ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಬ್ರಹ್ಮಾವರ, ಜೂ.5: ವೈಯಕ್ತಿಕ ಕಾರಣದಿಂದ ಮನನೊಂದ ಬಾರಕೂರು ಹೊಸಾಳ ಗ್ರಾಮದ ನಾಗರ ಮಠ ನಿವಾಸಿ ಬೆನ್ನಿ ಡಿಸೋಜ ಎಂಬವರ ಮಗ ಜೊರೋಮ್ಡಿ ಸೋಜ್(48) ಎಂಬವರು ಜೂ.4ರಂದು ಸಂಜೆ ವೇಳೆ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ವ: ವಿಪರೀತ ಕುಡಿತದ ಚಟ ಹೊಂದಿದ್ದ ಪಿಲಾರು ಗ್ರಾಮದ ಮೈಕೋಡಿಯ ಜೆರಾಲ್ಡ್ ಜಾನ್ ಡಿಸೋಜ(64) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.4ರಂದು ಸಂಜೆ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಜೂ.5ರಂದು ನಸುಕಿನ ವೇಳೆ 1.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story