Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲಿನಲ್ಲಿ ಮಿತಿಗಿಂತ ಅಧಿಕ ಲಗೇಜ್...

ರೈಲಿನಲ್ಲಿ ಮಿತಿಗಿಂತ ಅಧಿಕ ಲಗೇಜ್ ಸಾಗಿಸಿದರೆ ಜೇಬಿಗೆ ಬೀಳಲಿದೆ ಕತ್ತರಿ !

ವಾರ್ತಾಭಾರತಿವಾರ್ತಾಭಾರತಿ5 Jun 2018 11:12 PM IST
share
ರೈಲಿನಲ್ಲಿ ಮಿತಿಗಿಂತ ಅಧಿಕ ಲಗೇಜ್ ಸಾಗಿಸಿದರೆ ಜೇಬಿಗೆ ಬೀಳಲಿದೆ ಕತ್ತರಿ !

 ಹೊಸದಿಲ್ಲಿ, ಜೂ. 5: ವಿಮಾನ ಪ್ರಯಾಣದಂತೆ, ರೈಲು ಪ್ರಯಾಣದಲ್ಲಿ ಕೂಡ ಈಗ ಮಿತಿಗಿಂತ ಅಧಿಕ ಲಗೇಜ್ ಒಯ್ಯದಂತೆ ಎಚ್ಚರ ವಹಿಸಿ. ರೈಲು ಬೋಗಿಯಲ್ಲಿ ಮಿತಿಗಿಂತ ಅಧಿಕ ಲಗೇಜ್ ಕೊಂಡೊಯ್ಯುತ್ತಿರುವ ಬಗ್ಗೆ ಅನೇಕ ದೂರುಗಳನ್ನು ಸ್ವೀಕರಿಸಿದ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ, ತನ್ನ ಮೂರು ದಶಕಗಳ ಹಳೆಯ ಸರಕು ಭತ್ಯೆ ನಿಯಮವನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲು ನಿರ್ಧರಿಸಿದೆ.

ರೈಲಿನಲ್ಲಿ ಪ್ರಯಾಣಿಸುವಾಗ ಮಿತಿಗಿಂತ ಅಧಿಕ ಲಗೇಜ್‌ನೊಂದಿಗೆ ಸಿಕ್ಕಿ ಬಿದ್ದರೆ ಈಗ ನಿರ್ಣಯಿಸಲಾಗಿರುವ ದಂಡದ ಮೊತ್ತದ ಆರು ಪಟ್ಟು ದಂಡವನ್ನು ಪ್ರಯಾಣಿಕರು ನೀಡಬೇಕಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪರಿಷ್ಕೃತ ನಿಯಮಗಳ ಪ್ರಕಾರ, ಸ್ಲೀಪರ್ ಕ್ಲಾಸ್ ಹಾಗೂ ಸೆಕೆಂಡ್ ಕ್ಲಾಸ್ ಪ್ರಯಾಣಿಕರು ಕ್ರಮವಾಗಿ 40 ಕೆ.ಜಿ. ಹಾಗೂ 35 ಕೆ.ಜಿ. ಲಗೇಜ್‌ನ್ನು ಯಾವುದೇ ಹೆಚ್ಚುವರಿ ಶುಲ್ಕ ಪಾವತಿಸದೆ ಕೊಂಡೊಯ್ಯಬಹುದು. ಕ್ರಮವಾಗಿ ಗರಿಷ್ಠ 80 ಕೆ.ಜಿ. ಹಾಗೂ 70 ಕೆ.ಜಿ. ಲಗೇಜ್ ಅನ್ನು ಪಾರ್ಸೆಲ್ ಕಚೇರಿಯಲ್ಲಿ ಮಿತಿಗಿಂತ ಅಧಿಕ ಲಗೇಜ್‌ನ ಶುಲ್ಕ ಪಾವತಿಸಿ ಕೊಂಡೊಯ್ಯಬಹುದು. ಅಧಿಕ ಲಗೇಜ್‌ನ ಅನ್ನು ಲಗೇಜ್ ವ್ಯಾನ್‌ಲ್ಲಿ ಹಾಕಲಾಗುತ್ತದೆ.

 ‘‘ಈ ನಿಯಮ ಈಗಾಗಲೇ ಇದೆ. ಆದರೆ, ನಾವು ಇದನ್ನು ಕಟ್ಟು ನಿಟ್ಟಾಗಿ ಜಾರಿಗೆ ತರುತ್ತಿದ್ದೇವೆ.’’ ಎಂದು ಅವರು ಹೇಳಿದ್ದಾರೆ. ‘‘ಒಂದು ವೇಳೆ ಪ್ರಯಾಣಿಕರು ಶುಲ್ಕ ವಿನಾಯಿತಿಗಿಂತ ಹೆಚ್ಚಿನ ತೂಕದ ಲಗೇಜ್ ಅನ್ನು ಕಾಯ್ದಿರಿಸದೆ ಕೊಂಡೊಯ್ಯುವುದು ಪತ್ತೆಯಾದಲ್ಲಿ ಹೆಚ್ಚುವರಿ ತೂಕದ ಲಗೇಜ್‌ಗೆ ಲಗೇಜ್ ಶುಲ್ಕದ ಆರು ಪಾಲು ದಂಡ ವಿಧಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕೆ ಹಾಗೂ ಬೋಗಿಗಳು ಲಗೇಜ್‌ಗಳಿಂದ ಕಿಕ್ಕಿರಿಯುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ರೈಲ್ವೆ ಮಂಡಳಿಯ ಮಾಹಿತಿ ಹಾಗೂ ಪ್ರಸಾರ ನಿರ್ದೇಶಕ ವೇದ್ ಪ್ರಕಾಶ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X