Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಅಂಬಿಗರ ಚೌಡಯ್ಯನ ದೋಣಿಯನ್ನೇರಿ...

ಅಂಬಿಗರ ಚೌಡಯ್ಯನ ದೋಣಿಯನ್ನೇರಿ...

ವಾರ್ತಾಭಾರತಿವಾರ್ತಾಭಾರತಿ3 Jun 2018 11:47 PM IST
share
ಅಂಬಿಗರ ಚೌಡಯ್ಯನ ದೋಣಿಯನ್ನೇರಿ...

12ನೆ ಶತಮಾನದ ಶರಣದ ಬದುಕು, ಚಿಂತನೆಗಳು ಬರೆದಷ್ಟು ಮುಗಿಯುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಬಸವ ಚಿಂತನೆ ಮತ್ತೆ ಮುನ್ನೆಲೆಗೆ ಬಂದಿದೆ. ವೈದಿಕ ಚಿಂತನೆಯ ಬೂದಿಯಿಂದ ಮುಚ್ಚಿ ಹೋಗಿರುವ ಬಸವ ಚಿಂತನೆಗಳ ಕೆಂಡ ಧಗ್ಗೆಂದಿದೆ. ಮನು ಚಿಂತನೆಯ ವಿರುದ್ಧ ತನ್ನ ಧ್ವನಿಯನ್ನು ಮತ್ತೆ ಮೊಳಗಿಸಿದೆ. ಇಂತಹದೊಂದು ಆಂದೋಲನದ ಹಿಂದೆ ಹಲವು ಬರಹಗಾರರ ಶ್ರಮಗಳು ಕೆಲಸ ಮಾಡಿವೆ. 12 ಶತಮಾನದ ವಚನಕಾರರನ್ನು ಗುರುತಿಸಿ ಅವರ ಚಿಂತನೆಗಳನ್ನು ವರ್ತಮಾನಕ್ಕೆ ಪದೇ ಪದೇ ಪರಿಚಯಿಸಿದ ಪರಿಣಾಮವಾಗಿ ಇಂದಿಗೂ ಶರಣರು ಧಾರ್ಮಿಕ ಗಡಿಗಳನ್ನು ದಾಟಿ ಕನ್ನಡಿಗರನ್ನು ಆವರಿಸಿಕೊಂಡಿದ್ದಾರೆ. ಶರಣರ ವಚನಗಳು ಮತ್ತು ಅವರ ಬದುಕಿನ ಬಗ್ಗೆ ಹಲವು ಮಹತ್ವದ ಕೃತಿಗಳು ಬಂದಿವೆ. ಅವುಗಳಲ್ಲಿ ಪ್ರೊ. ಎಚ್. ಲಿಂಗಪ್ಪ ಬರೆದಿರುವ ‘ಘನವಂತ ಅಂಬಿಗರ ಚೌಡಯ್ಯ’ ಕೂಡ ಸೇರಿದೆ. ಸುಮಾರು ನಾಲ್ಕುನೂರು ವಚನಗಳನ್ನು ರಚಿಸಿರುವ ಚೌಡಯ್ಯ, ಜನರಲ್ಲಿರುವ ಡಾಂಭಿಕತೆ, ಮೂಢನಂಬಿಕೆ, ಅಜ್ಞಾನ, ಅವಿವೇಕ ಇತ್ಯಾದಿಗಳನ್ನು ನಿರ್ದಾಕ್ಷಿಣ್ಯವಾಗಿ ನಿರಾಕರಿಸಿದ. ಜೊತೆಗೆ ಪ್ರಶ್ನಿಸಿ ವಿಮರ್ಶಿಸಿದ. ಕೃತಿಯಲ್ಲಿ ಲೇಖಕರು ಚೌಡಯ್ಯನ ನೀತಿಪರ ಹಾಗೂ ನ್ಯಾಯ ಪರ ನಿಲುನ್ನು ಸಮರ್ಥವಾಗಿ ಎತ್ತಿ ಹಿಡಿದಿದ್ದಾರೆ.

ಕೃತಿಯಲ್ಲಿ ಒಟ್ಟು 10 ಅಧ್ಯಾಯಗಳಿವೆ. ಮೊದಲ ಅಧ್ಯಾಯದಲ್ಲಿ ವಚನ ಚಳವಳಿಗೆ ಕಾರಣವಾದ ಕಾಲಘಟ್ಟವನ್ನು ಪರಿಚಯಿಸುವ ಪ್ರಯತ್ನ ಮಾಡುತ್ತಾರೆ. ಬಸವಣ್ಣನ ಚಳವಳಿಯ ಅನಿವಾರ್ಯತೆ ಮತ್ತು ಆ ಮೂಲಕ ತಳಸ್ತರದ ಜನರು ಹೇಗೆ ಸಾಮಾಜಿಕ ಬದಲಾವಣೆಗಳ ಭಾಗವಾಗಿ ಮುನ್ನೆಲೆಗೆ ಬಂದರು ಎನ್ನುವುದನ್ನು ವಿವರಿಸುತ್ತಾರೆ. ಎರಡನೆ ಭಾಗದಲ್ಲಿ 12ನೆ ಶತಮಾನದ ವಚನಗಳ ಹಿನ್ನೆಲೆ ಮತ್ತು ಅದು ಹೇಗೆ ಬದಲಾವಣೆಗಳಿಗೆ ಕಾರಣವಾಯಿತು ಎನ್ನುವುದನ್ನು ಹೇಳುತ್ತಾರೆ. ಮೂರನೆ ಭಾಗದಲ್ಲಿ ಘನವಂತ ಅಂಬಿಗರ ಚೌಡಯ್ಯ ಅವರ ಬದುಕು, ವ್ಯಕ್ತಿತ್ವವನ್ನು ಪರಿಚಯಿಸುವ ಕೆಲಸವನ್ನು ಮಾಡುತ್ತಾರೆ. ಆತ ಬಾಳಿ ಬದುಕಿನ ಕಾಲ, ಹುಟ್ಟಿದ ಮತ್ತು ಐಕ್ಯಗೊಂಡ ಸ್ಥಳಗಳ ಬಗ್ಗೆಯೂ ಅನ್ವೇಷಣೆಯನ್ನು ಈ ಭಾಗದಲ್ಲಿ ನಡೆಸುತ್ತಾರೆ. ನಾಲ್ಕನೇ ಅಧ್ಯಾಯದಲ್ಲಿ ಅಂಬಿಗರ ಚೌಡಯ್ಯ ಅವರ ವಚನಗಳನ್ನು ಇಟ್ಟುಕೊಂಡು ಆಗಿನ ಕಾಲಘಟ್ಟ, ಸಾಮಾಜಿಕ ಸ್ಥಿತಿಗತಿ ಹೇಗಿತ್ತು ಎನ್ನುವುದನ್ನು ವಿವರಿಸುವ ಪ್ರಯತ್ನ ಮಾಡುತ್ತಾರೆ. ‘‘ಅಂಬಿಗ ಅಂಬಿಗ ಎಂದು ಕುಂದು ನುಡಿಯದಿರು/ನಂಬಿದರೆ ಒಂದೆ ಹುಟ್ಟಲಿ ಕಡೆಯ ಹಾಯಿಸುವ...’’ ಎನ್ನುವ ಸಾಲುಗಳು ಆ ಸಂದರ್ಭದಲ್ಲಿ ಅಂಬಿಗರ ಕುರಿತಂತೆ ಸಮಾಜದ ಧೋರಣೆಯನ್ನು ಎತ್ತಿ ಹಿಡಿಯುತ್ತವೆ. ಇಂತಹ ಹಲವು ವಚನಗಳನ್ನು ಮುಂದಿಟ್ಟುಕೊಂಡು ಜಾತೀಯತೆ ಆ ಕಾಲವನ್ನು ಹೇಗೆ ಆಳುತ್ತಿತ್ತು ಎನ್ನುವುದನ್ನು ಅವರು ತಿಳಿಸುತ್ತಾರೆ. ಕೊನೆಯ ಅಧ್ಯಾಯದಲ್ಲಿ ಅಂಬಿಗರ ಚೌಡಯ್ಯನ ವಚನಗಳ ಅಪೂರ್ವ ಸಂಗ್ರಹಗಳಿವೆ. ರಶ್ಮಿ ಪ್ರಕಾಶನ ಚಿತ್ರದುರ್ಗ ಈ ಕೃತಿಯನ್ನು ಹೊರತಂದಿದೆ. ಪುಟಗಳು 120. ಕೃತಿಯ ಮುಖಬೆಲೆ 120 ರೂ. ಆಸಕ್ತರು 99459 98099 ದೂರವಾಣಿಯನ್ನು ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X