Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್‌ಎಲ್‌ಡಿಗೆ ಏಕೈಕ ಸಂಸದ ಸ್ಥಾನ ಗಳಿಸಿ...

ಆರ್‌ಎಲ್‌ಡಿಗೆ ಏಕೈಕ ಸಂಸದ ಸ್ಥಾನ ಗಳಿಸಿ ಕೊಟ್ಟ ಕೈರಾನಾ ಗೆಲುವು

ವಾರ್ತಾಭಾರತಿವಾರ್ತಾಭಾರತಿ1 Jun 2018 10:30 PM IST
share
ಆರ್‌ಎಲ್‌ಡಿಗೆ ಏಕೈಕ ಸಂಸದ ಸ್ಥಾನ ಗಳಿಸಿ ಕೊಟ್ಟ ಕೈರಾನಾ ಗೆಲುವು

ಲಕ್ನೋ.ಜೂ.1: ಉತ್ತರ ಪ್ರದೇಶದ ಕೈರಾನಾ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು 2019ರ ಸಾರ್ವತ್ರಿಕ ಚುನಾವಣೆಗಳ ಮುನ್ನ ಪ್ರತಿಪಕ್ಷಗಳ ಪಾಲಿಗೆ ಮಹತ್ವದ್ದಾಗಿದ್ದರೆ,ಅದು ಮೈತ್ರಿಕೂಟದ ಭಾಗವಾಗಿರುವ ಅಜಿತ ಸಿಂಗ್‌ರ ರಾಷ್ಟ್ರೀಯ ಲೋಕ ದಳ(ಆರ್‌ಎಲ್‌ಡಿ)ಕ್ಕೆ ಸುದೀರ್ಘ ವಿರಾಮದ ಬಳಿಕ ಸಂಸತ್ತಿನಲ್ಲಿ ಪ್ರವೇಶವನ್ನು ದೊರಕಿಸಿದೆ.

ಆರ್‌ಎಲ್‌ಡಿ ಅಭ್ಯರ್ಥಿ ತಬಸ್ಸುಮ್ ಹಸನ್ ಅವರು ಪ್ರತಿಪಕ್ಷಗಳ ಬೆಂಬಲದೊಂದಿಗೆ ಬಿಜೆಪಿಯ ಮೃಗಾಂಕಾ ಸಿಂಗ್ ಅವರನ್ನು ಭಾರೀ ಮತಗಳ ಅಂತರದಿಂದ ಪರಾಭವಗೊಳಿಸಿ ಪ್ರತಿಪಕ್ಷಗಳ ಮುಖಗಳಲ್ಲಿ ನಗುವನ್ನು ಅರಳಿಸಿದ್ದಾರೆ.

ಇದಕ್ಕೂ ಮುನ್ನ ಸಂಸತ್ತಿನಲ್ಲಿ ಆರ್‌ಎಲ್‌ಡಿ ಪ್ರಾತಿನಿಧ್ಯವನ್ನು ಹೊಂದಿರಲಿಲ್ಲ. ಉತ್ತರ ಪ್ರದೇಶದಲ್ಲಿಯ ಅದರ ಏಕೈಕ ಶಾಸಕ ಸಹೇಂದರ್ ಸಿಂಗ್ ಅವರು ಬಿಜೆಪಿಗೆ ಹಾರಿದ್ದರು. ಕೈರಾನಾ ಉಪ ಚುನಾವಣೆಯಲ್ಲಿನ ಗೆಲುವು ಆರ್‌ಎಲ್‌ಡಿಗೆ ಪುನರುಜ್ಜೀವನ ನೀಡಿರುವಂತಿದೆ. ತನಗೆ ಜಾಟ್ ಸಮುದಾಯದ ಬೆಂಬಲವಿದೆ ಎಂದು ಅದು ಹೇಳಿಕೊಳ್ಳುತ್ತಿದೆಯಾದರೂ ಇತ್ತೀಚಿನ ಚುನಾವಣೆಗಳಲ್ಲಿ ತನ್ನ ಖಾತೆ ತೆರೆಯಲು ವಿಫಲಗೊಂಡಿತ್ತು.

2014ರ ಲೋಕಸಭಾ ಚುನಾವಣೆಗಳಲ್ಲಿ ಆರ್‌ಎಲ್‌ಡಿಯ ಸಾಧನೆ ಎಷ್ಟು ಕಳಪೆಯಾಗಿತ್ತೆಂದರೆ ಉತ್ತರ ಪ್ರದೇಶದಲ್ಲಿ ಅದರ ಎಂಟು ಅಭ್ಯರ್ಥಿಗಳ ಪೈಕಿ ಆರು ಜನರು ಠೇವಣಿಗಳನ್ನು ಕಳೆದುಕೊಂಡಿದ್ದರು. ಅದು ರಾಜ್ಯದಲ್ಲಿ ಚಲಾವಣೆಯಾಗಿದ್ದ ಒಟ್ಟು ಮತಗಳ ಪೈಕಿ ಕೇವಲ ಶೇ.0.86ರಷ್ಟನ್ನು ಗಳಿಸಿತ್ತು.

2017ರ ಉ.ಪ್ರ.ವಿಧಾನಸಭಾ ಚುನಾವಣೆಯಲ್ಲಿಯೂ ಪಕ್ಷದ ಸಾಧನೆ ದಯನೀಯವಾಗಿತ್ತು. ಅದು 277 ಸ್ಥಾನಗಳಿಗೆ ಸ್ಪರ್ಧಿಸಿತ್ತಾದರೂ 266 ಅಭ್ಯರ್ಥಿಗಳು ತಮ್ಮ ಠೇವಣಿಗಳನ್ನು ಕಳೆದುಕೊಂಡಿದ್ದರು. ಒಬ್ಬರೇ ಅಭರ್ಥಿ ಗೆದ್ದಿದ್ದರಾದರೂ ಅವರೂ ಕಳೆದ ಎಪ್ರಿಲ್‌ನಲ್ಲಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X