Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಊರ ಒಳಗಣ ಬಯಲು

ಊರ ಒಳಗಣ ಬಯಲು

ವಾರ್ತಾಭಾರತಿವಾರ್ತಾಭಾರತಿ5 Jun 2018 12:02 AM IST
share
ಊರ ಒಳಗಣ ಬಯಲು

ಊರ ಒಳಗಣ ಬಯಲು, ಊರ ಹೊರಗಣ ಬಯಲೆಂದುಂಟೆ?
ಊರೊಳಗೆ ಬ್ರಾಹ್ಮಣ ಬಯಲು, ಊರ ಹೊರಗೆ ಹೊಲೆಬಯಲೆಂದುಂಟೆ?
ಎಲ್ಲಿ ನೋಡಿದೊಡೆ ಬಯಲೊಂದೆ;
ಭಿತ್ತಿಯಿಂದ ಒಳಹೊರಗೆಂಬ ನಾಮವೈಸೆ.
ಎಲ್ಲಿ ನೋಡಿದಡೆ ಕರೆದಡೆ ಓ ಎಂಬಾತನೆ ಬಿಡಾಡಿ.
                                         -ಬೊಂತಾದೇವಿ

 ಕಾಶ್ಮೀರದ ಮಾಂಡವ್ಯಪುರ ರಾಜನ ಮಗಳು ನಿಜದೇವಿ ಶಿವಭಕ್ತಿಯಲ್ಲಿ ತಲ್ಲೀನಳಾಗಿ ವೈರಾಗ್ಯ ತಾಳಿ ಕಲ್ಯಾಣಕ್ಕೆ ಬಂದು ನೆಲೆಸಿದಳು. ಆಕೆ ಸಕಲ ಸೌಭಾಗ್ಯವನ್ನು ಬಿಟ್ಟು ಬರುವಾಗ ಉಟ್ಟ ಬಟ್ಟೆಯನ್ನೂ ಕಳೆದು ಬಿಸಾಕುತ್ತಾಳೆ. ಬೊಂತೆ (ಕೌದಿ)ಯನ್ನು ಹೊದ್ದುಕೊಂಡು ಕಲ್ಯಾಣಕ್ಕೆ ಬಂದ ಕಾರಣ ಕಲ್ಯಾಣದ ಜನ ಅವಳನ್ನು ‘ಬೊಂತಾದೇವಿ’ ಎಂದು ಕರೆದರು. ‘ಬಿಡಾಡಿ’ ಇವಳ ವಚನಾಂಕಿತ. ಬಿಡಾಡಿ ಎಂದರೆ ಯಾವ ಎಲ್ಲೆಗಳೂ ಇಲ್ಲದ ಬಯಲರೂಪ ಪಡೆದ ಶಿವ. ಸ್ವತಂತ್ರ ಮನೋಭಾವದ ಬೊಂತಾದೇವಿಯ ಶಿವ ಎಲ್ಲೆಡೆಯೂ ಇದ್ದಾನೆ. ಆದರೆ ಯಾವುದರಲ್ಲಿಯೂ ಸೀಮಿತವಾಗಿಲ್ಲ. ಬೊಂತಾದೇವಿಯ ಬಯಲಿನ ಪರಿಕಲ್ಪನೆ ಓದುಗರ ಮೇಲೆ ಅಚ್ಚಳಿಯದ ಪರಿಣಾಮ ಬೀರುತ್ತದೆ. ಅವಳ ಆರು ವಚನಗಳು ಸಿಕ್ಕಿವೆ. ಅವುಗಳಲ್ಲಿ ಬಯಲಿನ ಕಲ್ಪನೆಯೇ ಪ್ರಮುಖವಾಗಿದೆ.
 ಅನಂತನೂ ಲಯಕ್ಕೆ ಒಳಗಾಗದವನೂ ಆದಂಥ ದೇವರು ಬಯಲುರೂಪಿಯಾಗಿದ್ದು ಯಾವುದೇ ಕಟ್ಟುಪಾಡುಗಳು ಇಲ್ಲದ ಕಾರಣ ಬೊಂತಾದೇವಿ ಆತನನ್ನು ‘ಬಿಡಾಡಿ’ ಎಂದು ಕರೆದಿರುವುದು ಸಮಂಜಸವಾಗಿದೆ. ಈ ವಚನದಲ್ಲಿ ಬಯಲು ಎಂಬುದು ದೇವರು, ಬಾಹ್ಯಾಕಾಶ ಮತ್ತು ಸಮಾಜ ಎಂಬ ಮೂರು ಪ್ರಕಾರದಲ್ಲಿ ಧ್ವನಿಸುತ್ತದೆ. ದೇವರು, ವಿಶ್ವ ಮತ್ತು ಸಮಾಜದೊಳಗಿನ ಎಲ್ಲ ಜೀವರು ಆಂತರಿಕ ಸಂಬಂಧವನ್ನು ಹೊಂದಿದವರೇ ಆಗಿದ್ದಾರೆ ಎಂಬುದು ಬೊಂತಾದೇವಿಯ ನಿಲುವು. ಈ ಬಯಲನ್ನು ವಿಜ್ಞಾನಿಗಳು ಆಕಾಶ, ಬಾಹ್ಯಾಕಾಶ ಎಂದು ಮುಂತಾಗಿ ವಿಭಾಗಿಸುತ್ತಾರೆ. ಧಾರ್ಮಿಕರು ಈ ಬಯಲಿಗೆ ನೂರೆಂಟು ದೇವರುಗಳ ಹೆಸರು ಕೊಡುತ್ತಾರೆ. ವರ್ಣಭೇದ ನೀತಿಯ ಜನರು ಸಮಾಜವನ್ನು ಕರಿಯರು-ಬಿಳಿಯರು ಮತ್ತು ಸವರ್ಣೀಯರು-ಅಸ್ಪಶ್ಯರು ಮುಂತಾಗಿ ವಿಭಾಗಿಸುತ್ತಾರೆ. ಎಲ್ಲವನ್ನೂ ಮತ್ತು ಎಲ್ಲರನ್ನೂ ಒಳಗೊಂಡ ಬಯಲನ್ನು ಹೀಗೆ ವಿಭಾಗಿಸಬಹುದೇ ಎಂಬುದು ಬೊಂತಾದೇವಿಯ ಪ್ರಶ್ನೆಯಾಗಿದೆ. ಮಾನವರ ಮಧ್ಯೆ ಅಡ್ಡಗೋಡೆ ಕಟ್ಟಿ ‘ಒಳಗೆ - ಹೊರಗೆ’ ಎಂದು ಹೆಸರು ಕೊಡುವುದುಂಟೆ ಎಂಬ ಅವಳ ಪ್ರಶ್ನೆ ವರ್ಣ, ಜಾತಿ ಮತ್ತು ಉಪಜಾತಿಗಳಿಂದ ಕೂಡಿದ ಶ್ರೇಣೀಕೃತ ಸಮಾಜದ ಅತಾರ್ಕಿಕತೆಯ ಮೇಲೆ ಬೆಳಕು ಚೆಲ್ಲುತ್ತದೆ. ಎಲ್ಲೆಡೆ ಇರುವ ಶಿವ ಯಾರೇ ನಂಬಿ ಕರೆದರೂ ಓ ಎನ್ನುತ್ತಾನೆ ಎಂಬ ಆತ್ಮವಿಶ್ವಾಸ ಅವಳದು. ಅಧ್ಯಾತ್ಮದ ತುದಿಯನ್ನು ಮುಟ್ಟಿದ್ದ ಬೊಂತಾದೇವಿಯ ಮನಸ್ಸು ಸಮತಾಭಾವದಿಂದ ಹಾಗೂ ಸಾಮಾಜಿಕ ಕಳಕಳಿಯಿಂದ ತುಂಬಿತ್ತು ಎಂಬುದಕ್ಕೆ ಈ ವಚನ ಸಾಕ್ಷಿಯಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X