Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಧಾನ ಪರಿಷತ್ ನೈರುತ್ಯ ಕ್ಷೇತ್ರ...

ವಿಧಾನ ಪರಿಷತ್ ನೈರುತ್ಯ ಕ್ಷೇತ್ರ ಚುನಾವಣೆ: ದ.ಕ.ಜಿಲ್ಲೆಯ ಪದವೀಧರ ಮತದಾರರಿಗೆ ಮಾಹಿತಿಯ ಕೊರತೆ

► ಜೂನ್ 8ಕ್ಕೆ ಚುನಾವಣೆ ► 37 ಮತದಾನ ಕೇಂದ್ರಗಳು

ವರದಿ: ಹಂಝ ಮಲಾರ್ವರದಿ: ಹಂಝ ಮಲಾರ್6 Jun 2018 8:36 PM IST
share
ವಿಧಾನ ಪರಿಷತ್ ನೈರುತ್ಯ ಕ್ಷೇತ್ರ ಚುನಾವಣೆ: ದ.ಕ.ಜಿಲ್ಲೆಯ ಪದವೀಧರ ಮತದಾರರಿಗೆ ಮಾಹಿತಿಯ ಕೊರತೆ

ಮಂಗಳೂರು, ಜೂ. 6: ರಾಜ್ಯ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಜೂ.8ರಂದು ನಡೆಯುವ ಮತದಾನಕ್ಕೆ ದ.ಕ.ಜಿಲ್ಲಾಡಳಿತವು ಸಕಲ ಸಿದ್ಧತೆಯನ್ನು ನಡೆಸಿದ್ದರೂ ಕೂಡ ಬಹುತೇಕ ಪದವೀಧರರಿಗೆ ಈ ಬಗ್ಗೆ ಸ್ಪಷ್ಟ ಮಾಹಿತಿಯೇ ಇಲ್ಲ ಎಂಬ ಆರೋಪ ಕೇಳಿ ಬಂದಿದೆ. ಹೆಚ್ಚಿನ ಪದವೀಧರ ಮತದಾರರಿಗೆ ತಾವು ಎಲ್ಲಿ, ಹೇಗೆ ಮತದಾನ ಮಾಡಬೇಕು ಎಂಬುದು ಕೂಡಾ ತಿಳಿದಿಲ್ಲ. ಹಾಗಾಗಿ ಈ ಗೊಂದಲದ ಮಧ್ಯೆ ಮತದಾನ ಕೇಂದ್ರಕ್ಕೆ ತೆರಳುವ ಬದಲು ಮತದಾನ ಪ್ರಕ್ರಿಯೆಯಿಂದ ದೂರ ಸರಿಯುವುದೇ ಲೇಸು ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಇದರಿಂದ ನೈರುತ್ಯ ಪದವೀಧರ ಕ್ಷೇತ್ರದ ಮತದಾನ ಭಾಗ್ಯವು ‘ಕೆಲವೇ ಕೆಲವು’ ಪದವೀಧರರಿಗೆ ಮಾತ್ರ ಸೀಮಿತ ಎಂಬಂತಾಗಿದೆ.

ಪದವಿ ಶಿಕ್ಷಣ ಪಡೆದು ಮೂರು ವರ್ಷದ ಬಳಿಕ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬಹುದು. ಅದಕ್ಕಾಗಿ ಆಯಾ ತಾಲೂಕು ಕಚೇರಿಗೆ ತೆರಳಿ ಹೆಸರು ನೋಂದಾಯಿಸಬೇಕು. ಒಮ್ಮೆ ನೋಂದಾಯಿಸಿದ ಬಳಿಕ ಸುಮ್ಮನಿರುವಂತಿಲ್ಲ. ಪ್ರತೀ ಆರು ವರ್ಷಕ್ಕೊಮ್ಮೆ ಹೆಸರು ನೋಂದಾಯಿಸುತ್ತಿರಬೇಕು. ಆದರೆ, ಹೆಚ್ಚಿನ ಪದವೀಧರರು ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಆಸಕ್ತಿ ವಹಿಸುತ್ತಿಲ್ಲ. ಯಾಕೆಂದರೆ ಹಲವರು ಉನ್ನತ ಶಿಕ್ಷಣದ ಸೀಟು ಗಿಟ್ಟಿಸಿಕೊಳ್ಳಲು ಹೆಣಗಾಡಿದರೆ, ಇನ್ನು ಕೆಲವರು ಉದ್ಯೋಗದ ಹುಡುಕಾಟದಲ್ಲಿರುತ್ತಾರೆ. ಉದ್ಯೋಗ ಸಿಕ್ಕಿದ ಬಳಿಕ ಆ ಬಗ್ಗೆ ಆಸಕ್ತಿಯನ್ನೂ ವಹಿಸುತ್ತಿಲ್ಲ. ಇನ್ನು ಕೆಲವರಿಗೆ ಈ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಬಗ್ಗೆ ಮಾಹಿತಿಯೇ ಇರುತ್ತಿಲ್ಲ. ಇನ್ನು ಹೆಸರು ನೋಂದಾಯಿಸಿದರೂ ಕೂಡ ಚುನಾವಣೆಯ ಸಂದರ್ಭ ಎಲ್ಲಿ, ಹೇಗೆ ಮತದಾನ ಮಾಡಬೇಕು ಎಂಬುದರ ಬಗ್ಗೆಯೂ ಮಾಹಿತಿ ಇಲ್ಲ. ಪದವೀಧರರು ಕಡ್ಡಾಯವಾಗಿ ತಮ್ಮ ಹೆಸರನ್ನು ಈ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು ಮತ್ತು ಕಡ್ಡಾಯವಾಗಿ ಮತದಾನ ಮಾಡಬೇಕು ಎಂಬ ಆದೇಶ ಹೊರಡಿಸಿದರಷ್ಟೇ ಈ ಚುನಾವಣೆಗೆ ಕಾವು ಬಂದೀತು ಎಂಬ ಅಭಿಪ್ರಾಯ ವ್ಯಕ್ತವಾಗುತ್ತದೆ.

ನೈರುತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ದ.ಕ., ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯ ಎರಡು ತಾಲೂಕು ಬರುತ್ತದೆ. ಇಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ಪದವೀಧರ ಮತದಾರರು ಇದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ, ಇಲ್ಲಿ ಹೆಸರು ನೋಂದಾಯಿಸಿದವರ ಸಂಖ್ಯೆ ಕೇವಲ 62 ಸಾವಿರ ಮಾತ್ರ. ಹೀಗೆ ಹೆಸರು ನೋಂದಾಯಿಸಿದವರೂ ಕೂಡ ತಾವು ಎಲ್ಲಿಗೆ ತೆರಳಿ ಮತ ಚಲಾಯಿಸಬೇಕು, ಅಭ್ಯರ್ಥಿಗಳು ಯಾರು ಎಂಬುದರ ಬಗ್ಗೆಯೂ ಸ್ಪಷ್ಟ ಮಾಹಿತಿ ಇರುವುದಿಲ್ಲ. ಈ ಬಗ್ಗೆ ರಾಜಕೀಯ ಪಕ್ಷಗಳಾಗಲೀ, ಅಭ್ಯರ್ಥಿಗಳಾಗಲೀ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿಲ್ಲ. ಪದವೀಧರರು ಕೂಡಾ ಆ ಬಗ್ಗೆ ಆಸಕ್ತಿ ವಹಿಸುತ್ತಿಲ್ಲ. ರಾಜಕೀಯ ಪಕ್ಷಗಳ ಕಾರ್ಯಕರ್ತರು ಕೂಡಾ ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುತ್ತಿಲ್ಲ. ಹಾಗಾಗಿ ಇದು ‘ಕೆಲವೇ ಕೆಲವು’ ಮಂದಿ ಸೇರಿ ಆಯ್ಕೆ ಮಾಡುವ ಪ್ರಕ್ರಿಯೆ ಎಂಬ ಭಾವನೆಯೊಂದಿಗೆ ಮಹತ್ವವನ್ನೂ ಕಳಕೊಳ್ಳುತ್ತಿವೆ.

ಜೂ.8ರ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಶಿಕ್ಷಕರ ಕ್ಷೇತ್ರಕ್ಕೆ 14 ಹಾಗೂ ಪದವಿಧರ ಕ್ಷೇತ್ರಕ್ಕೆ 23 ಮತಗಟ್ಟೆಗಳ ಸಹಿತ 37 ಕೇಂದ್ರಗಳಲ್ಲಿ ಮತದಾನ ನಡೆಯಲಿದೆ. ಪದವಿಧರ ಕ್ಷೇತ್ರದಲ್ಲಿ 7,223 ಪುರುಷರು ಮತ್ತು 8,271 ಮಹಿಳೆಯರ ಸಹಿತ 15,494 ಮತದಾರರಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ 2,944 ಪುರುಷರು ಮತ್ತು 4,196 ಮಹಿಳೆಯರ ಸಹಿತ 7,140 ಮತದಾರರಿದ್ದಾರೆ.

ಮತಗಟ್ಟೆಯಲ್ಲಿ ನೀಡಲಾಗುವ ಬಣ್ಣದ ಸ್ಕೆಚ್ ಪೆನ್ನನ್ನು ಮಾತ್ರ ಬಳಸಬೇಕು. ಪ್ರಥಮ ಪಾಶಸ್ತ್ಯದ ಮತವನ್ನು (1) ಎನ್ನುವ ಅಂಕಿಯ ಮೂಲಕ ದಾಖಲಿಸಬೇಕು. ಉಳಿದಂತೆ 2..3..4 ಎಂದು ಇತರ ಪ್ರಾಶಸ್ತ್ಯದ ಮತ ನೀಡಲು ಅವಕಾಶವಿದೆ. ಒಂದು ಎಂದು ಅಕ್ಷರದಲ್ಲಿ ಬರೆದರೆ ಅಸಿಂಧು ವಾಗುತ್ತದೆ. ಪ್ರಥಮ ಪಾಶಸ್ತ್ಯ ಮತವನ್ನು ದಾಖಲಿಸುವುದು ಕಡ್ಡಾಯ. ಇಲ್ಲದೆ ಇದ್ದರೆ ಅಸಿಂಧುವಾಗುತ್ತದೆ. ಪ್ರಥಮ ಎಣಿಕೆಯ ಸುತ್ತಿನಲ್ಲಿ ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆ ಮಾತ್ರ ನಡೆಯುತ್ತಿದೆ. ಯಾವುದೇ ಅಭ್ಯರ್ಥಿಗೆ ನಿಗದಿ ಪಡಿಸಿದ ಕೋಟಾದಷ್ಟು ಮತಗಳು ಲಭಿಸದೆ ಇದ್ದಾಗ ಮಾತ್ರ ಎರಡನೆ ಪ್ರಾಶಸ್ತ್ಯದ ಮತಗಳ ಎಣಿಕೆ ನಡೆಯಲಿದೆ.

ಪದವೀಧರ ಕ್ಷೇತ್ರದ ಮತದಾರರಿಗೆ ಬಲಗೈಯ ತೋರು ಬೆರಳಿಗೆ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರಿಗೆ ಮತದಾನ ಕೇಂದ್ರದಲ್ಲಿ ಬಲಗೈಯ ಮಧ್ಯದ ಬೆರಳಿಗೆ ಅಳಿಸಲಾಗದ ಶಾಹಿಯನ್ನು ಹಾಕಲಾಗುತ್ತದೆ. ಮತದಾರರು ಹನ್ನೆರಡು ಗುರುತು ಪತ್ರದಲ್ಲಿ ಯಾವುದಾದರು ಒಂದನ್ನು ಮತದಾನ ಕೇಂದ್ರದಲ್ಲಿ ಹಾಜರುಪಡಿಸಬೇಕು. ಜೂನ್ 12ರಂದು ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಚುನಾವಣಾಧಿಕಾರಿಯೂ ಆದ ಪ್ರಾದೇಶಿಕ ಆಯುಕ್ತರ ಸಮ್ಮುಖದಲ್ಲಿ ಮತ ಎಣಿಕೆ ನಡೆಯಲಿದೆ.

ಕಣದಲ್ಲಿ 20 ಅಭ್ಯರ್ಥಿಗಳು

ನೈರುತ್ಯ ಪದವೀಧರ ಕ್ಷೇತ್ರದಿಂದ ಅರುಣ್ ಕುಮಾರ್-ಜೆಡಿಎಸ್, ಆಯನೂರು ಮಂಜುನಾಥ್- ಬಿಜೆಪಿ, ಎಸ್.ಪಿ. ದಿನೇಶ್- ಕಾಂಗ್ರೆಸ್, ಜಿ.ಸಿ. ಪಟೇಲ್-ಸರ್ವ ಜನತಾ ಪಾರ್ಟಿ, ಜಫರುಲ್ಲಾ ಸತ್ತಾರ್ ಖಾನ್-ಪಕ್ಷೇತರ, ಜಿ.ಎಂ. ಜಯಕುಮಾರ್-ಪಕ್ಷೇತರ, ಬಿ.ಕೆ. ಮಂಜುನಾಥ-ಪಕ್ಷೇತರ ಸಹಿತ 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಗಣೇಶ್ ಕಾರ್ಣಿಕ್- ಬಿಜೆಪಿ, ಎಸ್.ಎಲ್. ಬೋಜೆಗೌಡ- ಜೆಡಿಎಸ್, ಕೆ.ಕೆ. ಮಂಜುನಾಥ ಕುಮಾರ್ (ಮಾಸ್ಟರ್)- ಕಾಂಗ್ರೆಸ್, ಡಾ. ಅರುಣ್ ಹೊಸಕೊಪ್ಪ-ಪಕ್ಷೇತರ, ಅಲೋಶಿಯಸ್ ಡಿಸೋಜ-ಪಕ್ಷೇತರ, ಕೆ.ಬಿ. ಚಂದ್ರೋಜಿ ರಾವ್-ಪಕ್ಷೇತರ, ಡಿ.ಕೆ. ತುಳಸಪ್ಪ-ಪಕ್ಷೇತರ, ಅಂಪಾರ ನಿತ್ಯಾನಂದ ಶೆಟ್ಟಿ-ಪಕ್ಷೇತರ, ಪ್ರಭುಲಿಂಗ ಬಿ.ಆರ್.-ಪಕ್ಷೇತರ, ಬಸವರಾಜಪ್ಪಕೆ.ಸಿ. -ಪಕ್ಷೇತರ, ಎಂ. ರಮೇಶ-ಪಕ್ಷೇತರ, ರಾಜೇಂದ್ರ ಕುಮಾರ್ ಕೆ.ಪಿ. -ಪಕ್ಷೇತರ ಸಹಿತ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

37 ಮತದಾನ ಕೇಂದ್ರಗಳು

ಮುಲ್ಕಿ ಪಟ್ಟಣ ಪಂಚಾಯತ್ ಕಟ್ಟಡ, ಮೂಡುಬಿದಿರೆ ಪುರಸಭೆ ಕಟ್ಟಡ, ಸುರತ್ಕಲ್-ಗೋವಿಂದದಾಸ ಕಾಲೇಜು, ಬಜ್ಪೆ ಗ್ರಾಪಂ ಕಟ್ಟಡ, ಗುರುಪುರ ಸರಕಾರಿ ಪದವಿಪೂರ್ವ ಕಾಲೇಜು, ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜು ಮಂಗಳೂರು, ಕೊಣಾಜೆಯ ವಿಶ್ವ ಮಂಗಳಾ ಆಂಗ್ಲಮಾಧ್ಯಮ ಶಾಲೆ, ಬಬ್ಬುಕಟ್ಟೆಯ ದ.ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆ, ಬಿ.ಸಿ.ರೋಡ್‌ನ ಮಿನಿ ವಿಧಾನ ಸೌಧ ಕಟ್ಟಡ, ಬೆಳ್ತಂಗಡಿ ತಾಲೂಕು ಕಚೇರಿ, ಪುತ್ತೂರು ತಾಪಂ ಕಚೇರಿ, ಸುಳ್ಯ ತಾಲೂಕು ಕಚೇರಿ, ಪಂಜ ನಾಡ ಕಚೇರಿ

share
ವರದಿ: ಹಂಝ ಮಲಾರ್
ವರದಿ: ಹಂಝ ಮಲಾರ್
Next Story
X