Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಕಾಲ ಸಿನೆಮಾ ಪ್ರದರ್ಶನ...

ರಾಜ್ಯದಲ್ಲಿ ಕಾಲ ಸಿನೆಮಾ ಪ್ರದರ್ಶನ ಬಹುತೇಕ ರದ್ದು

ವಾರ್ತಾಭಾರತಿವಾರ್ತಾಭಾರತಿ7 Jun 2018 9:21 PM IST
share
ರಾಜ್ಯದಲ್ಲಿ ಕಾಲ ಸಿನೆಮಾ ಪ್ರದರ್ಶನ ಬಹುತೇಕ ರದ್ದು

ಬೆಂಗಳೂರು, ಜೂ.7: ವಿಶ್ವಾದ್ಯಂತ ರಜನಿಕಾಂತ್ ಅಭಿನಯದ ಕಾಲ ಸಿನೆಮಾ ಯಶಸ್ವಿ ಪ್ರದರ್ಶಗೊಂಡರೆ, ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಿಗದಿಗೊಂಡಿದ್ದ ರಾಜ್ಯದ ಬಹುತೇಕ ಚಿತ್ರಮಂದಿರಗಳಲ್ಲಿ ಕಾಲ ಸಿನೆಮಾ ಪ್ರದರ್ಶನ ರದ್ದುಗೊಂಡಿತು.

ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ನಟ ರಜನಿಕಾಂತ್ ರಾಜ್ಯದ ವಿರುದ್ಧವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಕನ್ನಡಪರ ಸಂಘಟನೆಗಳು ಕಳೆದ 15 ದಿನಗಳಿಂದ ಪ್ರತಿಭಟನೆ ನಡೆಸಿ, ರಾಜ್ಯದಲ್ಲಿ ಕಾಲ ಸಿನೆಮಾ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವುದಿಲ್ಲವೆಂದು ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಚಿತ್ರಮಂದಿಗಳಲ್ಲಿ ಕಾಲ ಸಿನೆಮಾ ಪ್ರದರ್ಶನಕ್ಕೆ ಅವಕಾಶ ನೀಡಿಲ್ಲ.

ರಾಜ್ಯದಲ್ಲಿ 100ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಕಾಲ ಸಿನೆಮಾದ ಬಿಡುಗಡೆ ನಿಗದಿಯಾಗಿತ್ತು. ಈ ಸಲುವಾಗಿ ಎಲ್ಲ ಚಿತ್ರ ಮಂದಿರಗಳಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಆದರೆ, ಚಿತ್ರಮಂದಿರಗಳು ಮತ್ತು ಮಾಲ್‌ಗಳ ಬಳಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ, ಕಾಲ ಸಿನೆಮಾ ಪ್ರದರ್ಶನ ಮಾಡಬಾರದು. ಹಾಗೂ ರಜನಿಕಾಂತ್ ಅಭಿಮಾನಿಗಳಲ್ಲಿ ಚಿತ್ರ ವೀಕ್ಷಿಸಬೇಡಿ ಎಂದು ಮನವಿ ಮಾಡಿದರು.

ಮಲ್ಲೇಶ್ವರದ ಮಂತ್ರಿ ಮಾಲ್, ವಿವೇಕನಗರದ ಬಾಲಾಜಿ ಚಿತ್ರ ಮಂದಿರ, ಓರಿಯನ್ ಮಾಲ್, ಗೋಪಾಲನ್ ಮಾಲ್‌ಗಳಲ್ಲಿ ಚಿತ್ರ ಪ್ರದರ್ಶನ ಕಂಡಿಲ್ಲ. ಕೆಲವು ಚಿತ್ರಮಂದಿರಗಳಲ್ಲಿ ಕಾಲ ಚಿತ್ರ ಪ್ರದರ್ಶನ ಇರುವುದಿಲ್ಲ ಎಂಬ ನಾಮಫಕಲಗಳನ್ನು ಹಾಕಿದ್ದು ಕಂಡುಬಂತು.

ಪ್ರತಿಭಟನೆ: ರಜನಿಕಾಂತ್ ಅಭಿನಯದ ಕಾಲ ಚಿತ್ರದ ಬಿಡುಗಡೆ ವಿರೋಧಿಸಿ ಚಿತ್ರ ಮಂದಿರಗಳು ಮತ್ತು ಮಾಲ್‌ಗಳ ಎದುರು ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು. ಓರಯಾನ್ ಮಾಲ್ ಎದುರು ಚಿತ್ರದ ವಿರುದ್ಧ ಘೋಷಣೆ ಕೂಗುತ್ತಿದ್ದ ವಾಟಾಳ್ ನಾಗರಾಜ್, ಕರವೇ ಪ್ರವೀಣ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಮಾತನಾಡಿದ ಅವರು, ಯಾವುದೆ ಕಾರಣಕ್ಕೂ ಕಾಲ ಸಿನೆಮಾ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ. ಈ ಸಂಬಂಧ ನಾವು ಜೈಲಿಗೆ ಹೋದರು ಸರಿಯೆಂದು ಎಚ್ಚರಿಕೆ ನೀಡಿದರು.

ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಮಾತನಾಡಿ, ಕರ್ನಾಟಕದ ಪೊಲೀಸರು ಇರುವುದು ಕನ್ನಡಿಗರ ರಕ್ಷಣೆಗಾಗಿಯೆ ಹೊರತು, ರಜನಿಕಾಂತ್ ಚಿತ್ರದ ರಕ್ಷಣೆಗೆ ಅಲ್ಲ. ನಾಡು, ನುಡಿಗೆ ಅಪಚಾರ ಎಸಗುವ ಯಾರೆ ಆದರೂ ಅವರ ವಿರುದ್ಧ ಹೋರಾಟ ಮಾಡುವುದು ನಮ್ಮ ಕರ್ತವ್ಯ. ಹೀಗಾಗಿ ಕಾಲ ಸಿನೆಮಾದ ವಿರುದ್ಧ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X