Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅವಕಾಶವಾದಿ ಮೈತ್ರಿಕೂಟ ಶೀಘ್ರವೇ ಅಂತ್ಯ:...

ಅವಕಾಶವಾದಿ ಮೈತ್ರಿಕೂಟ ಶೀಘ್ರವೇ ಅಂತ್ಯ: ಬಿ.ಎಸ್.ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ3 Jun 2018 10:59 PM IST
share
ಅವಕಾಶವಾದಿ ಮೈತ್ರಿಕೂಟ ಶೀಘ್ರವೇ ಅಂತ್ಯ: ಬಿ.ಎಸ್.ಯಡಿಯೂರಪ್ಪ

ತುಮಕೂರು,ಜೂ.03: ರಾಜ್ಯದ ಆರು ಕೋಟಿ ಜನರ ವಿರುದ್ಧವಾಗಿ ಅವಕಾಶವಾದಿ ರಾಜಕಾರಣ ನಡೆಯುತ್ತಿದೆ. ಇದೆಲ್ಲವನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ. ಜನರ ಒಪ್ಪಿಗೆ ಇಲ್ಲದೆ ನಡೆಯುತ್ತಿರುವ ಅವಕಾಶವಾದಿ ಮೈತ್ರಿ ಕೂಟದ ರಾಜಕಾರಣಕ್ಕೆ ಶೀಘ್ರದಲ್ಲಿಯೇ ಅಂತ್ಯ ಬೀಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ನಗರದ ಶ್ರೀ ಸಿದ್ಧಿವಿನಾಯಕ ಸಮುದಾಯ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಾ, ರಾಜ್ಯದ ಶಿಕ್ಷಕರ ಸಮಸ್ಯೆಯನ್ನು ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಬಗೆಹರಿಸಿಲ್ಲ. ಶಿಕ್ಷಕರ ಸಮಸ್ಯೆಯನ್ನು ಕಡೆಗಣಿಸಿದೆ ಎಂದು ದೂರಿದರು. 

ಶಿಕ್ಷಕರ ಸಮಸ್ಯೆ ಬಗೆಹರಿಸುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮಾತು ಭಾಷಣಕ್ಕೆ ಸೀಮಿತವಾಗಿದೆಯೇ ಹೊರತು ಕಾರ್ಯಗತಕ್ಕೆ ಬರುವುದಿಲ್ಲ. ಶಿಕ್ಷಕರ ವರ್ಗಾವಣೆ ನೀತಿ, ವೇತನ ತಾರತಮ್ಯ ಸೇರಿದಂತೆ ಇನ್ನು ನಾನಾ ಸಮಸ್ಯೆ ಬಗೆಹರಿಸುವಲ್ಲಿ ಹಿಂದೆ ಇದ್ದ ಕಾಂಗ್ರೆಸ್ ಸರಕಾರದ ಆಡಳಿತದಿಂದ ಹಿಡಿದು ಈ ವರೆಗೂ ಸಾಧ್ಯವಾಗಿಲ್ಲ. ಹಾಗಾಗಿ ಈ ಬಾರಿ ಬಿಜೆಪಿಗೆ ಬೆಂಬಲ ಸೂಚಿಸಿ. ಮುಂದಿನ ದಿನಗಳಲ್ಲಿ ಶಿಕ್ಷಕರ ಎಲ್ಲಾ ಸಮಸ್ಯೆಗಳನ್ನು ಬಗಹರಿಸುತ್ತೇನೆ ಎಂದು ಭರವಸೆ ನೀಡಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಮಾಜಿ ಶಾಸಕ ವೈ.ಎ. ನಾರಾಯಣಸ್ವಾಮಿ ಕಣಕ್ಕಿಳಿದಿದ್ದು, ಇದಕ್ಕೂ ಮೊದಲು ಹಾಲನೂರು ಲೇಪಾಕ್ಷಿ ಅವರಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅವರನ್ನು ಬದಲಾವಣೆ ಮಾಡಬೇಕಾಯಿತು. ನಾನು ಲೇಪಾಕ್ಷಿ ಕರೆದು ಮಾತನಾಡಿದ್ದೇನೆ. ಆತ ಕ್ಷೇತ್ರದಲ್ಲಿಯೇ ಓಡಾಡಿ ಹಣ ಖರ್ಚು ಮಾಡಿಕೊಂಡಿದ್ದಾರೆ. ಆದರೂ ಅನಿವಾರ್ಯ ಪರಿಸ್ಥಿತಿಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವೈ.ಎ. ನಾರಾಯಣಸ್ವಾಮಿ ಗೆದ್ದರೆ, ಹಾಲನೂರು ಲೇಪಾಕ್ಷಿಯೇ ಗೆದ್ದಂತೆ. ಹಾಗಾಗಿ ಹಾಲನೂರು ಲೇಪಾಕ್ಷಿಯೇ ಅಭ್ಯರ್ಥಿ ಎಂದುಕೊಂಡು ಮತನೀಡಿ ಎಂದು ಮನವಿ ಮಾಡಿದರು.

ಶಿಕ್ಷಕರೆಲ್ಲರೂ ಜಾತ್ಯಾತೀತವಾಗಿ ಕೈ ಜೋಡಿಸುವ ಮೂಲಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ. ನಾರಾಯಣ ಸ್ವಾಮಿ ಗೆಲುವಿಗಾಗಿ ಮತಚಲಾಯಿಸಬೇಕಾಗಿದೆ. ಉತ್ತಮ ಸಮಾಜ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಎಷ್ಟು ಮುಖ್ಯವೋ, ಆಗ್ನೇಯ ಶಿಕ್ಷಕರ ಕ್ಷೇತ್ರದ ಉತ್ತಮ ಅಭ್ಯರ್ಥಿಯ ಗೆಲುವಿನ ಆಯ್ಕೆಯೂ ಅಷ್ಟೇ ಮುಖ್ಯವಾಗಿದೆ ಎಂದು ಹೇಳಿದರು. 

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉತ್ತಮ ಆಡಳಿತ ನಡೆಸುತ್ತಿದ್ದು, 2025ರ ವೇಳೆಗೆ ನವಭಾರತ ನಿರ್ಮಾಣ ಮಾಡಲು ಹೊರಟಿದ್ದಾರೆ. ಅಂತೆಯೇ ರಾಜ್ಯವನ್ನೂ ನವ ಕರ್ನಾಟಕವನ್ನಾಗಿ ನಿರ್ಮಾಣ ಮಾಡಲು ಬಿಜೆಪಿಯನ್ನು ಬೆಂಬಲಿಸಲೇಬೇಕಾಗಿದೆ. ದೇಶದ ಜಿಡಿಪಿ 7.7ಕ್ಕೆ ಜಿಗಿತವಾಗಿರುವ ಕಾರಣ ದೇಶ ಆರ್ಥಿಕಾಭಿವೃದ್ಧಿಯಲ್ಲಿ ಮುಂದೆ ಸಾಗಲಿದೆ. ಮುಂದಿನ ದಿನಗಳಲ್ಲಿ ಪ್ರಪಂಚದಲ್ಲಿ ಭಾರತ ತನ್ನ ಪ್ರಾಬಲ್ಯವನ್ನು ಸಾಧಿಸಲಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ. ಹೀಗಾಗಿಯೇ ಕಳೆದ ನಾಲ್ಕು ವರ್ಷಗಳಿಂದ ಮೋದಿ ಅವರ ಭ್ರಷ್ಟಾಚಾರ ರಹಿತ ಆಡಳಿತವನ್ನು ಕಾಣುತ್ತಿದ್ದೇವೆ. ಬಿಜೆಪಿ ಮತ್ತೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಶಿಕ್ಷಕರೆಲ್ಲರೂ ಜಾತ್ಯಾತೀತವಾಗಿ ಬಿಜೆಪಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯ ಗೆಲುವಿಗೆ ಮತ ಚಲಾಯಿಸಬೇಕಾಗಿದೆ ಎಂದು ಹೇಳಿದರು. 

ಮಾಜಿ ಶಾಸಕ ಬಿ. ಸುರೇಶ್‍ಗೌಡ ಮಾತನಾಡಿ, ಬಿಜೆಪಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ ಪ್ರತಿಷ್ಟೆಯ ಪ್ರಶ್ನೆಯಾಗಿದ್ದು, ಗೆಲುವು ಸಾಧಿಸಲೇಬೇಕಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಇನ್ನೂ ಆರು ತಿಂಗಳಲ್ಲಿ ಮುರಿದು ಬೀಳಲಿದೆ. ದೇವೇಗೌಡರು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವ ಮಾತನಾಡಿದ್ದಾರೆ. ಆದರೆ ಅದು ಸಾಧ್ಯವಾಗುವುದಿಲ್ಲ. ಓಟು ದೋಚಲು ಸುಳ್ಳು ಭರವಸೆ ನೀಡುತ್ತಿದ್ದಾರೆ. ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಲಿದ್ದಾರೆ. ಆಗ ಶಿಕ್ಷಕರ ಸಮಸ್ಯೆಗಳು ಬಗೆಹರಿಯಲಿವೆ ಎಂದರು.    

ಮೈತ್ರಿ ಸರಕಾರದಿಂದ ಶಿಕ್ಷಕರ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ. ಇದನ್ನು ಮನಗಂಡಿರುವ ಶಿಕ್ಷಕರು ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ. ಇನ್ನು ಮುಂದೆ ವೈ.ಎ.ನಾರಾಯಣಸ್ವಾಮಿ ನಿಮ್ಮ ಕ್ಷೇತ್ರದಲ್ಲಿಯೇ ಇರುತ್ತಾರೆ ಅವರನ್ನು ನೀವು ಗೆಲ್ಲಿಸಿ ಎಂದು ಮನವಿ ಮಾಡಿದರು.  

ಮಾಜಿ ಸಂಸದ ಜಿ.ಎಸ್. ಬಸವರಾಜು, ಜಿಪಂ ಸದಸ್ಯ ವೈ.ಎಚ್. ಹುಚ್ಚಯ್ಯ,ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಆರ್. ಹುಲಿನಾಯ್ಕರ್, ಮಾಧ್ಯಮಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಂದೀಪ್ ಭೂದಾಳ್, ಮುಖಂಡರಾದ ಜಿ.ಎನ್. ಬೆಟ್ಟಸ್ವಾಮಿ, ಡಿ. ಕೃಷ್ಣಕುಮಾರ್, ಎಸ್.ಆರ್. ಗೌಡ, ಬಿಜೆಪಿ ಕಾರ್ಯದರ್ಶಿ ರವಿ ಹೆಬ್ಬಾಕ, ಸರೋಜ ಗೌಡ, ರುದ್ರೇಶ್, ಪೆಪ್ಸಿ ಬಸವರಾಜು, ಲಕ್ಷ್ಮೀಶ್, ಸದಾಶಿವಯ್ಯ ಸೇರಿದಂತೆ ಮೊದಲಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X