Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಆರೋಹಣ ಕೊಡಗು’ ತಂಡದ ಪರಿಸರ ಕಾಳಜಿ :...

‘ಆರೋಹಣ ಕೊಡಗು’ ತಂಡದ ಪರಿಸರ ಕಾಳಜಿ : ಚಾರಣದೊಂದಿಗೆ ಪರಿಸರ ಸ್ವಚ್ಛತೆ

ವಾರ್ತಾಭಾರತಿವಾರ್ತಾಭಾರತಿ4 Jun 2018 11:03 PM IST
share
‘ಆರೋಹಣ ಕೊಡಗು’ ತಂಡದ ಪರಿಸರ ಕಾಳಜಿ : ಚಾರಣದೊಂದಿಗೆ ಪರಿಸರ ಸ್ವಚ್ಛತೆ

ಮಡಿಕೇರಿ, ಜೂ.4 :ಜೂನ್-5 ವಿಶ್ವ ಪರಿಸರ ದಿನಾಚರಣೆ, ನಮ್ಮನ್ನು ಸಂರಕ್ಷಿಸುತ್ತಿರುವ ಪರಿಸರವನ್ನು ಉಳಿಸುವುದು, ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಕೊಡಗಿನ ಚಾರಣ ತಂಡವೊಂದು “ಪ್ರಕೃತಿಯೆಡೆಗೆ ನಮ್ಮ ನಡಿಗೆ” ಎಂಬ ಘೋಷ ವಾಕ್ಯದೊಂದಿಗೆ ಚಾರಣ ಕೈಗೊಳ್ಳೂವ ಸಂದರ್ಭ ಪ್ರವಾಸಿಗರಿಂದ ಕಲುಷಿತಗೊಳ್ಳುತ್ತಿರುವ ಕೊಡಗಿನ ಪರಿಸರವನ್ನು ಸ್ವಚ್ಛಗೊಳಿಸುವ ಪ್ರಯತ್ನವನ್ನು ಮಾಡುತ್ತಿದೆ. ವಿಶ್ವ ಪರಿಸರ ದಿನಾಚರಣೆಯ ಸಂದರ್ಭ ಪ್ರಕೃತಿಯ ಬಗ್ಗೆ ಕಾಳಜಿಯನ್ನು ಹೊಂದಿರುವ ಈ ತಂಡವನ್ನು ಶ್ಲಾಘಿಸಲೇಬೇಕು. 

‘ಆರೋಹಣ ಕೊಡಗು’ ಇದು ಮಡಿಕೇರಿಯ ಯೋಗಾಸಕ್ತರು ಪ್ರಕೃತಿ ಪ್ರೇಮಿಗಳನ್ನೊಳಗೊಂಡ ಒಂದು ತಂಡ, ಯೋಗಾಭ್ಯಾಸ, ಕೊಡಗಿನ ಬೆಟ್ಟಗುಡ್ಡಗಳಿಗೆ ಚಾರಣ, ಪ್ರಕೃತಿ ಬಗ್ಗೆ ಕಾಳಜಿ ಮತ್ತು ಜಾಗೃತಿ ಮೂಡಿಸುವುದು, ತಂಡದ ಪ್ರಮುಖ ಉದ್ದೇಶಗಳು. ‘ಆರೋಹಣ ಕೊಡಗು’ ಆರಂಭಗೊಂಡು ಒಂದು ವರ್ಷ ಪೂರೈಸಿದರೂ ಬಿಡುವಿನ ಸಮಯದಲ್ಲಿ ಕೈಗೊಂಡ ಕಾರ್ಯಕ್ರಮಗಳು ಅಪಾರ. ವಿಶೇಷವಾಗಿ ತಿಂಗಳಿಗೊಮ್ಮೆ ಯೋಗ ನಡಿಗೆ, ಮಳೆಗಾಲದಲ್ಲಿ ಪ್ರಕೃತಿ ನಡಿಗೆ, ಪರಿಸರಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ.

ವಿಶ್ವ ಪರಿಸರ ದಿನಾಚರಣೆಯ ಸಂದರ್ಭ ಈ ತಂಡದ ಪರಿಸರ ಕಾಳಜಿ ಹೊಂದಿರುವ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲೇಬೇಕು. ತಂಡ ಆಯೋಜಿಸುವಂತಹ ಚಾರಣಗಳಿಗೆ ತೆರಳುವ ಚಾರಣಿಗರು ಆಯಾ ಪ್ರದೇಶದಲ್ಲಿ ಪ್ರವಾಸಿಗರಿಂದ ಕಲುಷಿತಗೊಂಡ ಪರಿಸರವನ್ನು ಸ್ವಚ್ಛಗೊಳಿಸುತ್ತಾರೆ. 

ಇತ್ತೀಚೆಗೆ ಮಾಂದಲಪಟ್ಟಿಗೆ ತೆರಳಿದ ಸಂದರ್ಭ ಅಲ್ಲಿನ ಪ್ರಕೃತಿ ಸೌಂದರ್ಯವನ್ನು ವೀಕ್ಷಿಸಲು ಬರುವ ಪ್ರವಾಸಿಗರು ಎಸೆದಿರುವ ನೀರಿನ ಬಾಟಲಿಗಳನ್ನು ವಿಲೇವಾರಿ ಮಾಡಿ ಸ್ವಚ್ಛಗೊಳಿಸಿದ್ದಾರೆ. ಹಾಗೇ ಕೋಟೆ ಬೆಟ್ಟ, ಕೋಟೆ ಅಬ್ಬಿ, ತಲಕಾವೇರಿ ಸುತ್ತಮುತ್ತ ಹಾಗೂ ಇತರ ಪ್ರವಾಸೀಯ ಸ್ಥಳಗಳಿಗೆ ತಂಡ ಚಾರಣ ಕೈಗೊಂಡಾಗ, ಅಲ್ಲಿನ ಸ್ಥಳಗಳನ್ನು ಸ್ವಚ್ಛಗೊಳಿಸುವ ಕೆಲಸವನ್ನು ಮಾಡಿದೆ. ಹಾಗೆಯೇ ಪ್ರಕೃತಿ ಮಾತೆಯನ್ನು ಕಲುಷಿತಗೊಳಿಸಬಾರದೆಂಬ ಉದ್ದೇಶದಿಂದ ತಂಡದ ಸದಸ್ಯರಿಗೆ, ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಂತಹ ಕೆಲಸಗಳನ್ನು ‘ಆರೋಹಣ ಕೊಡಗು’ ಮಾಡುತ್ತಿದೆ.

ಮಡಿಕೇರಿಯ ಯೋಗ ಗುರು ಕೆ.ಕೆ. ಮಹೇಶ್‍ಕುಮಾರ್ ಮತ್ತು ಅಶ್ವಿನ್ ಜುವೆಲ್ಲರ್ಸ್‍ನ ಮಾಲೀಕರಾದ ಇ.ಎಲ್. ಸುರೇಶ್‍ಕುಮಾರ್ ಅವರ ನೇತೃತ್ವದಲ್ಲಿ ಸುಮಾರು 100 ಸದಸ್ಯರನ್ನೊಳಗೊಂಡ ಸಮಾನ ಮನಸ್ಕರ ತಂಡ ಚಾರಣದೊಂದಿಗೆ ಪರಿಸರವನ್ನು ಸ್ವಚ್ಛಗೊಳಿಸುವ, ಪ್ರಕೃತಿಯ ಸಂರಕ್ಷಣೆಯ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸುವ ಇರಾದೆಯನ್ನು  ಹೊಂದಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X