Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಂಗಭೂಮಿ ಕುರಿತ ಕೃತಿಗಳು ಹೆಚ್ಚಾಗಲಿ:...

ರಂಗಭೂಮಿ ಕುರಿತ ಕೃತಿಗಳು ಹೆಚ್ಚಾಗಲಿ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ3 Jun 2018 5:28 PM IST
share
ರಂಗಭೂಮಿ ಕುರಿತ ಕೃತಿಗಳು ಹೆಚ್ಚಾಗಲಿ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು: ಜೂ, 3: ಸಾಹಿತ್ಯ ವಲಯದಲ್ಲಿ ರಂಗಭೂಮಿಗೆ ಸಂಬಂಧಿಸಿದ ಕೃತಿಗಳು ವಿರಳವಾಗಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕಾದ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಿಸಿದರು.

ರವಿವಾರ ಸಿರಿವರ ಕಲ್ಚರಲ್ ಅಕಾಡೆಮಿ ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಆಯೋಜಿಸಿದ್ದ ಲೇಖಕ ಡಾ.ರಾಜಶೇಖರ ಮಠಪತಿ ‘ರಕ್ತ ಮತ್ತು ರಾಜಕಾರಣ’, ಕೆ.ಎ.ರಾಮಕೃಷ್ಣ ಮೂರ್ತಿರವರ ‘ಬಂಧು ಮಿತ್ರರು’ ಹಾಗೂ ಕವಿ ಎಸ್. ಮಂಜುನಾಥ್‌ರವರ ‘ಏಳು ತಂತಿ ಏಕನಾದ’ ಕೃತಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಅಂಕಣ ಬರಹಕ್ಕೆ ಸಂಬಂಧಿಸಿದ ಕೃತಿಗಳು ಹೆಚ್ಚಾಗಿ ಬಿಡುಗಡೆಯಾಗುತ್ತಿವೆ. ಇದೇ ಮಾದರಿಯಲ್ಲಿ ರಂಗಭೂಮಿಗೆ ಪೂರಕವಾದ ಕೃತಿಗಳು ಪ್ರಕಟಗೊಳ್ಳಲಿ. ಆ ಮೂಲಕ ಕಲಾವಿದರಿಗೆ, ಕಲಾ ವಿದ್ಯಾರ್ಥಿಗಳಿಗೆ ರಂಗಭೂಮಿ ಕುರಿತು ಮತ್ತಷ್ಟು ಆಸಕ್ತಿ ಹೆಚ್ಚಾಗಿ ಸಕ್ರೀಯವಾಗಿ ತೊಡಗಿಸಿಕೊಳ್ಳುವಂತೆ ಮಾಡಬೇಕಿದೆ ಎಂದು ಅವರು ಆಶಿಸಿದರು.

ಕನ್ನಡ ರಂಗಭೂಮಿಗೆ ಹಾಗೂ ಸಮಾಜಕ್ಕೆ ಬೀದಿ ನಾಟಕಗಳು ಕೊಡುಗೆ ಅಪಾರವಾಗಿದೆ. ಭಾರತೀಯ ಸಮಾಜವು ಒಂದೊಂದು ಜಾತಿಗೆ ಒಂದೊಂದು ಬೀದಿಗಳಾಗಿ ಒಡೆದು ಹೋಗಿರುವ ಸಂದರ್ಭದಲ್ಲಿ ಈ ಬೀದಿಗಳನ್ನು ಒಂದು ಗೂಡಿಸುವ ಕಾಯಕವನ್ನು ಬೀದಿ ನಾಟಕಗಳು ಮಾಡುತ್ತಿವೆ. ಇದರ ಸಂಪೂರ್ಣ ಯಶಸ್ಸು ಸಮುದಾಯ ರಂಗ ತಂಡಕ್ಕೆ ಸೇರಬೇಕು ಎಂದು ಅವರು ಅಭಿನಂದಿಸಿದರು.

ಹಿಂದಿನ ದಿನಗಳಲ್ಲಿ ಜನತೆಗೆ ಪ್ರಜಾಪ್ರಭುತ್ವದ ಬಗ್ಗೆ ಅಪಾರ ನಂಬಿಕೆಯಿತ್ತು. ಆದರೆ, ಇವಿಎಂ ಯಂತ್ರಗಳು ಆ ನಂಬಿಕೆಗಳನ್ನು ಹುಸಿ ಗೊಳಿಸುತ್ತಿವೆ. ಮಾನವ ನಿರ್ಮಿತವಾದ ಯಂತ್ರಗಳನ್ನು ಸಂಪೂರ್ಣವಾಗಿ ಅವಲಂಭಿಸುವುದು ಸರಿಯಲ್ಲ. ಇದರಿಂದ ಅನುಕೂಲಕ್ಕಿಂತ ಅನಾನುಕುಲಗಳೇ ಹೆಚ್ಚಾಗುತ್ತಿರುವ ಬೆಳವಣಿಗೆ ಕಾಣುತ್ತಿದ್ದೇವೆ ಎಂದು ಅವರು ಆಂತಕ ವ್ಯಕ್ತಪಡಿಸಿದರು.

2000 ಇಸವಿಯ ನಂತರದಲ್ಲಿ ಹುಟ್ಟಿದ ಯುವಜನತೆಯ ಮಸ್ಥಿತಿಯನ್ನು ಗಮನಿಸಿದರೆ ಬಹಳ ಆತಂಕ ಉಂಟಾಗುತ್ತದೆ. ಅವರಿಗೆ ದೇಶದ ಚರಿತ್ರೆ, ಬದುಕು, ಬಡತನ, ಜಾತಿಯ ಅವಮಾನದ ಅನುಭವ ಇಲ್ಲವಾಗಿದೆ. ಹಸಿ ಸುಳ್ಳುಗಳನ್ನೇ ನಿಜವೆಂದು ನಂಬುವ ಸ್ಥಿತಿಯಲ್ಲಿದ್ದಾರೆ. ಈ ಸಮುದಾಯದಲ್ಲೂ ಶೇ.5ರಷ್ಟು ಮಂದಿ ವಾಸ್ತವ ಪರಿಸ್ಥಿತಿಯನ್ನು ಅರಿಯುವ ಮನಸ್ಥಿತಿಯನ್ನು ಇಟ್ಟುಕೊಂಡಿರುವುದು ಒಳ್ಳೆಯ ಬೆಳವಣಿಗೆಯೆಂದು ಅವರು ಅಭಿಪ್ರಾಯಿಸಿದರು.

ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮಾಯಣ್ಣ ಮಾತನಾಡಿ, ಕೋಟ್ಯಂತರ ಜನಸಂಖ್ಯೆಯನ್ನು ಹೊಂದಿರುವ ಬೆಂಗಳೂರಿನಲ್ಲಿ ಎಣಿಸಲಾರದಷ್ಟು ಪ್ರತಿಭಾವಂತರಿದ್ದಾರೆ. ಅವರೆಲ್ಲರನ್ನು ಗೌರವಿಸುವುದು ಸಾಹಿತ್ಯ ಪರಿಷತ್‌ನ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ನನ್ನ ಕಾಲಾವಧಿಯಲ್ಲಿ ಸಾಧ್ಯವಿರುವಷ್ಟು ಪ್ರತಿಭಾವಂತರಿಗೆ ಸನ್ಮಾನಿಸುವ ಕೆಲಸದಲ್ಲಿ ತೊಡಗಿದ್ದೇನೆಂದು ತಿಳಿಸಿದರು.

ವಿಜಯನಗರ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಲಿಂಗಮಾರಯ್ಯ, ರಂಗ ನೇಪಥ್ಯದ ಸಂಪಾದಕ ಗುಡಿಹಳ್ಳಿ ನಾಗರಾಜು, ಹಿರಿಯ ರಂಗಕರ್ಮಿ ಶಶಿಧರ್ ಭಾರೀಘಾಟ್ ಅವರು ಕೃತಿ ಕುರಿತು ಮಾತನಾಡಿದರು. ಪರಿಷತ್ತಿನ ಬಿ.ಶೃಂಗೇಶ್ವರ್, ಪಿ.ಅಂಜನ್‌ಕುಮಾರ್, ಎಂ.ನರಸಿಂಹ, ಕೆ.ಕೃಷ್ಣಮೂರ್ತಿ ಪೂಜಾರಿ ಪಾಳ್ಯ ಮತ್ತಿತರರು ಉಪಸ್ಥಿರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X