Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ...

ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯಿಸಿದ ಪ್ರಣವ್ ಮುಖರ್ಜಿ

ವಾರ್ತಾಭಾರತಿವಾರ್ತಾಭಾರತಿ3 Jun 2018 10:33 PM IST
share
ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯಿಸಿದ ಪ್ರಣವ್ ಮುಖರ್ಜಿ

ಹೊಸದಿಲ್ಲಿ, ಜೂ.3: ಆರೆಸ್ಸೆಸ್ ಆಹ್ವಾನವನ್ನು ಒಪ್ಪಿಕೊಂಡಿರುವ ವಿಷಯದಲ್ಲಿ ಉಂಟಾಗಿರುವ ವಿವಾದದಿಂದ ವಿಚಲಿತರಾಗದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕೆಂಬ ಆಗ್ರಹಗಳಿಗೆ ನಾಗಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರತಿಕ್ರಿಯಿಸುವುದಾಗಿ ಹೇಳಿದ್ದಾರೆ.

“ನನಗೆ ಹಲವು ಪತ್ರಗಳು, ಕೋರಿಕೆ, ಫೋನ್ ಕರೆಗಳು ಬಂದಿವೆ. ಯಾವುದಕ್ಕೂ ನಾನು ಪ್ರತಿಕ್ರಿಯಿಸಿಲ್ಲ. ನಾನು ಹೇಳಲಿರುವುದನ್ನು ನಾಗಪುರದಲ್ಲಿ ಹೇಳುತ್ತೇನೆ” ಎಂದು ಮುಖರ್ಜಿ ತಿಳಿಸಿರುವುದಾಗಿ ಪಶ್ಚಿಮಬಂಗಾಳದ ದಿನಪತ್ರಿಕೆ ‘ಆನಂದಬಝಾರ್’ ತಿಳಿಸಿದೆ. ಜೂನ್ 7ರಂದು ನಾಗಪುರದಲ್ಲಿ ನಡೆಯಲಿರುವ ಆರೆಸ್ಸೆಸ್‌ನ ವಾರ್ಷಿಕ ತರಬೇತಿ ಶಿಬಿರ‘ಶಿಕ್ಷಾ ವರ್ಗ’ದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿರುವ ಪ್ರಣಬ್ ಮುಖರ್ಜಿ, ಅಲ್ಲಿ ಉಪನ್ಯಾಸ ನೀಡುವ ಕಾರ್ಯಕ್ರಮವಿದೆ.

ಆಹ್ವಾನವನ್ನು ಒಪ್ಪಿಕೊಂಡಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದರೆ, ಬಿಜೆಪಿ ಹಾಗೂ ಆರೆಸ್ಸೆಸ್ ಸ್ವಾಗತಿಸಿದೆ. ಆಹ್ವಾನವನ್ನು ಒಪ್ಪಿಕೊಳ್ಳುವ ಮೂಲಕ ವಿರೋಧಿಗಳು ಶತ್ರುಗಳಲ್ಲ ಮತ್ತು ಪ್ರಮುಖ ವಿಷಯಗಳ ಬಗ್ಗೆ ಮಾತುಕತೆ ನಡೆಯಬೇಕು ಎಂಬ ಸ್ಪಷ್ಟ ಸಂದೇಶವನ್ನು ಮಾಜಿ ರಾಷ್ಟ್ರಪತಿಗಳು ನೀಡಿದ್ದಾರೆ. ಆರೆಸ್ಸೆಸ್‌ನ ಹಿಂದುತ್ವವಾದಿ ಧೋರಣೆಯ ಕುರಿತ ಪ್ರಶ್ನೆಗಳಿಗೆ ಮುಖರ್ಜಿ ಈ ರೀತಿ ಉತ್ತರಿಸಿದ್ದಾರೆ ಎಂದು ಆರೆಸ್ಸೆಸ್ ಸಿದ್ಧಾಂತವಾದಿ ರಾಕೇಶ್ ಸಿನ್ಹ ಹೇಳಿದ್ದಾರೆ.

ಇದೇ ವೇಳೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ಚಿದಂಬರಂ, ಮಾಜಿ ರಾಷ್ಟ್ರಪತಿಯವರು ಆಹ್ವಾನ ಸ್ವೀಕರಿಸಿಯಾಗಿದೆ. ಯಾಕೆ ಸ್ವೀಕರಿಸಿದ್ದು ಎಂಬ ಬಗ್ಗೆ ಚರ್ಚೆ ಬೇಡ. ಅವರು ಅಲ್ಲಿಗೆ ಹೋಗಿ ಆರೆಸ್ಸೆಸ್‌ನ ಸಿದ್ಧಾಂತದಲ್ಲಿ ಇರುವ ದೋಷವನ್ನು ತಿಳಿಹೇಳಲಿ ಎಂದಿದ್ದಾರೆ. ಪ್ರಣವ್ ಮುಖರ್ಜಿಯವರಿಗೆ ಪತ್ರ ಬರೆದಿರುವ ಕೇರಳ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಚೆನ್ನಿತ್ತಲ, ಮುಖರ್ಜಿಯವರ ನಿಲುವಿನಿಂದ ಜಾತ್ಯಾತೀತ ಮನೋಭಾವದವರಿಗೆ ಭಾರೀ ಆಘಾತವಾಗಿದೆ . ಕಾಂಗ್ರೆಸ್‌ನ ಧೋರಣೆಯಾದ ಜಾತ್ಯಾತೀತತೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೂ , ಒಂದು ವರ್ಗದ ಜನತೆ ಒಳಗೊಂಡಿರುವ ಹಿಂದೂ ರಾಷ್ಟ್ರವನ್ನು ನಿರ್ಮಿಸುವ ಆರೆಸ್ಸೆಸ್‌ನ ಧೋರಣೆಗೂ ಅಜಗಜಾಂತರ ವ್ಯತ್ಯಾಸವಿದೆ ಎಂದು ತಿಳಿಸಿದ್ದಾರೆ.

ಆದರೆ ಮುಖರ್ಜಿ ನಿಲುವನ್ನು ಬೆಂಬಲಿಸಿರುವ ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಘ್ವಿ, ರಾಜಕೀಯ ರಂಗದಲ್ಲಿ 60 ವರ್ಷದ ಅನುಭವಿಯಾಗಿರುವ ವ್ಯಕ್ತಿಯೊಬ್ಬರು ಆಹ್ವಾನವನ್ನು ಒಪ್ಪಿಕೊಂಡೊಡನೆ ಅವರ ಬಗ್ಗೆ ತೀರ್ಪು ನೀಡುವ ಬದಲು, ಅವರು ಎಲ್ಲಿ ಏನು ಮಾತಾಡುತ್ತಾರೆ ಎಂಬುದನ್ನು ನೋಡಿ ಆ ಮೇಲೆ ಮಾತಾಡಬೇಕು ಎಂದಿದ್ದಾರೆ. ಈ ಮಧ್ಯೆ, ಪ್ರತಿಕ್ರಿಯೆ ನೀಡಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಆರೆಸ್ಸೆಸ್ ಸಿದ್ಧಾಂತದ ಬಗ್ಗೆ ಆಕ್ಷೇಪಿಸಲು ಯಾವುದೇ ಕಾರಣಗಳಿಲ್ಲ. ಮಹಾತ್ಮಾ ಗಾಂಧೀಜಿಯವರು ಕೂಡಾ ಆರೆಸ್ಸೆಸ್ ಸಂಘಟನೆ ಪ್ರತಿಪಾದಿಸಿರುವ ರಚನಾತ್ಮಕ ವೌಲ್ಯಗಳನ್ನು ಅಂಗೀಕರಿಸಿದ್ದರು ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X