Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಎಇಗೆ ಪ್ರಯಾಣಿಸುವ ಅಪ್ರಾಪ್ತ...

ಯುಎಇಗೆ ಪ್ರಯಾಣಿಸುವ ಅಪ್ರಾಪ್ತ ವಯಸ್ಕರಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ2 Jun 2018 9:20 PM IST
share
ಯುಎಇಗೆ ಪ್ರಯಾಣಿಸುವ ಅಪ್ರಾಪ್ತ ವಯಸ್ಕರಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ

ಮುಂಬೈ, ಜೂ.2: ಇನ್ನುಮುಂದೆ ಅಪ್ರಾಪ್ತ ವಯಸ್ಕರು, ಭಾರತದಿಂದ ಯುಎಇಗೆ ಪ್ರಯಾಣಿಸುವ ತಮ್ಮ ಪಾಲಕರು ಅಥವಾ ಪೋಷಕರಿಂದ ಅಧಿಕೃತ ಅನುಮತಿ ಪತ್ರವನ್ನು ಹೊಂದಿರಬೇಕಾಗುತ್ತದೆ. ಕೇವಲ ವಿಮಾನಯಾನದ ವೇಳೆ ಮಾತ್ರವಲ್ಲ ಪಾಲಕರು, ಪೋಷಕರುನ್ನು ಹೊರತುಪಡಿಸಿ, ಬೇರೊಬ್ಬ ಕುಟುಂಬ ಸದಸ್ಯನ ಜೊತೆ ಪ್ರಯಾಣಿಸುವಾಗಲೂ ಅವರು ಈ ಪ್ರಮಾಣಪತ್ರವನ್ನು ಹೊಂದಿರಬೇಕಾಗುತ್ತದೆಯೆಂದು ಏರ್‌ಇಂಡಿಯಾದ ಪ್ರಕಟಣೆ ತಿಳಿಸಿದೆ.

ಯುಎಇನಲ್ಲಿ ಮಕ್ಕಳ ಕಳ್ಳಸಾಗಣೆಯನ್ನು ತಡೆಗಟ್ಟುವ ಉದ್ದೇಶದಿಂದ ದುಬೈ ವಲಸೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯು, ಸೂಚನಾ ಪತ್ರವೊಂದನ್ನು ಜಾರಿಗೊಳಿಸಿದ ಕೆಲವೇ ದಿನಗಳ ಬಳಿಕ ಈ ನೂತನ ನಿಯಮ ಜಾರಿಗೆ ಬಂದಿದೆ.

ಸೂಕ್ತವಾದ ಪರವಾನಗಿ ಪತ್ರವನ್ನು ಹೊಂದಿರದೆ ಯುಎಇಗೆ ಪ್ರಯಾಣಿಸುವ ಯಾವುದೇ ಅಪ್ರಾಪ್ತ ವಯಸ್ಕರನ್ನು ತಕ್ಷಣವೇ ವಾಪಸ್ ಕಳುಹಿಸಲಾಗುವುದೆಂದು ಸೂಚನಾಪತ್ರದಲ್ಲಿ ತಿಳಿಸಲಾಗಿತ್ತು.

 ಯುಎಇಗೆ ಮಕ್ಕಳು ಹಾಗೂ ಅಪ್ರಾಪ್ತ ವಯಸ್ಕರ ಪ್ರಯಾಣಕ್ಕೆ ಸಂಬಂಧಿಸಿದ ನೂತನ ವಿಧಿವಿಧಾನಗಳ ಕುರಿತು ದುಬೈನ ವಾಸ್ತವ್ಯ ಹಾಗೂ ವಿದೇಶಾಂಗ ವ್ಯವಹಾರಗಳ ಮಹಾನಿರ್ದೇಶನಾಲಯವು ಜೂನ್ 1ರಿಂದ ಅನ್ವಯವಾಗುವಂತೆ ಅಧಿಸೂಚನೆಯೊಂದನ್ನು ಹೊರಡಿಸಿತ್ತು.

ಈ ಹೊಸ ನಿರ್ಬಂಧಗಳನ್ನು ವಿಧಿಸಿರುವುದಕ್ಕೆ ದುಬೈನ ಅಧಿಕಾರಿಗಳು ಯಾವುದೇ ಕಾರಣಗಳನ್ನು ನೀಡಿಲ್ಲವಾದರೂ, ಈ ಹಿಂದೆಯೂ ಅಮೆರಿಕ ವಿದೇಶಾಂಗ ಇಲಾಖೆಯು, ಗಲ್ಫ್ ರಾಜ್ಯಗಳಲ್ಲಿ ಒಂಟೆ ಓಟದ ಉದ್ಯಮದಲ್ಲಿ ಅಪ್ರಾಪ್ತ ವಯಸ್ಕರನ್ನು ಜಾಕಿಗಳಾಗಿ ಬಳಸಲಾಗುತ್ತಿದೆಯೆಂದು ತಿಳಿಸಿತ್ತು.

ಈ ಮಕ್ಕಳು ಹೆಚ್ಚು ದೇಹತೂಕವನ್ನು ಪಡೆಯುವುದನ್ನು ತಪ್ಪಿಸಲು ಅವರನ್ನು ಅರೆಹೊಟ್ಟೆಯಲ್ಲಿರಿಸಲಾಗುತ್ತಿತ್ತು. ಇದರಿಂದಾಗಿ ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕುಂಠಿತಗೊಂಡ ಅನೇಕ ಪ್ರಕರಣಗಳನ್ನು ಕೂಡಾ ಅದು ವರದಿ ಮಾಡಿತ್ತು.

  ಆ ಬಳಿಕ ಏರ್ ಇಂಡಿಯಾವು ಇಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಯಾಣ ಅವಶ್ಯಕತೆಗಳಿಗೆ ಸಂಬಂಧಿಸಿ ಅಪ್‌ಲೋಡ್ ಮಾಡಿದ ವಿವರಗಳಲ್ಲಿ ಯುಎಇಗೆ ಪ್ರಯಾಣಿಸುವ 18 ವರ್ಷಕ್ಕಿಂತ ಕೆಳಗಿನ ಅಪ್ರಾಪ್ತ ವಯಸ್ಕರು ಕಡ್ಡಾಯವಾಗಿ ತಮ್ಮ ಪಾಲಕರು ಅಥವಾ ಪೋಷಕರಿಂದ ಕಡ್ಡಾಯವಾಗಿ ಅನುಮತಿ ಪತ್ರವನ್ನು ತಮ್ಮಾಂದಿಗೆ ಒಯ್ಯಬೇಕೆಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X