Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋವಾದ ಬಿಜೆಪಿ ಸರಕಾರ ಸಂವಿಧಾನವನ್ನು...

ಗೋವಾದ ಬಿಜೆಪಿ ಸರಕಾರ ಸಂವಿಧಾನವನ್ನು ಅವಮಾನಿಸುತ್ತಿದೆ: ಅಖಿಲ ಭಾರತ ಹಿಂದೂ ಸಮ್ಮೇಳನ ಆರೋಪ

ವಾರ್ತಾಭಾರತಿವಾರ್ತಾಭಾರತಿ7 Jun 2018 9:30 PM IST
share
ಗೋವಾದ ಬಿಜೆಪಿ ಸರಕಾರ ಸಂವಿಧಾನವನ್ನು ಅವಮಾನಿಸುತ್ತಿದೆ: ಅಖಿಲ ಭಾರತ ಹಿಂದೂ ಸಮ್ಮೇಳನ ಆರೋಪ

ಪೊಂಡಾ(ಗೋವಾ),ಜೂ.7: ರಾಜ್ಯದ ಬಿಜೆಪಿ ಸರಕಾರವು ಶ್ರೀರಾಮಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಅವರ ಪ್ರವೇಶವನ್ನು ನಿಷೇಧಿಸುವ ಮೂಲಕ ಸಂವಿಧಾನವನ್ನು ಅವಮಾನಿಸುತ್ತಿದೆ ಎಂದು ಇಲ್ಲಿ ನಡೆಯುತ್ತಿರುವ ಅಖಿಲ ಭಾರತ ಹಿಂದೂ ಸಮ್ಮೇಳನವು ಗುರುವಾರ ಆರೋಪಿಸಿದೆ. ಗೋವಾದ ಆರ್ಚ್ ಬಿಷಪ್ ಫಿಲಿಪೆ ನೆರಿ ಫೆರಾವೊ ಅವರು ಭಾರತೀಯ ಸಂವಿಧಾನವು ಅಪಾಯದಲ್ಲಿದೆ ಎಂದು ಇತ್ತೀಚಿಗಷ್ಟೇ ಹೇಳಿದ್ದರು.

ಭಾರತೀಯ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಚಲನವಲನದ ಹಕ್ಕನ್ನು ಖಾತರಿ ಪಡಿಸಿದೆ.ಗೋವಾದಲ್ಲಿ ಮುತಾಲಿಕ್ ಅವರ ಪ್ರವೇಶವನ್ನು ನಿಷೇಧಿಸುವ ಬಿಜೆಪಿ ನೇತೃತ್ವದ ಸರಕಾರದ ನಿರ್ಧಾರವು ಸಂವಿಧಾನದ ಅಪಮಾನವಾಗಿದೆ ಮತ್ತು ಅಖಿಲ ಭಾರತ ಹಿಂದು ಸಮ್ಮೇಳನವು ಇದನ್ನು ಸರ್ವಾನುಮತದಿಂದ ಖಂಡಿಸುತ್ತದೆ ಎಂದು ಹಿಂದು ಜನಜಾಗೃತಿ ಸಮಿತಿಯ ವಕ್ತಾರ ಚೇತನ ರಾಜಹಂಸ ಅವರು ಇಲ್ಲಿ ಹೇಳಿಕೆಯೊಂದರಲ್ಲಿ ತಿಳಿಸಿದರು.

ಜಿಲ್ಲಾಡಳಿತವು ಗೋವಾದಲ್ಲಿ ಮುತಾಲಿಕ್ ಪ್ರವೇಶವನ್ನು ಪದೇ ಪದೇ ನಿಷೇಧಿಸಿದ್ದು,ಇದನ್ನು ಅವರು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ.

ಸಂವಿಧಾನವು ಅಪಾಯದಲ್ಲಿದೆ ಎಂದು ಹೇಳಿರುವ ಆರ್ಚ್‌ಬಿಷಪ್ ರಾಜ್ಯ ರಾಜಕೀಯದಲ್ಲಿ ಸಕ್ರಿಯರಾಗುವಂತೆ ಕ್ರೈಸ್ತ ಸಮುದಾಯಕ್ಕೆ ಸೂಚಿಸಿದ್ದಾರೆ. ವಾಸ್ತವವೇನೆಂದರೆ ತಮ್ಮ ಚಟುವಟಿಕೆಗಳಿಂದ ಗೋವಾದ ಜನರು ಮತ್ತು ರಾಜ್ಯದ ಸಂಸ್ಕೃತಿಗೆ ನಿಜವಾದ ಅಪಾಯವನ್ನೊಡ್ಡಿರುವ ವಿದೇಶಿ ಪ್ರವಾಸಿಗಳ ವಿರುದ್ಧ ಅವರೆಂದಿಗೂ ಧ್ವನಿಯೆತ್ತುವದಿಲ್ಲ ಎಂದು ರಾಜಹಂಸ ತಿಳಿಸಿದರು.

ವಿವಿಧ ಹಿಂದು ಸಂಘಟನೆಗಳ ನಾಯಕರು ಮತ್ತು ರಾಜಕಾರಣಿಗಳು ವಾರ್ಷಿಕ ಅಖಿಲ ಭಾರತ ಹಿಂದು ಸಮ್ಮೇಳನದಲ್ಲಿ ಭಾಗವಹಿಸಿದ್ದು,ಭಾರತವನ್ನು ‘ಹಿಂದು ರಾಷ್ಟ್ರ’ವನ್ನಾಗಿ ಮಾಡುವ ನಿರ್ಣಯವೊಂದನ್ನು ಅದು ಗುರುವಾರ ಅಂಗೀಕರಿಸಿದೆ.

ಇತ್ತೀಚಿನ ದಿನಗಳಲ್ಲಿ ಏಕ ಸಂಸ್ಕೃತಿ ವಾದದಂತಹ ಹೊಸ ಪ್ರವೃತ್ತಿಯೊಂದು ದೇಶದಲ್ಲಿ ತಲೆಯೆತ್ತುತ್ತಿದ್ದು,ನಮ್ಮ ಆಹಾರ,ದಿರಿಸು,ಬದುಕು ಮತ್ತು ನಮ್ಮ ಆರಾಧನೆಯಲ್ಲಿಯೂ ಏಕರೂಪತೆಯನ್ನು ಅದು ಆಗ್ರಹಿಸುತ್ತಿದೆ. ಮಾನವ ಹಕ್ಕುಗಳ ಮೇಲೆ ದಾಳಿ ನಡೆಯುತ್ತಿದ್ದು, ಪ್ರಜಾಪ್ರಭುತ್ವವು ವಿನಾಶದ ಹಾದಿಯಲ್ಲಿರುವಂತಿದೆ. ವಿವಿಧ ಅಲ್ಪಸಂಖ್ಯಾತ ವರ್ಗಗಳು ತಮ್ಮ ಸುರಕ್ಷೆಯ ಬಗ್ಗೆ ಆತಂಕಗೊಂಡಿವೆ. ದೇಶದಲ್ಲಿ ಕಾನೂನಿಗೆ ಗೌರವ ಕುಸಿಯುತ್ತಿದೆ ಎಂದು ಆರ್ಚ್‌ಬಿಷಪ್ ಕ್ರೈಸ್ತ ಸಮುದಾಯಕ್ಕೆ ಬರೆದ ಪತ್ರದಲ್ಲಿ ಹೇಳಿದ್ದರು. ರಾಜ್ಯದ 15 ಲಕ್ಷ ಜನಸಂಖ್ಯೆಯಲ್ಲಿ ಕ್ರೈಸ್ತರ ಸಂಖ್ಯೆ ಶೇ.25ಕ್ಕೂ ಅಧಿಕವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X