Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಕ್ತ, ನಿಷ್ಪಕ್ಷಪಾತ ಮತದಾನ ಮತಗಟ್ಟೆ...

ಮುಕ್ತ, ನಿಷ್ಪಕ್ಷಪಾತ ಮತದಾನ ಮತಗಟ್ಟೆ ಅಧಿಕಾರಿಯ ಜವಾಬ್ದಾರಿ: ಶಿವಮೊಗ್ಗ ಜಿಲ್ಲಾಧಿಕಾರಿ ಎಂ.ಲೋಕೇಶ್

ವಾರ್ತಾಭಾರತಿವಾರ್ತಾಭಾರತಿ3 Jun 2018 6:27 PM IST
share

ಶಿವಮೊಗ್ಗ, ಜೂ. 3:  ನೈಋತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆ ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ನಡೆಯುವಂತೆ ನೋಡಿಕೊಳ್ಳುವುದು ಮತಗಟ್ಟೆ ಅಧಿಕಾರಿ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಎಂ.ಲೋಕೇಶ್ ಅವರು ತಿಳಿಸಿದರು.

ಅವರು ಭಾನುವಾರ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಮತದಾನದ ದಿನದಂದು ಯಾವುದೇ ಖೋಟಾ ಮತಪತ್ರಗಳನ್ನು ಮತದಾರರು ಮತಪೆಟ್ಟಿಗೆಯಲ್ಲಿ ಹಾಕದಂತೆ ಎಚ್ಚರ ವಹಿಸಬೇಕು. ಮತಪತ್ರವನ್ನು ಮತದಾರರಿಗೆ ನೀಡುವ ಮೊದಲು ಗುರುತು ಮೊಹರನ್ನು ದಾಖಲಿಸಿ ಮತಗಟ್ಟೆ ಅಧಿಕಾರಿ ಪೂರ್ಣ ಸಹಿಯನ್ನು ಹಾಕಬೇಕು. ಮತದಾರರು ಮತಪತ್ರದಲ್ಲಿ ಪ್ರಾಶಸ್ತ್ಯ ಕ್ರಮದಲ್ಲಿ ಅಂಕಿ ಬರೆಯುವ ಮೂಲಕ ಮತ ಚಲಾಯಿಸಬೇಕು. ಇದಕ್ಕೆ ನೇರಳೆ ಬಣ್ಣದ ಸ್ಕೆಚ್ ಪೆನ್ ಬಳಸಬೇಕು. ಸರಬರಾಜು ಮಾಡಿರುವ ಪೆನ್‍ಗಳು ಸರಿಯಾಗಿ ಬರೆಯುವುದೇ ಎಂಬುವುದನ್ನು ಮೊದಲೇ ಖಾತ್ರಿಪಡಿಸಕೊಳ್ಳಬೇಕು ಎಂದು ಅವರು ತಿಳಿಸಿದರು.

ಮತದಾನದ ಹಿಂದಿನ ದಿನ ಮೊದಲೇ ತಿಳಿಸಿದ ಸ್ಥಳದಲ್ಲಿ ಹಾಜರಿದ್ದು ಚುನಾವಣಾ ಸಾಮಾಗ್ರಿಗಳನ್ನು ಪಡೆದುಕೊಳ್ಳಬೇಕು. ಪ್ರತಿಯೊಂದು ಮತಪತ್ರಗಳನ್ನು ಹಾಗೂ ಅನುಕ್ರಮ ಸಂಖ್ಯೆಗಳನ್ನು ಪರಿಶೀಲಿಸಬೇಕು. ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು ಮತದಾನದ ಹಿಂದಿನ ದಿನ ಕಡ್ಡಾಯವಾಗಿ ಮತಗಟ್ಟೆಯಲ್ಲಿಯೇ ವಾಸ್ತವ್ಯ ಇರಬೇಕು. ಮತದಾನ ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ನಡೆಯಲಿದ್ದು, ಬೆಳಿಗ್ಗೆ 6ಗಂಟೆಗೆ ಮತದಾನದ ಎಲ್ಲಾ ಸಿದ್ಧತೆ ಪೂರ್ಣಗೊಳಿಸಬೇಕು ಎಂದರು.

ಮತದಾನ ಆರಂಭವಾಗುವ 15ನಿಮಿಷಗಳ ಮೊದಲು ಮತಪೆಟ್ಟಿಗೆಯನ್ನು ಹಾಜರಿರುವ ಮತದಾನ ಏಜೆಂಟರಿಗೆ ತೋರಿಸಬೇಕು. ಮತಗಟ್ಟೆ ಏಜೆಂಟರ ಅಧಿಕೃತ ನೇಮಕಾತಿ ಪತ್ರವನ್ನು ಪರಿಶೀಲಿಸಿದ ಬಳಿಕ ಮತಗಟ್ಟೆಗೆ ಪ್ರವೇಶ ನೀಡಬೇಕು. ಅಭ್ಯರ್ಥಿಯು ಒಬ್ಬ ಮತಗಟ್ಟೆ ಏಜೆಂಟ್, ಇಬ್ಬರು ರಿಲೀಫ್ ಏಜೆಂಟರನ್ನು ನೇಮಿಸಬಹುದು. ಆದರೆ ಯಾವುದೇ ಹೊತ್ತಿಗೆ ಒಬ್ಬರಿಗೆ ಮಾತ್ರ ಮತಗಟ್ಟೆಗೆ ಅವಕಾಶ ಇರುವುದು. ಮತದಾನ ಮುಕ್ತಾಯವಾದ ನಂತರ ಮತಪತ್ರಗಳ ಲೆಕ್ಕವನ್ನು ಏಜೆಂಟರಿಗೆ ನೀಡಿರುವ ಬಗ್ಗೆ ಪ್ರತಿಯೊಬ್ಬ ಏಜೆಂಟರಿಂದ ಸಹಿಯನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಚುನಾವಣಾ ಮುಖ್ಯ ತರಬೇತುದಾರ ಯೋಗೀಶ್, ಎನ್‍ಐಸಿ ಅಧಿಕಾರಿ ವೆಂಕಟೇಶ್ ತರಬೇತಿಗೆ ಸಹಕರಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X