Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಟರ್‌ಕಾಂಟಿನೆಂಟಲ್ ಕಪ್: ಕೀನ್ಯ ಕೆಡವಿದ...

ಇಂಟರ್‌ಕಾಂಟಿನೆಂಟಲ್ ಕಪ್: ಕೀನ್ಯ ಕೆಡವಿದ ಭಾರತ

100ನೇ ಪಂದ್ಯದಲ್ಲಿ ಎರಡು ಗೋಲ್ ಬಾರಿಸಿದ ಚೆಟ್ರಿ

ವಾರ್ತಾಭಾರತಿವಾರ್ತಾಭಾರತಿ4 Jun 2018 10:45 PM IST
share
ಇಂಟರ್‌ಕಾಂಟಿನೆಂಟಲ್ ಕಪ್: ಕೀನ್ಯ ಕೆಡವಿದ ಭಾರತ

► ಪಂದ್ಯದ ಟಿಕೆಟ್ ಸೋಲ್ಡ್‌ ಔಟ್

ಮುಂಬೈ, ಜೂ.4: ಕೀನ್ಯ ವಿರುದ್ಧ ಸೋಮವಾರ ಇಲ್ಲಿ ನಡೆದ ಇಂಟರ್‌ಕಾಂಟಿನೆಂಟಲ್ ಕಪ್ ಫುಟ್ಬಾಲ್ ಪಂದ್ಯದಲ್ಲಿ ಬೈಚುಂಗ್ ಭುಟಿಯಾ ಹಾಗೂ ಐಎಂ ವಿಜಯನ್ ಹಾಜರಿದ್ದರು. ಕ್ರೀಡಾಂಗಣದಲ್ಲಿ ಫುಟ್ಬಾಲ್ ಅಭಿಮಾನಿಗಳು ಕಿಕ್ಕಿರಿದು ನೆರೆದಿದ್ದರು. ಮುಂಬೈ ಫುಟ್ಬಾಲ್ ಅರೆನಾದಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗಿದ್ದು ಸುನೀಲ್ ಚೆಟ್ರಿ.

ಸೋಮವಾರ ನಾಯಕ ಚೆಟ್ರಿ ಭಾರತದ ಪರ 100ನೇ ಅಂತರ್‌ರಾಷ್ಟ್ರೀಯ ಪಂದ್ಯವನ್ನು ಆಡಿದ್ದು, ಚೆಟ್ರಿ ಬಾರಿಸಿದ ಅವಳಿ ಗೋಲುಗಳ ನೆರವಿನಿಂದ ಭಾರತ ಕೀನ್ಯವನ್ನು 3-0 ಅಂತರದಿಂದ ಮಣಿಸಿತು. ನಾಲ್ಕು ದೇಶಗಳು ಭಾಗವಹಿಸುತ್ತಿರುವ ಟೂರ್ನಿಯಲ್ಲಿ ಭಾರತ ಫೈನಲ್‌ಗೆ ಲಗ್ಗೆ ಇಟ್ಟಿತು. ಭಾರತ ಟೂರ್ನಿಯ ಮೊದಲ ಪಂದ್ಯದಲ್ಲಿ ಚೈನೀಸ್ ತೈಪೆಯನ್ನು 5-0 ಅಂತರದಿಂದ ಮಣಿಸಿತ್ತು.

68ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ರನ್ನು ಗೋಲಾಗಿ ಪರಿವರ್ತಿಸಿದ ಚೆಟ್ರಿ ಭಾರತಕ್ಕೆ 1-0 ಮುನ್ನಡೆ ಒದಗಿಸಿಕೊಟ್ಟರು. 71ನೇ ನಿಮಿಷದಲ್ಲಿ ಗೋಲು ಬಾರಿಸಿದ ಜೇಜೆ ಲಾಲ್‌ಪೆಕುಲ್ವಾ ಭಾರತದ ಮುನ್ನಡೆಯನ್ನು 2-0ಗೆ ಏರಿಸಿದರು.

ಇಂಜುರಿ ಟೈಮ್‌ನಲ್ಲಿ (92ನೇ ನಿಮಿಷ) ಮತ್ತೊಂದು ಗೋಲು ಬಾರಿಸಿದ ಚೆಟ್ರಿ ಭಾರತಕ್ಕೆ 3-0 ಅಂತರದ ಗೆಲುವು ತಂದರು.

100ನೇ ಪಂದ್ಯ ಆಡಿದ ಚೆಟ್ರಿಗೆ ಭುಟಿಯಾ ಹಾಗೂ ವಿಜಯನ್ ಸನ್ಮಾನಿಸಿದರು. ಚೆಟ್ರಿಗೆ ಸಹ ಆಟಗಾರರು ಸಾಲಾಗಿ ನಿಂತು ಗೌರವ ಸಲ್ಲಿಸಿದರು. ಈ ವೇಳೆ ಸ್ಟೇಡಿಯಂನಲ್ಲಿ ಚೆಟ್ರಿ ಪತ್ನಿ ಹಾಗೂ ಹೆತ್ತವರು ಇದ್ದರು. ಇದೀಗ 100 ಪಂದ್ಯಗಳಲ್ಲಿ ಒಟ್ಟು 61 ಗೋಲುಗಳನ್ನು ಬಾರಿಸಿರುವ ಚೆಟ್ರಿ ವಿಶ್ವದ ಅಗ್ರ ಸ್ಕೋರರ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಮಾಜಿ ನಾಯಕ ಭುಟಿಯಾ ಬಳಿಕ ಭಾರತದ ಪರ 100 ಅಂತರ್‌ರಾಷ್ಟ್ರೀಯ ಪಂದ್ಯ ಆಡಿದ ಸಾಧನೆ ಮಾಡಿದ್ದಾರೆ. ಕ್ರಿಕೆಟ್ ದಂತಕತೆ ಸಚಿನ್ ತೆಂಡುಲ್ಕರ್, ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ಅವರು ಚೆಟ್ರಿಯವರ 100ನೇ ಪಂದ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಾರತೀಯ ಫುಟ್ಬಾಲ್‌ನ್ನು ಬೆಂಬಲಿಸುವಂತೆ ಅಭಿಮಾನಿಗಳಲ್ಲಿ ವಿನಂತಿಸಿದ್ದರು. 33ರ ಹರೆಯದ ಚೆಟ್ರಿ ಕೂಡ ಪಂದ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬೆಂಬಲಿಸುವಂತೆ ಕೋರಿದ್ದರು.

 ಕ್ರೀಡಾಳುಗಳ ಕರೆಗೆ ಓಗೊಟ್ಟು ಬಂದ ಅಭಿಮಾನಿಗಳು ಪಂದ್ಯ ವೀಕ್ಷಿಸಲು ಸಂಜೆ ವೇಳೆಗೆ ಸ್ಟೇಡಿಯಂ ಹೊರಗೆ ದೊಡ್ಡ ಸರದಿಸಾಲಿನಲ್ಲಿ ನಿಂತು ಟಿಕೆಟ್ ಪಡೆದರು. ಸ್ಟೇಡಿಯಂನ ಎಲ್ಲ ಟಿಕೆಟ್‌ಗಳು ಮಾರಾಟವಾಗಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X