Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾವೇರಿ ವಿವಾದಕ್ಕೆ ರಾಜಕೀಯ ಬಣ್ಣ: ಲೇಖಕ...

ಕಾವೇರಿ ವಿವಾದಕ್ಕೆ ರಾಜಕೀಯ ಬಣ್ಣ: ಲೇಖಕ ಬಿ.ಆರ್.ಲಕ್ಷ್ಮಣ್‌ರಾವ್

ವಾರ್ತಾಭಾರತಿವಾರ್ತಾಭಾರತಿ3 Jun 2018 5:35 PM IST
share
ಕಾವೇರಿ ವಿವಾದಕ್ಕೆ ರಾಜಕೀಯ ಬಣ್ಣ: ಲೇಖಕ ಬಿ.ಆರ್.ಲಕ್ಷ್ಮಣ್‌ರಾವ್

ಬೆಂಗಳೂರು, ಜೂ. 3: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ರಾಜಕೀಯ ಬಣ್ಣ ಅಂಟಿಕೊಂಡಿರುವ ಹಿನ್ನೆಲೆಯಲ್ಲಿ ಅದು ದೊಡ್ಡ ಸಮಸ್ಯೆಯಾಗಿ ಪರಿಗಣಿಸಲ್ಪಡುತ್ತಿದೆ ಎಂದು ಲೇಖಕ ಬಿ.ಆರ್.ಲಕ್ಷ್ಮಣ್ ರಾವ್ ಅಭಿಪ್ರಾಯಿಸಿದ್ದಾರೆ.

ರವಿವಾರ ನಗರದ ವಾಡಿಯಾ ಸಭಾಂಗಣದಲ್ಲಿ ಅಂಕಿತ ಪುಸ್ತಕ ಪ್ರಕಾಶನದಿಂದ ಆಯೋಜಿಸಿದ್ದ ರಾಘವೇಂದ್ರ ಹೆಗಡೆ ಅನುವಾದಿಸಿರುವ ‘ನಾಳೆಗೂ ಇರಲಿ ನೀರು’, ಎಚ್.ದುಂಡಿರಾಜ್ ಅವರ ‘ಹನಿ ಮಾರ್ದನಿ’, ಡಾ.ವಿ.ಪಿ.ನಾರಾಯಣ ಸಂಪಾದಿಸಿರುವ ‘ಬಸವಣ್ಣನ ವಚನಗಳು’, ‘ಅಕ್ಕನ ವಚನಗಳು’, ‘ಅಲ್ಲಮನ ವಚನಗಳು’, ಪುಸ್ತಕಗಳನ್ನು ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾವೇರಿ ನದಿ ನೀರಿನ ವಿವಾದವನ್ನು ಒಂದು ನೆಲೆ ಗಟ್ಟಿನಲ್ಲಿ ಬಗೆಹರಿಸಬಹುದಾಗಿತ್ತು. ಆದರೆ, ಇದು ರಾಜಕೀಯ ಸಮಸ್ಯೆಯಾಗಿ ಉಳಿದು ಕೊಂಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ವಿವಾದ ಕಗ್ಗಂಟಾಗಿ ಉಳಿದುಕೊಂಡಿದೆ. ಆದರೆ, ನೀರಿನ ನಿರ್ವಹಣೆ ವಿಚಾರದಲ್ಲಿ ಇಸ್ರೇಲ್ ಇಡೀ ವಿಶ್ವಕ್ಕೆ ಮಾದರಿ ಎಂದು ಬಣ್ಣಿಸಿದರು.

ಇಸ್ರೇಲ್ ಒಂದು ಕಡೆ ಮರುಭೂಮಿಯ ಪ್ರದೇಶವಾಗಿದ್ದರೂ, ನೀರು ನಿರ್ವಹಣೆ ವಿಚಾರದಲ್ಲಿ ಜಾಣ್ಮೆ ತೋರಿದೆ. ರಾಜಕೀಯದಿಂದ ನೀರು ನಿರ್ವಹಣೆ ಮುಕ್ತವಾಗಿರುವುದೇ ಆ ದೇಶ ಇಷ್ಟೊಂದು ಹೆಸರು ಮಾಡಲು ಸಾಧ್ಯವಾಯಿತು. ಈ ವಿಚಾರನ್ನು ಮನ ಮುಟ್ಟುವ ಹಾಗೇ ಲೇಖಕರು ‘ನಾಳೆಗೂ ಇರಲಿ ನೀರು’, ಕೃತಿಯಲ್ಲಿ ಹೇಳಿದ್ದಾರೆ. ಇದೀಗ ಇಸ್ರೇಲ್ ಮಾದರಿಯ ಕೃಷಿಗೆ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಅವರು ಮುಂದಾಗಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಕನ್ನಡ ಸಾರಸ್ವತ ಲೋಕದಲ್ಲಿ ಹನಿಗವನಕ್ಕೆ ಒಂದು ದೊಡ್ಡ ಪರಂಪರೆ ಇದೆ. ಕವಿ ಕೆ.ಎಸ್.ನಿಸಾರ್ ಅಹಮದ್ ಅವರಿಂದ ಪ್ರೇರಿತರಾಗಿ ಕವಿತೆಗಳನ್ನು ಬರೆಯಲು ಆರಂಭಿಸಿದ ದುಂಡಿರಾಜ್, ಹನಿಗವನ ಕ್ಷೇತ್ರದ ‘ಅಕ್ಷಯ ಪಾತ್ರೆ’ ಎಂದು ವರ್ಣಿಸಿದರು. ಇದೇ ವೇಳೆ, ಲೇಖಕ ಡಾ. ಪಿ.ವಿ. ನಾರಾಯಣ ಅವರ ಬರಹಗಳನ್ನು ಕೊಂಡಾಡಿದರು.

ಹಾಸ್ಯ ಲೇಖಕ ನರಸಿಂಹ ಮೂರ್ತಿ ಮಾತನಾಡಿ, ಅನುವಾದ ಕಷ್ಟಕರವಾದ ವಿಷಯ. ಆದರೂ, ಇಷ್ಟಪಟ್ಟು ಲೇಖಕರು ಕನ್ನಡಕ್ಕೆ ಒಂದು ಉತ್ತಮ ಅನುವಾದ ಪುಸ್ತಕವನ್ನು ನೀಡಿದ್ದಾರೆ ಎಂದು ರಾಘವೇಂದ್ರ ಹೆಗಡೆ ಅವರ ಕಾರ್ಯವನ್ನು ಪ್ರಶಂಸಿಸಿದರು.ಅಲ್ಲದೆ ಹನಿಗವನ ಕ್ಷೇತ್ರಕ್ಕೆ ದುಂಡಿರಾಜ್ ಸ್ಫೂರ್ತಿಯ ಸೆಲೆ ಎಂದು ಗುಣಗಾನ ಮಾಡಿದರು. ಕಾರ್ಯಕ್ರಮದಲ್ಲಿ ಲೇಖಕರಾದ ರಾಘವೇಂದ್ರ ಹೆಗಡೆ, ಡಾ.ವಿ.ಪಿ.ನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X