗಿದ್ದು,ಮುನ್ನೆಚ್ಚರಿಕೆ ಕ್ರಮಗಳ ಹೊರತಾಗಿಯೂ ವೈದ್ಯಕೀಯ ಸಿಬ್ಬಂದಿಗಳು ಸೋಂಕಿಗೊಳಗಾಗಬಹುದು ಎನ್ನುವುದನ್ನು ನಾವು ತಿಳಿದುಕೊಳ್ಳುವ ಅಗತ್ಯವಿದೆ. ಈ ಹಿಂದೆ 2001 ಮತ್ತು 2007ರಲ್ಲಿ ನಿಪಾಹ್ ಪ್ರಕರಣಗಳು ವರದಿಯಾಗಿದ್ದವು ಎಂದರು.

ನವೀಕರಣಗೊಳ್ಳುತ್ತಿರುವ ಮನೆಯ ಆವರಣದಲ್ಲಿರುವ ಪಾಳು ಬಿದ್ದಿರುವ ಬಾವಿಯಲ್ಲಿ ಬಾವಲಿಗಳನ್ನು ಕ್ಷೇತ್ರ ತನಿಖಾ ತಂಡವು ಪತ್ತೆ ಹಚ್ಚಿದ್ದು,ಒಂದು ಬಾವಲಿಯನ್ನು ಹಿಡಿದು ಪ್ರಯೋಗಾಲಯ ಪರೀಕ್ಷೆಗಾಗಿ ಪುಣೆಯ ಎನ್‌ಐವಿಗೆ ಕಳುಹಿಸಲಾಗಿದೆ ಎಂದರು.

ಈಗ ಕಾಣಿಸಿಕೊಂಡಿರುವ ಸೋಂಕಿನಲ್ಲಿ ತೀವ್ರ ಉಸಿರಾಟದ ತೊಂದರೆ ಮತ್ತು ಮಿದುಳು ಜ್ವರವನ್ನು ಗಮನಿಸಲಾಗಿದೆ. ಕೇರಳದಲ್ಲಿ ಇದೇ ಮೊದಲ ಬಾರಿಗೆ ಈ ಸೋಂಕು ಕಾಣಿಸಿಕೊಂಡಿದ್ದು,ದೇಶದಲ್ಲಿ ಮೂರನೇ ಬಾರಿಗೆ ಕಾಣಿಸಿಕೊಂಡಿದೆ ಎಂದು ಡಬ್ಲ್ಯುಎಚ್‌ಒ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X