Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಂಗಾಪುರ: ಶಾಂಗ್ರಿ-ಲಾ ಮಾತುಕತೆಯ...

ಸಿಂಗಾಪುರ: ಶಾಂಗ್ರಿ-ಲಾ ಮಾತುಕತೆಯ ನೇಪಥ್ಯದಲ್ಲಿ ಮೋದಿ-ಮ್ಯಾಟಿಸ್ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ2 Jun 2018 10:54 PM IST
share
ಸಿಂಗಾಪುರ: ಶಾಂಗ್ರಿ-ಲಾ ಮಾತುಕತೆಯ ನೇಪಥ್ಯದಲ್ಲಿ ಮೋದಿ-ಮ್ಯಾಟಿಸ್ ಮಾತುಕತೆ

ಸಿಂಗಾಪುರ, ಜೂ. 2: ಪ್ರಧಾನಿ ನರೇಂದ್ರ ಮೋದಿ ಇಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್‌ರನ್ನು ಸಿಂಗಾಪುರದಲ್ಲಿ ಭೇಟಿಯಾಗಿ ಭದ್ರತಾ ಸಂಬಂಧಿ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

ತನ್ನ ಸೇನೆಗೆ ಭಾರತ ಎಷ್ಟು ಮಹತ್ವ ಎನ್ನುವುದನ್ನು ಸೂಚಿಸುವ ಸಾಂಕೇತಿಕ ಕ್ರಮವೊಂದರಲ್ಲಿ ಅಮೆರಿಕ ತನ್ನ ಸೇನಾ ಘಟಕ ‘ಪೆಸಿಫಿಕ್ ಕಮಾಂಡ್’ಗೆ ‘ಇಂಡೋ-ಪೆಸಿಫಿಕ್ ಕಮಾಂಡ್’ ಎಂಬುದಾಗಿ ಮರುನಾಮಕರಣ ಮಾಡಿದ ದಿನಗಳ ಬಳಿಕ ಈ ಮಹತ್ವದ ಭೇಟಿ ಸಂಭವಿಸಿದೆ.

 ಆಗ್ನೇಯ ಏಶ್ಯದ ಮೂರು ದೇಶಗಳ ಭೇಟಿಯ ಕೊನೆಯ ಹಂತದಲ್ಲಿ ಸಿಂಗಾಪುರದಲ್ಲಿರುವ ಪ್ರಧಾನಿ ಮೋದಿ, ಮ್ಯಾಟಿಸ್ ಜೊತೆ ರಹಸ್ಯ ಮಾತುಕತೆಗಳನ್ನು ನಡೆಸಿದರು. ಈ ಮಾತುಕತೆಯ ವೇಳೆ, ಉಭಯ ತಂಡಗಳು ಪರಸ್ಪರ ಹಾಗೂ ಜಾಗತಿಕ ಮಹತ್ವದ ಎಲ್ಲಾ ಭದ್ರತಾ ಸಂಬಂಧಿ ವಿಷಯಗಳ ಬಗ್ಗೆ ಚರ್ಚಿಸಿದವು ಎಂದು ಮೂಲಗಳು ಹೇಳಿವೆ.

ಸುಮಾರು ಒಂದು ಗಂಟೆ ನಡೆದ ಮಾತುಕತೆಯ ವೇಳೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಉಪಸ್ಥಿತರಿದ್ದರು.

ವಾರ್ಷಿಕ ಶಾಂಗ್ರಿ-ಲಾ ಮಾತುಕತೆಯ ನೇಪಥ್ಯದಲ್ಲಿ ಈ ಸಭೆ ನಡೆಯಿತು.

‘‘ಮಾತುಕತೆಯ ಕೇಂದ್ರ ಬಿಂದು, ಪ್ರಧಾನಿ ಮೋದಿ ಶುಕ್ರವಾರ ರಾತ್ರಿ ಶಾಂಗ್ರಿ-ಲಾ ವೇದಿಕೆಯಲ್ಲಿ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದಂತೆ, ಈ ವಲಯವಾಗಿತ್ತು’’ ಎಂದು ವಿದೇಶ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

‘ವೈರತ್ವದಿಂದ ಕೂಡಿದ ಏಶ್ಯ’ ಈ ವಲಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತದೆ ಹಾಗೂ ‘ಸಹಕಾರದ ಏಶ್ಯ’ ಹಾಲಿ ಶತಮಾನವನ್ನು ರೂಪಿಸುತ್ತದೆ ಎಂಬುದಾಗಿ ಮೋದಿ ತನ್ನ ಭಾಷಣದಲ್ಲಿ ಹೇಳಿರುವುದನ್ನು ಸ್ಮರಿಸಬಹುದಾಗಿದೆ.

ಗಾಂಧೀಜಿ ಸ್ಮರಣಾ ಫಲಕ ಅನಾವರಣ

ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಂಗಾಪುರದ ಎಮರಿಟಸ್ ಹಿರಿಯ ಸಚಿವ ಗೊಹ್ ಚೊಕ್ ಟಾಂಗ್ ಶನಿವಾರ ಜಂಟಿಯಾಗಿ ಮಹಾತ್ಮಾ ಗಾಂಧೀಜಿಯವರ ಸ್ಮರಣಾ ಫಲಕವನ್ನು ಅನಾವರಣಗೊಳಿಸಿದರು.

ಸಿಂಗಾಪುರದ ಕ್ಲಿಫರ್ಡ್ ಪಯರ್‌ನಲ್ಲಿರುವ ಮಹಾತ್ಮಾ ಗಾಂಧೀಜಿಯವರ ಚಿತಾಭಸ್ಮವನ್ನು ವಿಸರ್ಜನೆಗೊಳಿಸಿದ ಸ್ಥಳದಲ್ಲಿ ಫಲಕವನ್ನು ಅನಾವರಣಗೊಳಿಸಲಾಗಿದೆ.

 ಕ್ಲಿಫರ್ಡ್ ಪಯರ್‌ನಲ್ಲಿರುವ ಸಮುದ್ರದಲ್ಲಿ 1948ರಲ್ಲಿ ಗಾಂಧೀಜಿಯ ಚಿತಾಭಸ್ಮವನ್ನು ವಿಸರ್ಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಹಾತ್ಮಾ ಗಾಂಧೀಜಿಯವರ ನೆಚ್ಚಿನ ‘ವೈಷ್ಣವ್ ಜನ್ ತೋ ತೇನೆ ಕಹಿಯೇ’ ಭಜನೆ ಹಿನ್ನೆಲೆಯಲ್ಲಿ ಕೇಳುತ್ತಿತ್ತು.

1948ರಲ್ಲಿ ಗಾಂಧೀಜಿ ಹತ್ಯೆಯ ಬಳಿಕ, ಅವರ ಚಿತಾಭಸ್ಮವನ್ನು ವಿಸರ್ಜನೆಗಾಗಿ ಸಿಂಗಾಪುರ ಸೇರಿದಂತೆ ಜಗತ್ತಿನ ವಿವಿಧ ಭಾಗಗಳಿಗೆ ಕಳುಹಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X